AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಲು ಮುರಿದೇಹೋಯ್ತು’; ಡ್ರಮ್ ಬಿದ್ದು ಆಸ್ಪತ್ರೆ ಸೇರಿದ ಗೋಲ್ಡ್ ಸುರೇಶ್

ಬಿಗ್ ಬಾಸ್​ನಲ್ಲಿ ಟಾಸ್ಕ್​ಗಳನ್ನು ಆಡುವಾಗ ಹೆಚ್ಚು ಎಚ್ಚರಿಕೆ ಬೇಕು. ಸ್ವಲ್ಪ ಯಾಮಾರಿದರೂ ತೊಂದರೆ ಕಟ್ಟಿಟ್ಟ ಬುತ್ತಿ. ಈಗ ಬಿಗ್ ಬಾಸ್​ನಲ್ಲಿ ಅವಘಡ ಒಂದು ಸಂಭವಿಸಿದೆ. ಗೋಲ್ಡ್ ಸುರೇಶ್​ಗೆ ಗಾಯವಾಗಿದೆ. ‘ನನ್ನ ಕಾಲು ಮುರಿದೇ ಹೋಯ್ತು’ ಎಂದು ಸುರೇಶ್ ಅವರು ಗೋಳಾಡಿದ್ದಾರೆ.

‘ಕಾಲು ಮುರಿದೇಹೋಯ್ತು’; ಡ್ರಮ್ ಬಿದ್ದು ಆಸ್ಪತ್ರೆ ಸೇರಿದ ಗೋಲ್ಡ್ ಸುರೇಶ್
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Nov 07, 2024 | 9:01 AM

Share

ಗೋಲ್ಡ್ ಸುರೇಶ್ ಅವರು ಅಂದುಕೊಂಡಿದ್ದಕ್ಕಿಂತಲೂ ಉತ್ತಮವಾಗಿ ಬಿಗ್ ಬಾಸ್​​ನಲ್ಲಿ ಪ್ರದರ್ಶನ ನೀಡುತ್ತಾ ಇದ್ದಾರೆ. ಅವರ ಬಗ್ಗೆ ಅನೇಕರಿಗೆ ಅಸಮಾಧಾನ ಇದೆ. ಇದಕ್ಕೆ ಕಾರಣ ಅವರ ವರ್ತನೆ. ಅವರು ಸುಳ್ಳು ಹೇಳುತ್ತಾರೆ, ಮಾಡಿದ ತಪ್ಪನ್ನು ಒಪ್ಪಿಕೊಳ್ಳಲ್ಲ ಎಂಬುದು ಕೆಲವರ ಆರೋಪ. ಹೀಗಿರುವಾಗಲೇ ಬಿಗ್ ಬಾಸ್ ಮನೆಯಲ್ಲಿ ಅವರ ಆಟಕ್ಕೆ ಬ್ರೇಕ್ ಬಿದ್ದಿದೆ. ಅವರು ಪೆಟ್ಟು ಮಾಡಿಕೊಂಡು ಆಸ್ಪತ್ರೆ ಸೇರಿದ್ದಾರೆ.

ಬಿಗ್ ಬಾಸ್​ನಲ್ಲಿ ಟಾಸ್ಕ್​ಗಳನ್ನು ಆಡುವಾಗ ಹೆಚ್ಚು ಎಚ್ಚರಿಕೆ ಬೇಕು. ಸ್ವಲ್ಪ ಯಾಮಾರಿದರೂ ತೊಂದರೆ ಕಟ್ಟಿಟ್ಟ ಬುತ್ತಿ. ಈಗ ಬಿಗ್ ಬಾಸ್​ನಲ್ಲಿ ಅವಘಡ ಒಂದು ಸಂಭವಿಸಿದೆ. ಬಿಗ್ ಬಾಸ್​ನಲ್ಲಿ ನಾಲ್ಕು ತಂಡಗಳನ್ನಾಗಿ ಮಾಡಲಾಗಿತ್ತು. ಪ್ರತಿ ತಂಡಕ್ಕೆ ಒಂದು ಡ್ರಮ್ ನೀಡಲಾಗಿತ್ತು. ಅದರಲ್ಲಿ ನೀರು ಇರುತ್ತದೆ. ಈ ನೀರು ಹೊರ ಹೋಗದಂತೆ ನೋಡಿಕೊಳ್ಳಬೇಕು.

ಸುರೇಶ್ ಅವರು ಊಹಿಸದ ರೀತಿಯಲ್ಲಿ ಆ ಡ್ರಮ್ ಅವರ ಕಾಲ ಮೇಲೆ ಬಿದ್ದಿದೆ. ತಕ್ಷಣವೇ ಅವರು ನೆಲದಮೇಲೆ ಬಿದ್ದು ಹೊರಳಾಡಿದ್ದಾರೆ. ಅಷ್ಟೇ ಅಲ್ಲ, ‘ನನ್ನ ಕಾಲು ಮುರಿದೇ ಹೋಯ್ತು’ ಎಂದು ಅವರು ಗೋಳಾಡಿದ್ದಾರೆ. ಇದನ್ನು ನೋಡಿ ಮನೆ ಮಂದಿಗೆ ಶಾಕ್ ಆಗಿದೆ. ಕಾಲೇ ಮುರಿದು ಹೋದರೆ ಅವರು ಬಿಗ್ ಬಾಸ್​ನಿಂದ ಹೊರ ಹೋಗಬೇಕಾಗುತ್ತದೆಯಲ್ಲ ಎನ್ನುವ ಆತಂಕ ಅನೇಕರಿಗೆ ಉಂಟಾಯಿತು.

ಆ ಬಳಿಕ ಕೆಲವರು ಸುರೇಶ್ ಅವರ ಕಾಲನ್ನು ನೇರ ಮಾಡಲು ಪ್ರಯತ್ನಿಸಿದರು. ಆದರೆ, ಇದಕ್ಕೆ ಸುರೇಶ್ ಅವಕಾಶ ಕೊಡಲಿಲ್ಲ. ಅವರ ನೋವು ಮತ್ತಷ್ಟು ಹೆಚ್ಚಾಗಿ ನರಳುವಿಕೆಯೂ ಹೆಚ್ಚಾಯಿತು. ನಂತರ ಅವರನ್ನು ಕನ್​ಫೆಷನ್​ ರೂಂಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿಂದ ಸುರೇಶ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಣ್ಣ ಬಣ್ಣದ ಸುಳ್ಳು ಹೇಳಿದ ಸುರೇಶ್; ಆದ್ರೆ ಹನುಮಂತನ ಮುಂದೆ ನಡೆಯಲಿಲ್ಲ ಆಟ

ಸುರೇಶ್ ಕಾಲು ಮುರಿದಿದೆ ಎನ್ನುವ ಭಯದಲ್ಲಿ ಇದ್ದ ಇತರ ಸ್ಪರ್ಧಿಗಳಿಗೆ ಬಿಗ್ ಬಾಸ್ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ‘ಸುರೇಶ್ ಗಂಭೀರ ಗಾಯಗಳಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ಬಿಗ್ ಬಾಸ್ ಕಡೆಯಿಂದ ಮಾಹಿತಿ ಸಿಕ್ಕಿದೆ. ಈ ವಿಚಾರ ಕೇಳಿ ಮನೆ ಮಂದಿ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ