AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿನ್ನರ್ ಹೆಸರು ಅಂತಿಮ ಆಗಿರುತ್ತೆ, ಇಲ್ಲಿ ಯಾವುದೂ ನಿಜವಿಲ್ಲ’; ಎಲಿಮಿನೇಟ್ ಸ್ಪರ್ಧಿಯ ಶಾಕಿಂಗ್ ಹೇಳಿಕೆ

ಮೊದಲ ದಿನ ಅನುರಾಗ್ ಅವರು ಬಿಗ್ ಬಾಸ್​ಗೆ ಬಂದರು. ಅವರು ಈಗ ಎಲಿಮಿನೇಟ್ ಆಗಿದ್ದಾರೆ. ಮಾಧ್ಯಮಗಳಿಗೆ ಸಂದರ್ಶನ ನಿಡುತ್ತಿರುವ ಅವರು ಹಲವು ಶಾಕಿಂಗ್ ಹೇಳಿಕೆ ನೀಡಿದ್ದಾರೆ. 

‘ವಿನ್ನರ್ ಹೆಸರು ಅಂತಿಮ ಆಗಿರುತ್ತೆ, ಇಲ್ಲಿ ಯಾವುದೂ ನಿಜವಿಲ್ಲ’; ಎಲಿಮಿನೇಟ್ ಸ್ಪರ್ಧಿಯ ಶಾಕಿಂಗ್ ಹೇಳಿಕೆ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Jan 05, 2024 | 10:25 AM

Share

‘ಬಿಗ್ ಬಾಸ್​’ನಲ್ಲಿ ಯಾವ ಸ್ಪರ್ಧಿ ಉಳಿಯಬೇಕು, ಯಾರು ಎಲಿಮಿನೇಟ್ ಆಗಬೇಕು ಎಂಬುದನ್ನು ನಿರ್ಧರಿಸೋದು ವೀಕ್ಷಕರು. ವೋಟಿಂಗ್ ಆಧಾರದ ಮೇಲೆ ಪ್ರತಿ ವಾರದ ಎಲಿಮಿನೇಷನ್ ನಡೆಯುತ್ತದೆ. ಆದರೆ, ಅನೇಕರಿಗೆ ಈ ಪ್ರಕ್ರಿಯೆ ಮೇಲೆ ನಂಬಿಕೆ ಇಲ್ಲ. ಈ ಕಾರಣದಿಂದಲೇ ಬಿಗ್ ಬಾಸ್ (Bigg Boss)​ ಸ್ಕ್ರಿಪ್ಟೆಡ್, ಇದು ಫೇಕ್ ಶೋ ಎಂದೆಲ್ಲ ಆರೋಪ ಹೊರಿಸಿದ್ದಿದೆ. ‘ಬಿಗ್ ಬಾಸ್ ಹಿಂದಿ ಸೀಸನ್ 17’ ಎಲಿಮಿನೇಟ್ ಸ್ಪರ್ಧಿ ಅನುರಾಗ್  ಧೋಬಾಲ್ ಇದೇ ರೀತಿಯ ಆರೋಪ ಮಾಡಿದ್ದಾರೆ.

ಮೊದಲ ದಿನ ಅನುರಾಗ್ ಅವರು ಬಿಗ್ ಬಾಸ್​ಗೆ ಬಂದರು. ಅವರು ಈಗ ಎಲಿಮಿನೇಟ್ ಆಗಿದ್ದಾರೆ. ಮಾಧ್ಯಮಗಳಿಗೆ ಸಂದರ್ಶನ ನಿಡುತ್ತಿರುವ ಅವರು ಹಲವು ಶಾಕಿಂಗ್ ಹೇಳಿಕೆ ನೀಡಿದ್ದಾರೆ.  ‘ನಾನು ಮನೆಯಲ್ಲಿ ಖಿನ್ನತೆಗೆ ಒಳಗಾಗಿದ್ದೆ. ನಿರಂತರವಾಗಿ ಅಳುತ್ತಿದೆ. ನಾನು ಮೊದಲ ದಿನದಿಂದಲೂ ಮನೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಆದರೆ, ಏನು ಮಾಡಲೇ ಇಲ್ಲ ಎನ್ನುವ ಮಾತನ್ನು ಕೇಳಬೇಕಾಯಿತು’ ಎಂದು ಬೇಸರ ಹೊರಹಾಕಿದ್ದಾರೆ ಅನುರಾಗ್.

‘ಫಿನಾಲೆಯಲ್ಲಿ ಯಾರು ಗೆಲ್ಲಬೇಕು ಅನ್ನೋದು ಮೊದಲೇ ಫಿಕ್ಸ್ ಆಗಿರುತ್ತದೆ. ತಮಗೆ ಇಷ್ಟವಾದ ಸ್ಪರ್ಧಿಗಳನ್ನು ಅವರು ಗೆಲ್ಲಿಸುತ್ತಾರೆ. ಪ್ರೇಕ್ಷಕರ ವೋಟ್ ಮೇಲೆ ಎಲಿಮಿನೇಷನ್ ನಡೆಯುವುದಿಲ್ಲ ಅನ್ನೋದು ನನಗೆ ಗೊತ್ತಾಗಿದೆ’ ಎಂದು ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಳಪೆ ಪಟ್ಟ ಪಡೆದ ಮೈಕಲ್

‘ಬಿಗ್ ಬಾಸ್ ಮನೆ ಒಳಗೆ ಹೋಗುವ ಸಂದರ್ಭದಲ್ಲಿ ಇದೊಂದು ರಿಯಾಲಿಟಿ ಶೋ ಎಂದುಕೊಂಡಿದ್ದೆ. ಆದರೆ, ಇದರಲ್ಲಿ ಯಾವುದೂ ನಿಜವಿಲ್ಲ’ ಎಂದಿದ್ದಾರೆ ಅವರು. ಈ ಮೊದಲು ಕೂಡ ಅನೇಕ ಸ್ಪರ್ಧಿಗಳು ಈ ರೀತಿಯ ಆರೋಪ ಮಾಡಿದ್ದಿದೆ. ಕನ್ನಡದಲ್ಲಿ ಒಟಿಟಿ ಹಾಗೂ ಟಿವಿ ಸೀಸನ್​ಗೆ ಬಂದಿದ್ದ ಆರ್ಯವರ್ಧನ್ ಗುರೂಜಿ ಕೂಡ ಇದೇ ರೀತಿಯ ಆರೋಪ ಮಾಡುತ್ತಾ ಬರುತ್ತಿದ್ದಾರೆ.

ಸದ್ಯ, ‘ಬಿಗ್ ಬಾಸ್ ಹಿಂದಿ ಸೀಸನ್ 17’ರಲ್ಲಿ ಮುನಾವರ್ ಫಾರೂಕಿ, ವಿಕ್ಕಿ ಜೈನ್, ಅಂಕಿತಾ ಲೋಖಂಡೆ ಮೊದಲಾದವರು ಸ್ಪರ್ಧೆಯಲ್ಲಿದ್ದಾರೆ. ಈ ತಿಂಗಳಾಂತ್ಯಕ್ಕೆ ಹಿಂದಿ ಬಿಗ್ ಬಾಸ್ ಫಿನಾಲೆ ನಡೆಯಲಿದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..