AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್​

Divya Suresh | Manju Pavagada: ಬಿಗ್ ಬಾಸ್​ ಫಿನಾಲೆ ವೇದಿಕೆಯಲ್ಲಿ ಮದುವೆ ಬಗ್ಗೆ ಮಾತು ಬಂದಿದೆ. ‘ಆಗಲೇ ನಾನು ಮಂಜು ಅವರ ಅಪ್ಪ-ಅಮ್ಮನ ಹತ್ತಿರ ಮದುವೆ ಬಗ್ಗೆ ಮಾತನಾಡುತ್ತಿದ್ದೆ. ಮಂಜು ಮದುವೆ ಯಾವಾಗ ಮಾಡ್ತೀರ ಅಂತ ಕೇಳಿದೆ’ ಎಂದು ದಿವ್ಯಾ ಸುರೇಶ್​ ಹೇಳಿದರು.

‘ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್​
ದಿವ್ಯಾ ಸುರೇಶ್​, ಮಂಜು ಪಾವಗಡ
TV9 Web
| Edited By: |

Updated on: Aug 08, 2021 | 11:36 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆಯನ್ನು (Bigg Boss Finale) ಕಿಚ್ಚ ಸುದೀಪ್​ ಅವರು ತುಂಬಾ ಲವಲವಿಕೆಯಿಂದ ನಡೆಸಿಕೊಟ್ಟಿದ್ದಾರೆ. ಯಾರು ವಿನ್ನರ್​ ಎಂಬುದನ್ನು ತಿಳಿಸುವುದರ ಜೊತೆಗೆ ಹಲವು ವಿಚಾರಗಳು ಈ ವೇದಿಕೆಯಲ್ಲಿ ಚರ್ಚೆ ಆಗಿವೆ. ಹತ್ತು ಹಲವು ತಮಾಷೆಯ ಮಾತುಗಳ ಮೂಲಕ ಇಡೀ ವಾತಾವರಣವನ್ನು ಸುದೀಪ್​ ರಂಗಾಗಿಸಿದ್ದಾರೆ. ಈ ವೇಳೆ ಮಂಜು ಪಾವಗಡ ಮತ್ತು ಅರವಿಂದ್​ ಕೆಪಿ ಅವರ ಮದುವೆ ಬಗ್ಗೆ ಒಂದು ಪ್ರಶ್ನೆ ಎದುರಾಯಿತು. ಅದಕ್ಕೆ ಸಂಬಂಧಪಟ್ಟಂತೆ ದಿವ್ಯಾ ಸುರೇಶ್​ (Divya Suresh) ಕೂಡ ತಮ್ಮ ಅಭಿಪ್ರಾಯ ಹೇಳಿಕೊಂಡರು. ಮಂಜು (Manju Pavagada) ಮದುವೆ ಬಗ್ಗೆ ಅವರ ತಂದೆ-ತಾಯಿ ಬಳಿ ದಿವ್ಯಾ ಸುರೇಶ್​ ಮಾತನಾಡಿದ್ದಾರೆ ಎಂಬುದು ಆಗಲೇ ಗೊತ್ತಾಯಿತು.

‘ಅರವಿಂದ್​ಗಿಂತಲೂ ಮೊದಲು ಮಂಜು ಪಾವಗಡ ಮದುವೆ ಆಗುತ್ತಾರೆ. ಹೌದೋ ಅಲ್ಲವೋ’ ಎಂದು ಸುದೀಪ್​ ಪ್ರಶ್ನೆ ಕೇಳಿದರು. ಅದಕ್ಕೆ ಹಲವು ಉತ್ತರಗಳು ಬಂದವು. ‘ಮಂಜು ತುಂಬಾ ಕನಸುಗಳನ್ನು ಕಟ್ಟಿಕೊಂಡಿದ್ದಾರೆ. ಆ ಗುರಿಯನ್ನು ಮುಟ್ಟುವವರೆಗೂ ಅವರು ಮದುವೆ ಆಗುವುದಿಲ್ಲ’ ಎಂದು ಶಂಕರ್​ ಅಶ್ವತ್ಥ್​​ ಹೇಳಿದರು. ಆ ಮಾತಿಗೆ ರಾಜೀವ್​ ಕೂಡ ಧ್ವನಿಗೂಡಿಸಿದರು. ‘ಮಂಜುಗೆ ಈಗಾಗಲೇ ಅವರ ಅಪ್ಪ-ಅಮ್ಮ ಒಂದು ಹುಡುಗಿಯನ್ನು ಫಿಕ್ಸ್​ ಮಾಡಿದ್ದಾರೆ ಅನಿಸುತ್ತದೆ. ಹಾಗಾಗಿ ಮಂಜು ಬೇಗ ಮದುವೆ ಆಗುತ್ತಾರೆ’ ಎಂದು ರಘು ಗೌಡ ಹೇಳಿದರು.

ಈ ವೇಳೆ ದಿವ್ಯಾ ಮಾತು ಗಮನ ಸೆಳೆಯಿತು. ‘ಆಗಲೇ ನಾನು ಮಂಜು ಅವರ ಅಪ್ಪ-ಅಮ್ಮನ ಹತ್ತಿರ ಮದುವೆ ಬಗ್ಗೆ ಮಾತನಾಡುತ್ತಿದ್ದೆ. ಮಂಜು ಮದುವೆ ಯಾವಾಗ ಮಾಡ್ತೀರ ಅಂತ ಕೇಳಿದೆ. ಅವನು ಆಡ್ತಾ ಇರೋದು ನೋಡಿದರೆ ಬಿಗ್​ ಬಾಸ್​ನಿಂದ ಹೊರಬಂದ ತಕ್ಷಣ ಮದುವೆ ಆಗ್ತಾನೆ ಅನಿಸುತ್ತೆ ಅಂದ್ರು. ಮದುವೆ ಆಗ್ಬೇಕು ಅಂತ ಆಗಾಗ ಹೇಳ್ತಾ ಇರೋದರಿಂದ ತಕ್ಷಣ ಮದುವೆ ಆಗಬಹುದು ಎನಿಸುತ್ತದೆ’ ಎಂದು ದಿವ್ಯಾ ಸುರೇಶ್​ ಹೇಳಿದರು.

ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನವೂ ದಿವ್ಯಾ ಸುರೇಶ್​ ಮತ್ತು ಮಂಜು ಪಾವಗಡ ನಡುವೆ ಒಂದು ರೀತಿಯ ಆತ್ಮೀಯತೆ ಇತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಇಬ್ಬರೂ ತುಂಬಾ ಆಪ್ತವಾಗಿ ನಡೆದುಕೊಳ್ಳುತ್ತಿದ್ದರು. ಪರಸ್ಪರ ಹೆಚ್ಚು ಸಮಯ ಜೊತೆಯಾಗಿ ಕಳೆಯುತ್ತಿದ್ದರು. ಅದು ಕೆಲವರಿಂದ ಟೀಕೆಗೂ ಒಳಗಾಯಿತು. ಸೆಕೆಂಡ್​ ಇನ್ನಿಂಗ್ಸ್​ ಮುಗಿಯುವಾಗ ದಿವ್ಯಾ ಅವರು ‘ಮಂಜು ನನ್ನ ಬೆಸ್ಟ್​ ಫ್ರೆಂಡ್​’ ಎಂದು ಹೇಳಿದ್ದು ಮಾತ್ರವಲ್ಲದೇ ಬಿಗ್​ ಬಾಸ್​ ಬಳಿ ಮನವಿ ಮಾಡಿಕೊಂಡು ವಿಶೇಷ ಕೇಕ್​ ತರಿಸಿ ಫ್ರೆಂಡ್​ಶಿಪ್​ ಡೇ ಆಚರಿಸಿದ್ದರು.

ಇದನ್ನೂ ಓದಿ:

Bigg Boss Finale: ಬಿಗ್​ ಬಾಸ್​ನಿಂದ ದಿವ್ಯಾ ಉರುಡುಗ ಔಟ್​; ಆಪ್ತ ಗೆಳತಿಯನ್ನೇ ಹಿಂದಿಕ್ಕಿದ ಅರವಿಂದ್​​ ಕೆಪಿ

‘ಅಂದು ನನ್ನ ಜೀವನ ಮುಗಿಯಿತು ಅಂದುಕೊಂಡಿದ್ದೆ’; ಭೀಕರ ಅಪಘಾತ ನೆನಪಿಸಿಕೊಂಡ ಮಂಜು ಪಾವಗಡ

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು