AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್​

Divya Suresh | Manju Pavagada: ಬಿಗ್ ಬಾಸ್​ ಫಿನಾಲೆ ವೇದಿಕೆಯಲ್ಲಿ ಮದುವೆ ಬಗ್ಗೆ ಮಾತು ಬಂದಿದೆ. ‘ಆಗಲೇ ನಾನು ಮಂಜು ಅವರ ಅಪ್ಪ-ಅಮ್ಮನ ಹತ್ತಿರ ಮದುವೆ ಬಗ್ಗೆ ಮಾತನಾಡುತ್ತಿದ್ದೆ. ಮಂಜು ಮದುವೆ ಯಾವಾಗ ಮಾಡ್ತೀರ ಅಂತ ಕೇಳಿದೆ’ ಎಂದು ದಿವ್ಯಾ ಸುರೇಶ್​ ಹೇಳಿದರು.

‘ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್​
ದಿವ್ಯಾ ಸುರೇಶ್​, ಮಂಜು ಪಾವಗಡ
TV9 Web
| Edited By: |

Updated on: Aug 08, 2021 | 11:36 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆಯನ್ನು (Bigg Boss Finale) ಕಿಚ್ಚ ಸುದೀಪ್​ ಅವರು ತುಂಬಾ ಲವಲವಿಕೆಯಿಂದ ನಡೆಸಿಕೊಟ್ಟಿದ್ದಾರೆ. ಯಾರು ವಿನ್ನರ್​ ಎಂಬುದನ್ನು ತಿಳಿಸುವುದರ ಜೊತೆಗೆ ಹಲವು ವಿಚಾರಗಳು ಈ ವೇದಿಕೆಯಲ್ಲಿ ಚರ್ಚೆ ಆಗಿವೆ. ಹತ್ತು ಹಲವು ತಮಾಷೆಯ ಮಾತುಗಳ ಮೂಲಕ ಇಡೀ ವಾತಾವರಣವನ್ನು ಸುದೀಪ್​ ರಂಗಾಗಿಸಿದ್ದಾರೆ. ಈ ವೇಳೆ ಮಂಜು ಪಾವಗಡ ಮತ್ತು ಅರವಿಂದ್​ ಕೆಪಿ ಅವರ ಮದುವೆ ಬಗ್ಗೆ ಒಂದು ಪ್ರಶ್ನೆ ಎದುರಾಯಿತು. ಅದಕ್ಕೆ ಸಂಬಂಧಪಟ್ಟಂತೆ ದಿವ್ಯಾ ಸುರೇಶ್​ (Divya Suresh) ಕೂಡ ತಮ್ಮ ಅಭಿಪ್ರಾಯ ಹೇಳಿಕೊಂಡರು. ಮಂಜು (Manju Pavagada) ಮದುವೆ ಬಗ್ಗೆ ಅವರ ತಂದೆ-ತಾಯಿ ಬಳಿ ದಿವ್ಯಾ ಸುರೇಶ್​ ಮಾತನಾಡಿದ್ದಾರೆ ಎಂಬುದು ಆಗಲೇ ಗೊತ್ತಾಯಿತು.

‘ಅರವಿಂದ್​ಗಿಂತಲೂ ಮೊದಲು ಮಂಜು ಪಾವಗಡ ಮದುವೆ ಆಗುತ್ತಾರೆ. ಹೌದೋ ಅಲ್ಲವೋ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ಅದಕ್ಕೆ ಹಲವು ಉತ್ತರಗಳು ಬಂದವು. ‘ಮಂಜು ತುಂಬಾ ಕನಸುಗಳನ್ನು ಕಟ್ಟಿಕೊಂಡಿದ್ದಾರೆ. ಆ ಗುರಿಯನ್ನು ಮುಟ್ಟುವವರೆಗೂ ಅವರು ಮದುವೆ ಆಗುವುದಿಲ್ಲ’ ಎಂದು ಶಂಕರ್​ ಅಶ್ವತ್ಥ್​​ ಹೇಳಿದರು. ಆ ಮಾತಿಗೆ ರಾಜೀವ್​ ಕೂಡ ಧ್ವನಿಗೂಡಿಸಿದರು. ‘ಮಂಜುಗೆ ಈಗಾಗಲೇ ಅವರ ಅಪ್ಪ-ಅಮ್ಮ ಒಂದು ಹುಡುಗಿಯನ್ನು ಫಿಕ್ಸ್​ ಮಾಡಿದ್ದಾರೆ ಅನಿಸುತ್ತದೆ. ಹಾಗಾಗಿ ಮಂಜು ಬೇಗ ಮದುವೆ ಆಗುತ್ತಾರೆ’ ಎಂದು ರಘು ಗೌಡ ಹೇಳಿದರು.

ಈ ವೇಳೆ ದಿವ್ಯಾ ಮಾತು ಗಮನ ಸೆಳೆಯಿತು. ‘ಆಗಲೇ ನಾನು ಮಂಜು ಅವರ ಅಪ್ಪ-ಅಮ್ಮನ ಹತ್ತಿರ ಮದುವೆ ಬಗ್ಗೆ ಮಾತನಾಡುತ್ತಿದ್ದೆ. ಮಂಜು ಮದುವೆ ಯಾವಾಗ ಮಾಡ್ತೀರ ಅಂತ ಕೇಳಿದೆ. ಅವನು ಆಡ್ತಾ ಇರೋದು ನೋಡಿದರೆ ಬಿಗ್​ ಬಾಸ್​ನಿಂದ ಹೊರಬಂದ ತಕ್ಷಣ ಮದುವೆ ಆಗ್ತಾನೆ ಅನಿಸುತ್ತೆ ಅಂದ್ರು. ಮದುವೆ ಆಗ್ಬೇಕು ಅಂತ ಆಗಾಗ ಹೇಳ್ತಾ ಇರೋದರಿಂದ ತಕ್ಷಣ ಮದುವೆ ಆಗಬಹುದು ಎನಿಸುತ್ತದೆ’ ಎಂದು ದಿವ್ಯಾ ಸುರೇಶ್​ ಹೇಳಿದರು.

ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನವೂ ದಿವ್ಯಾ ಸುರೇಶ್​ ಮತ್ತು ಮಂಜು ಪಾವಗಡ ನಡುವೆ ಒಂದು ರೀತಿಯ ಆತ್ಮೀಯತೆ ಇತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಇಬ್ಬರೂ ತುಂಬಾ ಆಪ್ತವಾಗಿ ನಡೆದುಕೊಳ್ಳುತ್ತಿದ್ದರು. ಪರಸ್ಪರ ಹೆಚ್ಚು ಸಮಯ ಜೊತೆಯಾಗಿ ಕಳೆಯುತ್ತಿದ್ದರು. ಅದು ಕೆಲವರಿಂದ ಟೀಕೆಗೂ ಒಳಗಾಯಿತು. ಸೆಕೆಂಡ್​ ಇನ್ನಿಂಗ್ಸ್​ ಮುಗಿಯುವಾಗ ದಿವ್ಯಾ ಅವರು ‘ಮಂಜು ನನ್ನ ಬೆಸ್ಟ್​ ಫ್ರೆಂಡ್​’ ಎಂದು ಹೇಳಿದ್ದು ಮಾತ್ರವಲ್ಲದೇ ಬಿಗ್​ ಬಾಸ್​ ಬಳಿ ಮನವಿ ಮಾಡಿಕೊಂಡು ವಿಶೇಷ ಕೇಕ್​ ತರಿಸಿ ಫ್ರೆಂಡ್​ಶಿಪ್​ ಡೇ ಆಚರಿಸಿದ್ದರು.

ಇದನ್ನೂ ಓದಿ:

Bigg Boss Finale: ಬಿಗ್​ ಬಾಸ್​ನಿಂದ ದಿವ್ಯಾ ಉರುಡುಗ ಔಟ್​; ಆಪ್ತ ಗೆಳತಿಯನ್ನೇ ಹಿಂದಿಕ್ಕಿದ ಅರವಿಂದ್​​ ಕೆಪಿ

‘ಅಂದು ನನ್ನ ಜೀವನ ಮುಗಿಯಿತು ಅಂದುಕೊಂಡಿದ್ದೆ’; ಭೀಕರ ಅಪಘಾತ ನೆನಪಿಸಿಕೊಂಡ ಮಂಜು ಪಾವಗಡ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್