AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 11 Elimination: ‘ಹೋಗಿ ಬಾ ಮಗಳೇ’; ಐಶ್ವರ್ಯಾಗೆ ಬಿಗ್ ಬಾಸ್ ಭಾವುಕ ವಿದಾಯ

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಆಟದಿಂದ ಐಶ್ವರ್ಯಾ ಸಿಂಧೋಗಿ ಅವರು ಎಲಿಮಿನೇಟ್ ಆಗಿದ್ದಾರೆ. 13ನೇ ವಾರದಲ್ಲಿ ಅವರು ಬಿಗ್ ಬಾಸ್ ಶೋನಿಂದ ಹೊರಗೆ ಬಂದಿದ್ದಾರೆ. ಇಯರ್​ಎಂಡ್​ ಸಮಯದಲ್ಲೇ ಅವರು ಔಟ್ ಆಗಿದ್ದು ಬೇಸರದ ಸಂಗತಿ. ಬಿಗ್ ಬಾಸ್ ಮನೆಯಿಂದ ಹೊರಗೆ ಬರುವಾಗ ಐಶ್ವರ್ಯಾಗೆ ಭಾವುಕ ವಿದಾಯ ಹೇಳಲಾಯಿತು.

BBK 11 Elimination: ‘ಹೋಗಿ ಬಾ ಮಗಳೇ’; ಐಶ್ವರ್ಯಾಗೆ ಬಿಗ್ ಬಾಸ್ ಭಾವುಕ ವಿದಾಯ
Mokshitha Pai, Aishwarya Sindhogi
ಮದನ್​ ಕುಮಾರ್​
|

Updated on: Dec 29, 2024 | 11:19 PM

Share

ನಟಿ ಐಶ್ವರ್ಯಾ ಸಿಂಧೋಗಿ ಅವರು ಬಿಗ್ ಬಾಸ್​ ಶೋನಿಂದ ಎಲಿಮಿನೇಟ್ ಆಗಿದ್ದಾರೆ. 13 ವಾರಗಳ ಕಾಲ ಟಫ್ ಸ್ಪರ್ಧೆ ನೀಡಿದ್ದ ಅವರ ಆಟ ಇಂದು (ಡಿ.29) ಅಂತ್ಯವಾಗಿದೆ. ತಂದೆ-ತಾಯಿ ಇಲ್ಲದ ಹುಡುಗಿ ಎಂಬ ಕಾರಣಕ್ಕೆ ಐಶ್ವರ್ಯಾ ಅವರು ಆಗಾಗ ಕುಗ್ಗುತ್ತಿದ್ದರು. ಅಂಥ ಎಲ್ಲ ಸಂದರ್ಭಗಳಲ್ಲಿ ಬಿಗ್ ಬಾಸ್ ಕಡೆಯಿಂದ ಐಶ್ವರ್ಯಾಗೆ ಪ್ರೀತಿಯ ಸಂದೇಶ ಬಂದಿತ್ತು. ಅವರು ಎಲಿಮಿನೇಟ್ ಆಗುವಾಗಲೂ ಅವರಿಗೆ ಎಮೋಷನಲ್ ಆದ ಮಾತುಗಳನ್ನು ಬಿಗ್ ಬಾಸ್ ಹೇಳಿದರು. ‘ಹೋಗಿ ಬಾ ಮಗಳೇ’ ಎನ್ನುವ ಮೂಲಕ ಐಶ್ವರ್ಯಾ ಅವರನ್ನು ಬಿಗ್ ಬಾಸ್ ಇನ್ನಷ್ಟು ಎಮೋಷನಲ್ ಆಗಿಸಿದರು.

ಈ ವಾರ ಡೇಂಜರ್​ ಝೋನ್​ಲ್ಲಿ ಐಶ್ವರ್ಯಾ ಮತ್ತು ಮೋಕ್ಷಿತಾ ಇದ್ದರು. ಅಂತಿಮವಾಗಿ ಐಶ್ವರ್ಯಾ ಎಮಿಲಿನೇಟ್ ಆದರು. ಬಿಗ್ ಬಾಸ್ ಮನೆಯಿಂದ ಹೊರಗೆ ಬರುವುದಕ್ಕೂ ಮುನ್ನ ಐಶ್ವರ್ಯಾಗೆ ಒಂದು ಪತ್ರ ಬಂತು. ಆ ಪತ್ರ ಓದುತ್ತಿದ್ದಂತೆಯೇ ಅವರು ಕಣ್ಣೀರು ಹಾಕಲು ಆರಂಭಿಸಿದರು. ‘ಪತ್ರದ ಮೂಲಕ ಸುಂದರವಾಗಿ ವಿದಾಯ ಹೇಳಿದ್ದಕ್ಕೆ ಧನ್ಯವಾದಗಳು. ಅಂದು ವಾಯ್ಸ್​ ನೋಟ್​ ಕಳಿಸಿದ್ರಿ. ನಾನು ಮುದುಕಿ ಆದರೂ ಇವರೆಲ್ಲ ನನ್ನ ಕುಟುಂಬದವರಾಗಿ ಇರುತ್ತಾರೆ. 13 ವಾರ ನಾನು ಘಟಾನುಘಟಿಗಳ ಜೊತೆಗೆ ಇದ್ದು ಫೈಟ್ ಮಾಡಿದ್ದೇನೆ ಎಂಬುದಕ್ಕೆ ನನಗೆ ಹೆಮ್ಮೆ ಇದೆ. ಲವ್ ಯೂ ಬಿಗ್ ಬಾಸ್​. ಮೋಕ್ಷಿತಾ ಚೆನ್ನಾಗಿ ಆಡು. ನಿನ್ನನ್ನು ನಾನು ಫೈನಲ್​ನಲ್ಲಿ ನೋಡಬೇಕು’ ಎಂದು ಹೇಳುವ ಮೂಲಕ ಐಶ್ವರ್ಯಾ ಅವರು ಎಲ್ಲರಿಗೂ ವಿದಾಯ ಹೇಳಿದರು.

ವೇದಿಕೆಗೆ ಬಂದು ಸುದೀಪ್ ಜೊತೆ ಐಶ್ವರ್ಯಾ ಮಾತನಾಡಿದರು. ‘ಆರಂಭದಲ್ಲಿ ಇದ್ದ ಎನರ್ಜಿ ಕಡಿಮೆ ಆಯಿತು. ಅದೇ ತಪ್ಪಾಯಿತು. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಇದು ನನ್ನ ಮನೆಯೇ ಅನಿಸಿತು. ನನಗೆ ಒಂದು ಫ್ಯಾಮಿಲಿ ಸಿಕ್ಕಿದೆ. 3 ತಿಂಗಳು ನಾನು ಬಿಗ್​ ಬಾಸ್ ಮನೆಯಲ್ಲಿ ಬದುಕಿದ್ದಕ್ಕೆ ನನಗೆ ಸಾರ್ಥಕ ಎನಿಸಿದೆ. ಬಿಗ್ ಬಾಸ್ ಮನೆ ನನಗೆ ದೇವಸ್ಥಾನ. ಅದರಲ್ಲಿ ಸುದೀಪ್ ಅವರು ದೇವರ ರೀತಿ. ನನ್ನನ್ನು ಇಷ್ಟಪಡುವ ಕರ್ನಾಟಕದ ಜನತೆಗೆ ಧನ್ಯವಾದ. ಯಾರೂ ಇಲ್ಲ ಎಂಬ ಫೀಲಿಂಗ್ ಬಂದಿಲ್ಲ. ಇನ್ಮುಂದೆ ಬರುವುದೂ ಇಲ್ಲ’ ಎಂದು ಐಶ್ವರ್ಯಾ ಅವರು ಹೇಳಿದರು.

ಇದನ್ನೂ ಓದಿ: ಬಿಗ್ ಬಾಸ್ ವೇದಿಕೆಯಲ್ಲಿ ಸುದೀಪ್​ ಕಡೆಯಿಂದ ಚೈತ್ರಾಗೆ ಸಿಕ್ತು ಎಂದೂ ಮರೆಯಲಾಗದ ಗಿಫ್ಟ್

‘ನಿಮ್ಮ ಜೊತೆ ಒಂದು ಸಿನಿಮಾ ಮಾಡಬೇಕು. ಯಾವ ಪಾತ್ರವಾದರೂ ಪರವಾಗಿಲ್ಲ’ ಎಂದು ಐಶ್ವರ್ಯಾ ಅವರು ಸುದೀಪ್ ಎದುರು ತಮ್ಮ ಆಸೆಯನ್ನು ಹೇಳಿಕೊಂಡರು. ಮುಂದಿನ ದಿನಗಳಲ್ಲಿ ಅವರಿಗೆ ಅಂಥ ಅವಕಾಶ ಸಿಗುತ್ತಾ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!