AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Suresh: ಬಿಗ್​ ಬಾಸ್​ ಖ್ಯಾತಿಯ ದಿವ್ಯಾ ಸುರೇಶ್​ಗೆ ಅಪಘಾತ; ಈಗ ಹೇಗಿದೆ ಪರಿಸ್ಥಿತಿ?

ಸೋಮವಾರ ಅವರು ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.  ಅಪಘಾತದಲ್ಲಿ ಸಣ್ಣ ಪುಟ್ಟ ಗಾಯ ಆಗಿದೆ. ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.

Divya Suresh: ಬಿಗ್​ ಬಾಸ್​ ಖ್ಯಾತಿಯ ದಿವ್ಯಾ ಸುರೇಶ್​ಗೆ ಅಪಘಾತ; ಈಗ ಹೇಗಿದೆ ಪರಿಸ್ಥಿತಿ?
ದಿವ್ಯಾ ಸುರೇಶ್​
TV9 Web
| Edited By: |

Updated on:Jan 19, 2022 | 5:26 PM

Share

ನಟಿ ದಿವ್ಯಾ ಸುರೇಶ್ (Divya Suresh)​ ಅವರು ‘ಕನ್ನಡ ಬಿಗ್​ ಬಾಸ್​ ಸೀಸನ್​ 8’ಕ್ಕೆ  (Kannada Bigg Boss) ಎಂಟ್ರಿ ಕೊಡುವ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡರು. ಫಿನಾಲೆ ಪ್ರವೇಶಿಸುವ ಮೂಲಕ ದಿವ್ಯಾ ಸುರೇಶ್​ ಜನಪ್ರಿಯತೆ ಹೆಚ್ಚಿತು. ಮಂಜು ಪಾವಗಡ ಅವರ ಜತೆಗಿನ ಫ್ರೆಂಡ್​ಶಿಪ್​ ಮೂಲಕವೂ ಅವರು ಹೆಚ್ಚು ಸುದ್ದಿ ಆದರು. ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ಅವರಿಗೆ ಸಾಕಷ್ಟು ಸಿನಿಮಾ ಆಫರ್​ಗಳು ಬರುತ್ತಿವೆ. ಕಲರ್ಸ್​ ಕನ್ನಡದ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಾರೆ. ಈಗ ಅವರಿಗೆ ರಸ್ತೆ ಅಪಘಾತವಾಗಿದೆ. ಅದೃಷ್ಟವಶಾತ್​ ಯಾವುದೇ ಅಪಾಯ ಸಂಭವಿಸಿಲ್ಲ. ಸಣ್ಣಪುಟ್ಟ ಗಾಯಗಳಾಗಿದೆ. ಈ ಬಗ್ಗೆ ದಿವ್ಯಾ ಮಾಹಿತಿ ಹಂಚಿಕೊಂಡಿದ್ದಾರೆ.

ಸೋಮವಾರ ಅವರು ಬೈಕ್​ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.  ಅಪಘಾತದಲ್ಲಿ ಸಣ್ಣ ಪುಟ್ಟ ಗಾಯ ಆಗಿದೆ. ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ, ದಿವ್ಯಾ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಕೊರೊನಾ ವ್ಯಾಕ್ಸಿನ್ ಪಡೆದು ಬರುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.

ಮುಖದ ಮೇಲೆ ದಿವ್ಯಾಗೆ ಸಣ್ಣ ಗಾಯ ಆಗಿದೆ. ಪ್ರಾಣಾಪಾಯದಿಂದ ದಿವ್ಯಾ ಸುರೇಶ್ ಪಾರಾಗಿದ್ದಾರೆ. ಇನ್​ಸ್ಟಾಗ್ರಾಮ್​ ಸ್ಟೇಟಸ್​ ಮೂಲಕ ದಿವ್ಯಾ ಈ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಇತ್ತೀಚೆಗೆ ದಿವ್ಯಾ ಕಿರಿಕ್​ ಮಾಡಿಕೊಂಡಿದ್ದರು. ನೈಟ್ ಕರ್ಫ್ಯೂ ವೇಳೆ ಎಂಜಿ ರಸ್ತೆಯಲ್ಲಿ ಅವರು ಓಡಾಡುತ್ತಿದ್ದರು. ಈ ವೇಳೆ ದಿವ್ಯಾ ಸುರೇಶ್ ಹಾಗೂ ಅವರ ಸ್ನೇಹಿತರನ್ನು  ಪೊಲೀಸರು ಮನೆಗೆ ಕಳುಹಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ದಿವ್ಯಾ ಹಾಗೂ ಅವರ ಸ್ನೇಹಿತರು ಹೈಡ್ರಾಮಾ ನಡೆಸಿದ್ದು ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಅಲ್ಲದೇ ದಿವ್ಯಾ ಸ್ನೇಹಿತರು ಮಾಧ್ಯಮಗಳ ಕ್ಯಾಮೆರಾ ಕಿತ್ತುಕೊಳ್ಳಲು ಮುಂದಾಗಿದ್ದು, ಗೊಂದಲದ ವಾತಾವರಣಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: Divya Suresh: ನೈಟ್ ಕರ್ಫ್ಯೂ ವೇಳೆ ಬಿಗ್​ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಕಿರಿಕ್?; ವಿಡಿಯೋ ಇಲ್ಲಿದೆ

ಕುಡಿದ ಮತ್ತಿನಲ್ಲಿ ತಾನು ಸೆಲಿಬ್ರಿಟಿ ಎಂಬುದನ್ನು ಮರೆತ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್!

Published On - 2:10 pm, Wed, 19 January 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ