AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆದ ಮೇಲೂ ದಿವ್ಯಾಗೆ ಮಂಜು ಮೇಲಿನ ಭಾವನೆ ಬದಲಾಗಿಲ್ಲ; ಇಲ್ಲಿದೆ ವಿಡಿಯೋ ಸಾಕ್ಷಿ

ದಿವ್ಯಾ ಸುರೇಶ್​ ಎಲಿಮಿನೇಟ್​ ಆಗಿ ಬಿಗ್​ ಬಾಸ್​ ಮನೆಯಿಂದ ಹೊರಬಂದ ಮೇಲೂ ಮಂಜು ಪಾವಗಡ ಬಗ್ಗೆ ಅವರು ಆತ್ಮೀಯ ಭಾವವನ್ನೇ ಇಟ್ಟುಕೊಂಡಿದ್ದಾರೆ. ಮಂಜು ಬಿಗ್​ ಬಾಸ್​ ಗೆಲ್ಲಲಿ ಎಂಬ ಆಶಯದಿಂದ ಸೋಶಿಯಲ್​ ಮೀಡಿಯಾದಲ್ಲಿ ದಿವ್ಯಾ ಪ್ರಚಾರ ಮಾಡುತ್ತಿದ್ದಾರೆ.

ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆದ ಮೇಲೂ ದಿವ್ಯಾಗೆ ಮಂಜು ಮೇಲಿನ ಭಾವನೆ ಬದಲಾಗಿಲ್ಲ; ಇಲ್ಲಿದೆ ವಿಡಿಯೋ ಸಾಕ್ಷಿ
ದಿವ್ಯಾ ಸುರೇಶ್ ಮತ್ತು ಮಂಜು ಪಾವಗಡ
TV9 Web
| Edited By: |

Updated on: Aug 05, 2021 | 4:47 PM

Share

ಕೆಲವೇ ದಿನಗಳಲ್ಲಿ ಬಿಗ್​ ಬಾಸ್ (Bigg Boss)​ ಫಿನಾಲೆ ಬರಲಿದೆ. ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಟ್ರೋಫಿ ಯಾರಿಗೆ ಸಿಗಲಿದೆ ಎಂಬ ಕೌತುಕ ಈಗ ನಿರ್ಮಾಣ ಆಗಿದೆ. ಮಂಜು ಪಾವಗಡ, ಅರವಿಂದ್​ ಕೆ.ಪಿ. ದಿವ್ಯಾ ಉರುಡುಗ, ಪ್ರಶಾಂತ್​ ಸಂಬರಗಿ ಮತ್ತು ವೈಷ್ಣವಿ ಗೌಡ ಅವರು ಫಿನಾಲೆಗೆ ತಲುಪಿದ್ದಾರೆ. ಬಿಗ್​ ಬಾಸ್​ ಮನೆಯಿಂದ ಕೊನೆಯದಾಗಿ ಎಲಿಮಿನೇಟ್​ ಆದ ದಿವ್ಯಾ ಸುರೇಶ್​ (Divya Suresh) ಅವರು ಮಂಜು ಪಾವಗಡ (Manju Pavagada) ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ದಯವಿಟ್ಟು ಮಂಜುಗೆ ವೋಟ್​ ಮಾಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

‘ನನ್ನ ಮಂಜು ಗ್ರ್ಯಾಂಡ್​ ಫಿನಾಲೆ ತಲುಪಿದ್ದಾರೆ. ಅವರು ನನ್ನ ಕ್ಲೋಸ್​ ಫ್ರೆಂಡ್​. ಮೊದಲಿನಿಂದಲೂ ಮಂಜು ಎಷ್ಟು ಮನರಂಜನೆ ನೀಡುತ್ತಿದ್ದರು ಎಂಬುದು ನಿಮಗೆಲ್ಲರಿಗೂ ಗೊತ್ತು. ಎಲ್ಲರನ್ನೂ ನಗಿಸಿದ್ದಾರೆ. ಟಾಸ್ಕ್​ಗಳನ್ನೂ ಚೆನ್ನಾಗಿ ಮಾಡಿದ್ದಾರೆ. ಅವರು ಬಿಗ್​ ಬಾಸ್​ ಗೆಲ್ಲಬೇಕು ಎಂದರೆ ನಿಮ್ಮೆಲ್ಲರ ವೋಟ್​ ತುಂಬಾ ಮುಖ್ಯವಾಗುತ್ತದೆ’ ಎಂದು ದಿವ್ಯಾ ಸುರೇಶ್​ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯೊಳಗೆ ಇದ್ದಾಗ ದಿವ್ಯಾ ಸುರೇಶ್​ ಮತ್ತು ಮಂಜು ನಡುವೆ ಬಹಳ ಆತ್ಮೀಯತೆ ಇತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಇಬ್ಬರೂ ಸದಾ ಕಾಲ ಜೊತೆಯಾಗಿಯೇ ಇರುತ್ತಿದ್ದರು. ಆದರೆ ಎರಡನೇ ಇನ್ನಿಂಗ್ಸ್​ನಲ್ಲಿ ಯಾಕೋ ಇಬ್ಬರ ನಡುವೆ ಸಣ್ಣ ಅಂತರ ಸೃಷ್ಟಿ ಆಗಿತ್ತು. ಹಾಗಿದ್ದರೂ ಕೊನೇ ಸಮಯದಲ್ಲಿ ಮಂಜು ಬಗ್ಗೆ ಮನಸಾರೆ ಮೆಚ್ಚುಗೆಯ ಮಾತುಗಳನ್ನು ದಿವ್ಯಾ ಸುರೇಶ್​ ಹೇಳಿದ್ದರು. ಬಿಗ್​ ಬಾಸ್​ ಬಳಿ ಮನವಿ ಮಾಡಿಕೊಂಡು ವಿಶೇಷ ಕೇಕ್​ ತರಿಸಿ, ಮಂಜು ಜೊತೆ ಅವರು ಫ್ರೆಂಡ್​ಶಿಪ್​ ಡೇ ಸೆಲೆಬ್ರೇಟ್​ ಮಾಡಿದ್ದರು.

ದಿವ್ಯಾ ಸುರೇಶ್​ ಎಲಿಮಿನೇಟ್​ ಆಗಿ ಬಿಗ್​ ಬಾಸ್​ ಮನೆಯಿಂದ ಹೊರಬಂದ ಮೇಲೂ ಮಂಜು ಬಗ್ಗೆ ಅವರು ಎಂದಿನ ಆತ್ಮೀಯ ಭಾವವನ್ನೇ ಇಟ್ಟುಕೊಂಡಿದ್ದಾರೆ. ಮಂಜು ಬಿಗ್​ ಬಾಸ್​ ಗೆಲ್ಲಲಿ ಎಂಬ ಆಶಯದಿಂದ ಸೋಶಿಯಲ್​ ಮೀಡಿಯಾದಲ್ಲಿ ದಿವ್ಯಾ ಪ್ರಚಾರ ಮಾಡುತ್ತಿದ್ದಾರೆ. ‘ಪ್ಲೀಸ್​ ಎಲ್ಲರೂ ವೋಟ್​ ಮಾಡಿ. ನೀವು ಒಂದು ದಿನಕ್ಕೆ 99 ವೋಟ್​ ಹಾಕಬಹುದು. ಬಿಗ್​ ಬಾಸ್​ ಗೆಲ್ಲಲು ಅವರೇ ಹೆಚ್ಚು ಸಮರ್ಥ ವ್ಯಕ್ತಿ ಅಂತ ನನಗೆ ಅನಿಸುತ್ತದೆ’ ಎಂದು ದಿವ್ಯಾ ಹೇಳಿದ್ದಾರೆ. ‘ಮಂಜ ಐ ಮಿಸ್​ ಯೂ ಸೋ ಮಚ್​. ಗೆದ್ದು ಬಾ. ನೀನು ಗೆಲ್ಲುತ್ತೀಯ ಅಂತ ನನಗೆ ಕಾನ್ಫಿಡೆನ್ಸ್​ ಇದೆ’ ಆತ್ಮೀಯ ಗೆಳಯನಿಗೆ ದಿವ್ಯಾ ಹಾರೈಸಿದ್ದಾರೆ.

ಇದನ್ನೂ ಓದಿ:

ದೊಡ್ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ದಿವ್ಯಾ ಸುರೇಶ್​ ಆಸೆ ಈಡೇರಿಸಿದ ಬಿಗ್​ ಬಾಸ್

‘ಅರವಿಂದ್ ಬೈಕ್​ ಮಿಸ್​ ಹೊಡೆಯುತ್ತಿದೆ, ಫಿನಾಲೆ ಗೆಲ್ಲೋದು ಮಂಜು ಪಾವಗಡ’

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?