‘ಕಾಲು ಮುರಿದೇಹೋಯ್ತು’; ಡ್ರಮ್ ಬಿದ್ದು ಆಸ್ಪತ್ರೆ ಸೇರಿದ ಗೋಲ್ಡ್ ಸುರೇಶ್

ಬಿಗ್ ಬಾಸ್​ನಲ್ಲಿ ಟಾಸ್ಕ್​ಗಳನ್ನು ಆಡುವಾಗ ಹೆಚ್ಚು ಎಚ್ಚರಿಕೆ ಬೇಕು. ಸ್ವಲ್ಪ ಯಾಮಾರಿದರೂ ತೊಂದರೆ ಕಟ್ಟಿಟ್ಟ ಬುತ್ತಿ. ಈಗ ಬಿಗ್ ಬಾಸ್​ನಲ್ಲಿ ಅವಘಡ ಒಂದು ಸಂಭವಿಸಿದೆ. ಗೋಲ್ಡ್ ಸುರೇಶ್​ಗೆ ಗಾಯವಾಗಿದೆ. ‘ನನ್ನ ಕಾಲು ಮುರಿದೇ ಹೋಯ್ತು’ ಎಂದು ಸುರೇಶ್ ಅವರು ಗೋಳಾಡಿದ್ದಾರೆ.

‘ಕಾಲು ಮುರಿದೇಹೋಯ್ತು’; ಡ್ರಮ್ ಬಿದ್ದು ಆಸ್ಪತ್ರೆ ಸೇರಿದ ಗೋಲ್ಡ್ ಸುರೇಶ್
ಬಿಗ್ ಬಾಸ್

Updated on: Nov 07, 2024 | 9:01 AM

ಗೋಲ್ಡ್ ಸುರೇಶ್ ಅವರು ಅಂದುಕೊಂಡಿದ್ದಕ್ಕಿಂತಲೂ ಉತ್ತಮವಾಗಿ ಬಿಗ್ ಬಾಸ್​​ನಲ್ಲಿ ಪ್ರದರ್ಶನ ನೀಡುತ್ತಾ ಇದ್ದಾರೆ. ಅವರ ಬಗ್ಗೆ ಅನೇಕರಿಗೆ ಅಸಮಾಧಾನ ಇದೆ. ಇದಕ್ಕೆ ಕಾರಣ ಅವರ ವರ್ತನೆ. ಅವರು ಸುಳ್ಳು ಹೇಳುತ್ತಾರೆ, ಮಾಡಿದ ತಪ್ಪನ್ನು ಒಪ್ಪಿಕೊಳ್ಳಲ್ಲ ಎಂಬುದು ಕೆಲವರ ಆರೋಪ. ಹೀಗಿರುವಾಗಲೇ ಬಿಗ್ ಬಾಸ್ ಮನೆಯಲ್ಲಿ ಅವರ ಆಟಕ್ಕೆ ಬ್ರೇಕ್ ಬಿದ್ದಿದೆ. ಅವರು ಪೆಟ್ಟು ಮಾಡಿಕೊಂಡು ಆಸ್ಪತ್ರೆ ಸೇರಿದ್ದಾರೆ.

ಬಿಗ್ ಬಾಸ್​ನಲ್ಲಿ ಟಾಸ್ಕ್​ಗಳನ್ನು ಆಡುವಾಗ ಹೆಚ್ಚು ಎಚ್ಚರಿಕೆ ಬೇಕು. ಸ್ವಲ್ಪ ಯಾಮಾರಿದರೂ ತೊಂದರೆ ಕಟ್ಟಿಟ್ಟ ಬುತ್ತಿ. ಈಗ ಬಿಗ್ ಬಾಸ್​ನಲ್ಲಿ ಅವಘಡ ಒಂದು ಸಂಭವಿಸಿದೆ. ಬಿಗ್ ಬಾಸ್​ನಲ್ಲಿ ನಾಲ್ಕು ತಂಡಗಳನ್ನಾಗಿ ಮಾಡಲಾಗಿತ್ತು. ಪ್ರತಿ ತಂಡಕ್ಕೆ ಒಂದು ಡ್ರಮ್ ನೀಡಲಾಗಿತ್ತು. ಅದರಲ್ಲಿ ನೀರು ಇರುತ್ತದೆ. ಈ ನೀರು ಹೊರ ಹೋಗದಂತೆ ನೋಡಿಕೊಳ್ಳಬೇಕು.

ಸುರೇಶ್ ಅವರು ಊಹಿಸದ ರೀತಿಯಲ್ಲಿ ಆ ಡ್ರಮ್ ಅವರ ಕಾಲ ಮೇಲೆ ಬಿದ್ದಿದೆ. ತಕ್ಷಣವೇ ಅವರು ನೆಲದಮೇಲೆ ಬಿದ್ದು ಹೊರಳಾಡಿದ್ದಾರೆ. ಅಷ್ಟೇ ಅಲ್ಲ, ‘ನನ್ನ ಕಾಲು ಮುರಿದೇ ಹೋಯ್ತು’ ಎಂದು ಅವರು ಗೋಳಾಡಿದ್ದಾರೆ. ಇದನ್ನು ನೋಡಿ ಮನೆ ಮಂದಿಗೆ ಶಾಕ್ ಆಗಿದೆ. ಕಾಲೇ ಮುರಿದು ಹೋದರೆ ಅವರು ಬಿಗ್ ಬಾಸ್​ನಿಂದ ಹೊರ ಹೋಗಬೇಕಾಗುತ್ತದೆಯಲ್ಲ ಎನ್ನುವ ಆತಂಕ ಅನೇಕರಿಗೆ ಉಂಟಾಯಿತು.

ಆ ಬಳಿಕ ಕೆಲವರು ಸುರೇಶ್ ಅವರ ಕಾಲನ್ನು ನೇರ ಮಾಡಲು ಪ್ರಯತ್ನಿಸಿದರು. ಆದರೆ, ಇದಕ್ಕೆ ಸುರೇಶ್ ಅವಕಾಶ ಕೊಡಲಿಲ್ಲ. ಅವರ ನೋವು ಮತ್ತಷ್ಟು ಹೆಚ್ಚಾಗಿ ನರಳುವಿಕೆಯೂ ಹೆಚ್ಚಾಯಿತು. ನಂತರ ಅವರನ್ನು ಕನ್​ಫೆಷನ್​ ರೂಂಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿಂದ ಸುರೇಶ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಣ್ಣ ಬಣ್ಣದ ಸುಳ್ಳು ಹೇಳಿದ ಸುರೇಶ್; ಆದ್ರೆ ಹನುಮಂತನ ಮುಂದೆ ನಡೆಯಲಿಲ್ಲ ಆಟ

ಸುರೇಶ್ ಕಾಲು ಮುರಿದಿದೆ ಎನ್ನುವ ಭಯದಲ್ಲಿ ಇದ್ದ ಇತರ ಸ್ಪರ್ಧಿಗಳಿಗೆ ಬಿಗ್ ಬಾಸ್ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ‘ಸುರೇಶ್ ಗಂಭೀರ ಗಾಯಗಳಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ಬಿಗ್ ಬಾಸ್ ಕಡೆಯಿಂದ ಮಾಹಿತಿ ಸಿಕ್ಕಿದೆ. ಈ ವಿಚಾರ ಕೇಳಿ ಮನೆ ಮಂದಿ ಖುಷಿಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us