‘ವಿನ್ನರ್ ಹೆಸರು ಅಂತಿಮ ಆಗಿರುತ್ತೆ, ಇಲ್ಲಿ ಯಾವುದೂ ನಿಜವಿಲ್ಲ’; ಎಲಿಮಿನೇಟ್ ಸ್ಪರ್ಧಿಯ ಶಾಕಿಂಗ್ ಹೇಳಿಕೆ

ಮೊದಲ ದಿನ ಅನುರಾಗ್ ಅವರು ಬಿಗ್ ಬಾಸ್​ಗೆ ಬಂದರು. ಅವರು ಈಗ ಎಲಿಮಿನೇಟ್ ಆಗಿದ್ದಾರೆ. ಮಾಧ್ಯಮಗಳಿಗೆ ಸಂದರ್ಶನ ನಿಡುತ್ತಿರುವ ಅವರು ಹಲವು ಶಾಕಿಂಗ್ ಹೇಳಿಕೆ ನೀಡಿದ್ದಾರೆ. 

‘ವಿನ್ನರ್ ಹೆಸರು ಅಂತಿಮ ಆಗಿರುತ್ತೆ, ಇಲ್ಲಿ ಯಾವುದೂ ನಿಜವಿಲ್ಲ’; ಎಲಿಮಿನೇಟ್ ಸ್ಪರ್ಧಿಯ ಶಾಕಿಂಗ್ ಹೇಳಿಕೆ
ಬಿಗ್ ಬಾಸ್
Follow us
|

Updated on: Jan 05, 2024 | 10:25 AM

‘ಬಿಗ್ ಬಾಸ್​’ನಲ್ಲಿ ಯಾವ ಸ್ಪರ್ಧಿ ಉಳಿಯಬೇಕು, ಯಾರು ಎಲಿಮಿನೇಟ್ ಆಗಬೇಕು ಎಂಬುದನ್ನು ನಿರ್ಧರಿಸೋದು ವೀಕ್ಷಕರು. ವೋಟಿಂಗ್ ಆಧಾರದ ಮೇಲೆ ಪ್ರತಿ ವಾರದ ಎಲಿಮಿನೇಷನ್ ನಡೆಯುತ್ತದೆ. ಆದರೆ, ಅನೇಕರಿಗೆ ಈ ಪ್ರಕ್ರಿಯೆ ಮೇಲೆ ನಂಬಿಕೆ ಇಲ್ಲ. ಈ ಕಾರಣದಿಂದಲೇ ಬಿಗ್ ಬಾಸ್ (Bigg Boss)​ ಸ್ಕ್ರಿಪ್ಟೆಡ್, ಇದು ಫೇಕ್ ಶೋ ಎಂದೆಲ್ಲ ಆರೋಪ ಹೊರಿಸಿದ್ದಿದೆ. ‘ಬಿಗ್ ಬಾಸ್ ಹಿಂದಿ ಸೀಸನ್ 17’ ಎಲಿಮಿನೇಟ್ ಸ್ಪರ್ಧಿ ಅನುರಾಗ್  ಧೋಬಾಲ್ ಇದೇ ರೀತಿಯ ಆರೋಪ ಮಾಡಿದ್ದಾರೆ.

ಮೊದಲ ದಿನ ಅನುರಾಗ್ ಅವರು ಬಿಗ್ ಬಾಸ್​ಗೆ ಬಂದರು. ಅವರು ಈಗ ಎಲಿಮಿನೇಟ್ ಆಗಿದ್ದಾರೆ. ಮಾಧ್ಯಮಗಳಿಗೆ ಸಂದರ್ಶನ ನಿಡುತ್ತಿರುವ ಅವರು ಹಲವು ಶಾಕಿಂಗ್ ಹೇಳಿಕೆ ನೀಡಿದ್ದಾರೆ.  ‘ನಾನು ಮನೆಯಲ್ಲಿ ಖಿನ್ನತೆಗೆ ಒಳಗಾಗಿದ್ದೆ. ನಿರಂತರವಾಗಿ ಅಳುತ್ತಿದೆ. ನಾನು ಮೊದಲ ದಿನದಿಂದಲೂ ಮನೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಆದರೆ, ಏನು ಮಾಡಲೇ ಇಲ್ಲ ಎನ್ನುವ ಮಾತನ್ನು ಕೇಳಬೇಕಾಯಿತು’ ಎಂದು ಬೇಸರ ಹೊರಹಾಕಿದ್ದಾರೆ ಅನುರಾಗ್.

‘ಫಿನಾಲೆಯಲ್ಲಿ ಯಾರು ಗೆಲ್ಲಬೇಕು ಅನ್ನೋದು ಮೊದಲೇ ಫಿಕ್ಸ್ ಆಗಿರುತ್ತದೆ. ತಮಗೆ ಇಷ್ಟವಾದ ಸ್ಪರ್ಧಿಗಳನ್ನು ಅವರು ಗೆಲ್ಲಿಸುತ್ತಾರೆ. ಪ್ರೇಕ್ಷಕರ ವೋಟ್ ಮೇಲೆ ಎಲಿಮಿನೇಷನ್ ನಡೆಯುವುದಿಲ್ಲ ಅನ್ನೋದು ನನಗೆ ಗೊತ್ತಾಗಿದೆ’ ಎಂದು ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ಬಿಗ್ ಬಾಸ್​ನಲ್ಲಿ ಕಳಪೆ ಪಟ್ಟ ಪಡೆದ ಮೈಕಲ್

‘ಬಿಗ್ ಬಾಸ್ ಮನೆ ಒಳಗೆ ಹೋಗುವ ಸಂದರ್ಭದಲ್ಲಿ ಇದೊಂದು ರಿಯಾಲಿಟಿ ಶೋ ಎಂದುಕೊಂಡಿದ್ದೆ. ಆದರೆ, ಇದರಲ್ಲಿ ಯಾವುದೂ ನಿಜವಿಲ್ಲ’ ಎಂದಿದ್ದಾರೆ ಅವರು. ಈ ಮೊದಲು ಕೂಡ ಅನೇಕ ಸ್ಪರ್ಧಿಗಳು ಈ ರೀತಿಯ ಆರೋಪ ಮಾಡಿದ್ದಿದೆ. ಕನ್ನಡದಲ್ಲಿ ಒಟಿಟಿ ಹಾಗೂ ಟಿವಿ ಸೀಸನ್​ಗೆ ಬಂದಿದ್ದ ಆರ್ಯವರ್ಧನ್ ಗುರೂಜಿ ಕೂಡ ಇದೇ ರೀತಿಯ ಆರೋಪ ಮಾಡುತ್ತಾ ಬರುತ್ತಿದ್ದಾರೆ.

ಸದ್ಯ, ‘ಬಿಗ್ ಬಾಸ್ ಹಿಂದಿ ಸೀಸನ್ 17’ರಲ್ಲಿ ಮುನಾವರ್ ಫಾರೂಕಿ, ವಿಕ್ಕಿ ಜೈನ್, ಅಂಕಿತಾ ಲೋಖಂಡೆ ಮೊದಲಾದವರು ಸ್ಪರ್ಧೆಯಲ್ಲಿದ್ದಾರೆ. ಈ ತಿಂಗಳಾಂತ್ಯಕ್ಕೆ ಹಿಂದಿ ಬಿಗ್ ಬಾಸ್ ಫಿನಾಲೆ ನಡೆಯಲಿದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ