AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Suresh: ಬಿಗ್​ ಬಾಸ್​ ಖ್ಯಾತಿಯ ದಿವ್ಯಾ ಸುರೇಶ್​ಗೆ ಅಪಘಾತ; ಈಗ ಹೇಗಿದೆ ಪರಿಸ್ಥಿತಿ?

ಸೋಮವಾರ ಅವರು ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.  ಅಪಘಾತದಲ್ಲಿ ಸಣ್ಣ ಪುಟ್ಟ ಗಾಯ ಆಗಿದೆ. ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.

Divya Suresh: ಬಿಗ್​ ಬಾಸ್​ ಖ್ಯಾತಿಯ ದಿವ್ಯಾ ಸುರೇಶ್​ಗೆ ಅಪಘಾತ; ಈಗ ಹೇಗಿದೆ ಪರಿಸ್ಥಿತಿ?
ದಿವ್ಯಾ ಸುರೇಶ್​
TV9 Web
| Edited By: |

Updated on:Jan 19, 2022 | 5:26 PM

Share

ನಟಿ ದಿವ್ಯಾ ಸುರೇಶ್ (Divya Suresh)​ ಅವರು ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ಕ್ಕೆ  (Kannada Bigg Boss) ಎಂಟ್ರಿ ಕೊಡುವ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡರು. ಫಿನಾಲೆ ಪ್ರವೇಶಿಸುವ ಮೂಲಕ ದಿವ್ಯಾ ಸುರೇಶ್​ ಜನಪ್ರಿಯತೆ ಹೆಚ್ಚಿತು. ಮಂಜು ಪಾವಗಡ ಅವರ ಜತೆಗಿನ ಫ್ರೆಂಡ್​ಶಿಪ್​ ಮೂಲಕವೂ ಅವರು ಹೆಚ್ಚು ಸುದ್ದಿ ಆದರು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಅವರಿಗೆ ಸಾಕಷ್ಟು ಸಿನಿಮಾ ಆಫರ್​ಗಳು ಬರುತ್ತಿವೆ. ಕಲರ್ಸ್​ ಕನ್ನಡದ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಾರೆ. ಈಗ ಅವರಿಗೆ ರಸ್ತೆ ಅಪಘಾತವಾಗಿದೆ. ಅದೃಷ್ಟವಶಾತ್​ ಯಾವುದೇ ಅಪಾಯ ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗಳಾಗಿದೆ. ಈ ಬಗ್ಗೆ ದಿವ್ಯಾ ಮಾಹಿತಿ ಹಂಚಿಕೊಂಡಿದ್ದಾರೆ.

ಸೋಮವಾರ ಅವರು ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.  ಅಪಘಾತದಲ್ಲಿ ಸಣ್ಣ ಪುಟ್ಟ ಗಾಯ ಆಗಿದೆ. ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ, ದಿವ್ಯಾ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಕೊರೊನಾ ವ್ಯಾಕ್ಸಿನ್ ಪಡೆದು ಬರುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.

ಮುಖದ ಮೇಲೆ ದಿವ್ಯಾಗೆ ಸಣ್ಣ ಗಾಯ ಆಗಿದೆ. ಪ್ರಾಣಾಪಾಯದಿಂದ ದಿವ್ಯಾ ಸುರೇಶ್ ಪಾರಾಗಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೇಟಸ್​ ಮೂಲಕ ದಿವ್ಯಾ ಈ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಇತ್ತೀಚೆಗೆ ದಿವ್ಯಾ ಕಿರಿಕ್​ ಮಾಡಿಕೊಂಡಿದ್ದರು. ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಅವರು ಓಡಾಡುತ್ತಿದ್ದರು. ಈ ವೇಳೆ ದಿವ್ಯಾ ಸುರೇಶ್ ಹಾಗೂ ಅವರ ಸ್ನೇಹಿತರನ್ನು  ಪೊಲೀಸರು ಮನೆಗೆ ಕಳುಹಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ದಿವ್ಯಾ ಹಾಗೂ ಅವರ ಸ್ನೇಹಿತರು ಹೈಡ್ರಾಮಾ ನಡೆಸಿದ್ದು ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಅಲ್ಲದೇ ದಿವ್ಯಾ ಸ್ನೇಹಿತರು ಮಾಧ್ಯಮಗಳ ಕ್ಯಾಮೆರಾ ಕಿತ್ತುಕೊಳ್ಳಲು ಮುಂದಾಗಿದ್ದು, ಗೊಂದಲದ ವಾತಾವರಣಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: Divya Suresh: ನೈಟ್ ಕರ್ಫ್ಯೂ ವೇಳೆ ಬಿಗ್​ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಕಿರಿಕ್?; ವಿಡಿಯೋ ಇಲ್ಲಿದೆ

ಕುಡಿದ ಮತ್ತಿನಲ್ಲಿ ತಾನು ಸೆಲಿಬ್ರಿಟಿ ಎಂಬುದನ್ನು ಮರೆತ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್!

Published On - 2:10 pm, Wed, 19 January 22

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ