ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆದ ಮೇಲೂ ದಿವ್ಯಾಗೆ ಮಂಜು ಮೇಲಿನ ಭಾವನೆ ಬದಲಾಗಿಲ್ಲ; ಇಲ್ಲಿದೆ ವಿಡಿಯೋ ಸಾಕ್ಷಿ

ದಿವ್ಯಾ ಸುರೇಶ್​ ಎಲಿಮಿನೇಟ್​ ಆಗಿ ಬಿಗ್​ ಬಾಸ್​ ಮನೆಯಿಂದ ಹೊರಬಂದ ಮೇಲೂ ಮಂಜು ಪಾವಗಡ ಬಗ್ಗೆ ಅವರು ಆತ್ಮೀಯ ಭಾವವನ್ನೇ ಇಟ್ಟುಕೊಂಡಿದ್ದಾರೆ. ಮಂಜು ಬಿಗ್​ ಬಾಸ್​ ಗೆಲ್ಲಲಿ ಎಂಬ ಆಶಯದಿಂದ ಸೋಶಿಯಲ್​ ಮೀಡಿಯಾದಲ್ಲಿ ದಿವ್ಯಾ ಪ್ರಚಾರ ಮಾಡುತ್ತಿದ್ದಾರೆ.

ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆದ ಮೇಲೂ ದಿವ್ಯಾಗೆ ಮಂಜು ಮೇಲಿನ ಭಾವನೆ ಬದಲಾಗಿಲ್ಲ; ಇಲ್ಲಿದೆ ವಿಡಿಯೋ ಸಾಕ್ಷಿ
ದಿವ್ಯಾ ಸುರೇಶ್ ಮತ್ತು ಮಂಜು ಪಾವಗಡ
Follow us
| Updated By: ಮದನ್​ ಕುಮಾರ್​

Updated on: Aug 05, 2021 | 4:47 PM

ಕೆಲವೇ ದಿನಗಳಲ್ಲಿ ಬಿಗ್​ ಬಾಸ್ (Bigg Boss)​ ಫಿನಾಲೆ ಬರಲಿದೆ. ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಟ್ರೋಫಿ ಯಾರಿಗೆ ಸಿಗಲಿದೆ ಎಂಬ ಕೌತುಕ ಈಗ ನಿರ್ಮಾಣ ಆಗಿದೆ. ಮಂಜು ಪಾವಗಡ, ಅರವಿಂದ್​ ಕೆ.ಪಿ. ದಿವ್ಯಾ ಉರುಡುಗ, ಪ್ರಶಾಂತ್​ ಸಂಬರಗಿ ಮತ್ತು ವೈಷ್ಣವಿ ಗೌಡ ಅವರು ಫಿನಾಲೆಗೆ ತಲುಪಿದ್ದಾರೆ. ಬಿಗ್​ ಬಾಸ್​ ಮನೆಯಿಂದ ಕೊನೆಯದಾಗಿ ಎಲಿಮಿನೇಟ್​ ಆದ ದಿವ್ಯಾ ಸುರೇಶ್​ (Divya Suresh) ಅವರು ಮಂಜು ಪಾವಗಡ (Manju Pavagada) ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ದಯವಿಟ್ಟು ಮಂಜುಗೆ ವೋಟ್​ ಮಾಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

‘ನನ್ನ ಮಂಜು ಗ್ರ್ಯಾಂಡ್​ ಫಿನಾಲೆ ತಲುಪಿದ್ದಾರೆ. ಅವರು ನನ್ನ ಕ್ಲೋಸ್​ ಫ್ರೆಂಡ್​. ಮೊದಲಿನಿಂದಲೂ ಮಂಜು ಎಷ್ಟು ಮನರಂಜನೆ ನೀಡುತ್ತಿದ್ದರು ಎಂಬುದು ನಿಮಗೆಲ್ಲರಿಗೂ ಗೊತ್ತು. ಎಲ್ಲರನ್ನೂ ನಗಿಸಿದ್ದಾರೆ. ಟಾಸ್ಕ್​ಗಳನ್ನೂ ಚೆನ್ನಾಗಿ ಮಾಡಿದ್ದಾರೆ. ಅವರು ಬಿಗ್​ ಬಾಸ್​ ಗೆಲ್ಲಬೇಕು ಎಂದರೆ ನಿಮ್ಮೆಲ್ಲರ ವೋಟ್​ ತುಂಬಾ ಮುಖ್ಯವಾಗುತ್ತದೆ’ ಎಂದು ದಿವ್ಯಾ ಸುರೇಶ್​ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯೊಳಗೆ ಇದ್ದಾಗ ದಿವ್ಯಾ ಸುರೇಶ್​ ಮತ್ತು ಮಂಜು ನಡುವೆ ಬಹಳ ಆತ್ಮೀಯತೆ ಇತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಇಬ್ಬರೂ ಸದಾ ಕಾಲ ಜೊತೆಯಾಗಿಯೇ ಇರುತ್ತಿದ್ದರು. ಆದರೆ ಎರಡನೇ ಇನ್ನಿಂಗ್ಸ್​ನಲ್ಲಿ ಯಾಕೋ ಇಬ್ಬರ ನಡುವೆ ಸಣ್ಣ ಅಂತರ ಸೃಷ್ಟಿ ಆಗಿತ್ತು. ಹಾಗಿದ್ದರೂ ಕೊನೇ ಸಮಯದಲ್ಲಿ ಮಂಜು ಬಗ್ಗೆ ಮನಸಾರೆ ಮೆಚ್ಚುಗೆಯ ಮಾತುಗಳನ್ನು ದಿವ್ಯಾ ಸುರೇಶ್​ ಹೇಳಿದ್ದರು. ಬಿಗ್​ ಬಾಸ್​ ಬಳಿ ಮನವಿ ಮಾಡಿಕೊಂಡು ವಿಶೇಷ ಕೇಕ್​ ತರಿಸಿ, ಮಂಜು ಜೊತೆ ಅವರು ಫ್ರೆಂಡ್​ಶಿಪ್​ ಡೇ ಸೆಲೆಬ್ರೇಟ್​ ಮಾಡಿದ್ದರು.

ದಿವ್ಯಾ ಸುರೇಶ್​ ಎಲಿಮಿನೇಟ್​ ಆಗಿ ಬಿಗ್​ ಬಾಸ್​ ಮನೆಯಿಂದ ಹೊರಬಂದ ಮೇಲೂ ಮಂಜು ಬಗ್ಗೆ ಅವರು ಎಂದಿನ ಆತ್ಮೀಯ ಭಾವವನ್ನೇ ಇಟ್ಟುಕೊಂಡಿದ್ದಾರೆ. ಮಂಜು ಬಿಗ್​ ಬಾಸ್​ ಗೆಲ್ಲಲಿ ಎಂಬ ಆಶಯದಿಂದ ಸೋಶಿಯಲ್​ ಮೀಡಿಯಾದಲ್ಲಿ ದಿವ್ಯಾ ಪ್ರಚಾರ ಮಾಡುತ್ತಿದ್ದಾರೆ. ‘ಪ್ಲೀಸ್​ ಎಲ್ಲರೂ ವೋಟ್​ ಮಾಡಿ. ನೀವು ಒಂದು ದಿನಕ್ಕೆ 99 ವೋಟ್​ ಹಾಕಬಹುದು. ಬಿಗ್​ ಬಾಸ್​ ಗೆಲ್ಲಲು ಅವರೇ ಹೆಚ್ಚು ಸಮರ್ಥ ವ್ಯಕ್ತಿ ಅಂತ ನನಗೆ ಅನಿಸುತ್ತದೆ’ ಎಂದು ದಿವ್ಯಾ ಹೇಳಿದ್ದಾರೆ. ‘ಮಂಜ ಐ ಮಿಸ್​ ಯೂ ಸೋ ಮಚ್​. ಗೆದ್ದು ಬಾ. ನೀನು ಗೆಲ್ಲುತ್ತೀಯ ಅಂತ ನನಗೆ ಕಾನ್ಫಿಡೆನ್ಸ್​ ಇದೆ’ ಆತ್ಮೀಯ ಗೆಳಯನಿಗೆ ದಿವ್ಯಾ ಹಾರೈಸಿದ್ದಾರೆ.

ಇದನ್ನೂ ಓದಿ:

ದೊಡ್ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ದಿವ್ಯಾ ಸುರೇಶ್​ ಆಸೆ ಈಡೇರಿಸಿದ ಬಿಗ್​ ಬಾಸ್

‘ಅರವಿಂದ್ ಬೈಕ್​ ಮಿಸ್​ ಹೊಡೆಯುತ್ತಿದೆ, ಫಿನಾಲೆ ಗೆಲ್ಲೋದು ಮಂಜು ಪಾವಗಡ’

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್