AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿನ್ನರ್ ಹೆಸರು ಅಂತಿಮ ಆಗಿರುತ್ತೆ, ಇಲ್ಲಿ ಯಾವುದೂ ನಿಜವಿಲ್ಲ’; ಎಲಿಮಿನೇಟ್ ಸ್ಪರ್ಧಿಯ ಶಾಕಿಂಗ್ ಹೇಳಿಕೆ

ಮೊದಲ ದಿನ ಅನುರಾಗ್ ಅವರು ಬಿಗ್ ಬಾಸ್​ಗೆ ಬಂದರು. ಅವರು ಈಗ ಎಲಿಮಿನೇಟ್ ಆಗಿದ್ದಾರೆ. ಮಾಧ್ಯಮಗಳಿಗೆ ಸಂದರ್ಶನ ನಿಡುತ್ತಿರುವ ಅವರು ಹಲವು ಶಾಕಿಂಗ್ ಹೇಳಿಕೆ ನೀಡಿದ್ದಾರೆ. 

‘ವಿನ್ನರ್ ಹೆಸರು ಅಂತಿಮ ಆಗಿರುತ್ತೆ, ಇಲ್ಲಿ ಯಾವುದೂ ನಿಜವಿಲ್ಲ’; ಎಲಿಮಿನೇಟ್ ಸ್ಪರ್ಧಿಯ ಶಾಕಿಂಗ್ ಹೇಳಿಕೆ
ಬಿಗ್ ಬಾಸ್
Follow us
ರಾಜೇಶ್ ದುಗ್ಗುಮನೆ
|

Updated on: Jan 05, 2024 | 10:25 AM

‘ಬಿಗ್ ಬಾಸ್​’ನಲ್ಲಿ ಯಾವ ಸ್ಪರ್ಧಿ ಉಳಿಯಬೇಕು, ಯಾರು ಎಲಿಮಿನೇಟ್ ಆಗಬೇಕು ಎಂಬುದನ್ನು ನಿರ್ಧರಿಸೋದು ವೀಕ್ಷಕರು. ವೋಟಿಂಗ್ ಆಧಾರದ ಮೇಲೆ ಪ್ರತಿ ವಾರದ ಎಲಿಮಿನೇಷನ್ ನಡೆಯುತ್ತದೆ. ಆದರೆ, ಅನೇಕರಿಗೆ ಈ ಪ್ರಕ್ರಿಯೆ ಮೇಲೆ ನಂಬಿಕೆ ಇಲ್ಲ. ಈ ಕಾರಣದಿಂದಲೇ ಬಿಗ್ ಬಾಸ್ (Bigg Boss)​ ಸ್ಕ್ರಿಪ್ಟೆಡ್, ಇದು ಫೇಕ್ ಶೋ ಎಂದೆಲ್ಲ ಆರೋಪ ಹೊರಿಸಿದ್ದಿದೆ. ‘ಬಿಗ್ ಬಾಸ್ ಹಿಂದಿ ಸೀಸನ್ 17’ ಎಲಿಮಿನೇಟ್ ಸ್ಪರ್ಧಿ ಅನುರಾಗ್  ಧೋಬಾಲ್ ಇದೇ ರೀತಿಯ ಆರೋಪ ಮಾಡಿದ್ದಾರೆ.

ಮೊದಲ ದಿನ ಅನುರಾಗ್ ಅವರು ಬಿಗ್ ಬಾಸ್​ಗೆ ಬಂದರು. ಅವರು ಈಗ ಎಲಿಮಿನೇಟ್ ಆಗಿದ್ದಾರೆ. ಮಾಧ್ಯಮಗಳಿಗೆ ಸಂದರ್ಶನ ನಿಡುತ್ತಿರುವ ಅವರು ಹಲವು ಶಾಕಿಂಗ್ ಹೇಳಿಕೆ ನೀಡಿದ್ದಾರೆ.  ‘ನಾನು ಮನೆಯಲ್ಲಿ ಖಿನ್ನತೆಗೆ ಒಳಗಾಗಿದ್ದೆ. ನಿರಂತರವಾಗಿ ಅಳುತ್ತಿದೆ. ನಾನು ಮೊದಲ ದಿನದಿಂದಲೂ ಮನೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಆದರೆ, ಏನು ಮಾಡಲೇ ಇಲ್ಲ ಎನ್ನುವ ಮಾತನ್ನು ಕೇಳಬೇಕಾಯಿತು’ ಎಂದು ಬೇಸರ ಹೊರಹಾಕಿದ್ದಾರೆ ಅನುರಾಗ್.

‘ಫಿನಾಲೆಯಲ್ಲಿ ಯಾರು ಗೆಲ್ಲಬೇಕು ಅನ್ನೋದು ಮೊದಲೇ ಫಿಕ್ಸ್ ಆಗಿರುತ್ತದೆ. ತಮಗೆ ಇಷ್ಟವಾದ ಸ್ಪರ್ಧಿಗಳನ್ನು ಅವರು ಗೆಲ್ಲಿಸುತ್ತಾರೆ. ಪ್ರೇಕ್ಷಕರ ವೋಟ್ ಮೇಲೆ ಎಲಿಮಿನೇಷನ್ ನಡೆಯುವುದಿಲ್ಲ ಅನ್ನೋದು ನನಗೆ ಗೊತ್ತಾಗಿದೆ’ ಎಂದು ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಳಪೆ ಪಟ್ಟ ಪಡೆದ ಮೈಕಲ್

‘ಬಿಗ್ ಬಾಸ್ ಮನೆ ಒಳಗೆ ಹೋಗುವ ಸಂದರ್ಭದಲ್ಲಿ ಇದೊಂದು ರಿಯಾಲಿಟಿ ಶೋ ಎಂದುಕೊಂಡಿದ್ದೆ. ಆದರೆ, ಇದರಲ್ಲಿ ಯಾವುದೂ ನಿಜವಿಲ್ಲ’ ಎಂದಿದ್ದಾರೆ ಅವರು. ಈ ಮೊದಲು ಕೂಡ ಅನೇಕ ಸ್ಪರ್ಧಿಗಳು ಈ ರೀತಿಯ ಆರೋಪ ಮಾಡಿದ್ದಿದೆ. ಕನ್ನಡದಲ್ಲಿ ಒಟಿಟಿ ಹಾಗೂ ಟಿವಿ ಸೀಸನ್​ಗೆ ಬಂದಿದ್ದ ಆರ್ಯವರ್ಧನ್ ಗುರೂಜಿ ಕೂಡ ಇದೇ ರೀತಿಯ ಆರೋಪ ಮಾಡುತ್ತಾ ಬರುತ್ತಿದ್ದಾರೆ.

ಸದ್ಯ, ‘ಬಿಗ್ ಬಾಸ್ ಹಿಂದಿ ಸೀಸನ್ 17’ರಲ್ಲಿ ಮುನಾವರ್ ಫಾರೂಕಿ, ವಿಕ್ಕಿ ಜೈನ್, ಅಂಕಿತಾ ಲೋಖಂಡೆ ಮೊದಲಾದವರು ಸ್ಪರ್ಧೆಯಲ್ಲಿದ್ದಾರೆ. ಈ ತಿಂಗಳಾಂತ್ಯಕ್ಕೆ ಹಿಂದಿ ಬಿಗ್ ಬಾಸ್ ಫಿನಾಲೆ ನಡೆಯಲಿದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ