AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ನಲ್ಲಿ ಕೊಟ್ಟ ಬೆಂಬಲ ಪಳಾರ್ ಚಿತ್ರಕ್ಕೂ ಇರಲಿ’: ಅಭಿಮಾನಿಗಳಲ್ಲಿ ಗಿಲ್ಲಿ ಮನವಿ

Gilli Nata: ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ತಮ್ಮ ಅಭಿನಯದ 'ಪಳಾರ್' ಸಿನಿಮಾಗೆ ಬೆಂಬಲ ನೀಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ರಾಮನಗರ ಸುತ್ತಮುತ್ತ ಶೂಟಿಂಗ್ ಮುಗಿಸಿಕೊಂಡಿರುವ ಈ ಚಿತ್ರಕ್ಕೂ ಬಿಗ್ ಬಾಸ್‌ನಷ್ಟೇ ಪ್ರೋತ್ಸಾಹ ಸಿಗಲಿದೆ ಎಂಬ ಭರವಸೆಯನ್ನು ಕಾರ್ಯಕ್ರಮದ ವೇದಿಕೆಯಲ್ಲಿ ವ್ಯಕ್ತಪಡಿಸಲಾಗಿದೆ.

‘ಬಿಗ್ ಬಾಸ್​ನಲ್ಲಿ ಕೊಟ್ಟ ಬೆಂಬಲ ಪಳಾರ್ ಚಿತ್ರಕ್ಕೂ ಇರಲಿ’: ಅಭಿಮಾನಿಗಳಲ್ಲಿ ಗಿಲ್ಲಿ ಮನವಿ
ಗಿಲ್ಲಿ ನಟ
ರಾಜೇಶ್ ದುಗ್ಗುಮನೆ
|

Updated on:Aug 05, 2026 | 9:46 AM

Share

ಮುಖ್ಯಾಂಶಗಳು

  • ರಾಮನಗರ ಸುತ್ತಮುತ್ತ 'ಪಳಾರ್' ಶೂಟಿಂಗ್
  • ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ಗಿಲ್ಲಿ
  • 'ಬಿಗ್ ಬಾಸ್ ಥರವೇ ಸಿನಿಮಾ ಗೆಲ್ಲಿಸಿ' ಎಂದು ಮನವಿ 

ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಮೂಲಕ ಗಿಲ್ಲಿ ನಟ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಈಗ ಅವರು ಸಿನಿಮಾದಲ್ಲಿ ಹೀರೋ ಆಗಿ ನಟಿಸೋಕೆ ರೆಡಿ ಆಗಿದ್ದಾರೆ. ಮುಂಬರುವ ಅವರ ಚಿತ್ರಕ್ಕೆ ‘ಪಳಾರ್’ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಬಗ್ಗೆ ಅವರು ವೇದಿಕೆ ಒಂದರಲ್ಲಿ ಮಾತನಾಡಿದ್ದಾರೆ. ರಾಮನಗರ ಹಾಗೂ ಕನಕಪುರ ಸುತ್ತಮುತ್ತ ಸುಮಾರು 15 ರಿಂದ 20 ದಿನಗಳ ಕಾಲ ಈ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಗ್ ಬಾಸ್ ರೀತಿಯೇ ಪ್ರೋತ್ಸಾಹಿಸಿ

ವೇದಿಕೆಯಲ್ಲಿ ಉಪಸ್ಥಿತರಿದ್ದ ಸಾವಿರಾರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಗಿಲ್ಲಿ, ‘ನನಗೆ ಬಿಗ್ ಬಾಸ್‌ನಲ್ಲಿದ್ದಾಗ ಎಷ್ಟು ಪ್ರೋತ್ಸಾಹ ಮತ್ತು ಪ್ರೀತಿ ನೀಡಿದಿರೋ, ಅದೇ ರೀತಿ ನಮ್ಮ ‘ಪಳಾರ್’ ಸಿನಿಮಾ ರಿಲೀಸ್ ಆದಾಗಲೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಬೆಂಬಲಿಸಬೇಕು’ ಎಂದು ಮನವಿ ಮಾಡಿಕೊಂಡರು. ಇದಕ್ಕೆ ನೆರೆದಿದ್ದ ಜನಸ್ತೋಮ ಕರತಾಡನದ ಮೂಲಕ ಧ್ವನಿಗೂಡಿಸಿತು.

100 ದಿನ ಓಡಿಸುವ ಭರವಸೆ

ಕಾರ್ಯಕ್ರಮದ ನಿರೂಪಕರು ಮಾತನಾಡಿ, ‘ಅಭಿಮಾನಿಗಳು ಬಿಗ್ ಬಾಸ್‌ನಲ್ಲಿ ಗಿಲ್ಲಿ ಅವರನ್ನು ಗೆಲ್ಲಿಸಿದ ರೀತಿಯೇ, ಈ ಪಳಾರ್ ಚಿತ್ರವನ್ನೂ 100 ಅಥವಾ 200 ದಿನಗಳ ಕಾಲ ಓಡಿಸಿ ಖಂಡಿತ ಗೆಲ್ಲಿಸುತ್ತಾರೆ’ ಎಂದು ಸಭಿಕರ ಪ್ರೀತಿಯನ್ನು ಎತ್ತಿ ತೋರಿಸಿದರು.

ಇದನ್ನೂ ಓದಿ: ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?

ಅವರದ್ದೇ ಟೈಟಲ್

‘ಪಳಾರ್’ ಸಿನಿಮಾ ಟೈಟಲ್ ಇಡೋದಕ್ಕೂ ಒಂದು ಕಾರಣ ಇದೆ. ‘ಬಿಗ್ ಬಾಸ್’ ಮನೆಯಲ್ಲಿ ಇದ್ದಾಗ ಎಲ್ಲರೂ ಗಿಲ್ಲಿಗೆ ಪಳಾರ್ ಎಂದು ಕರೆದರು. ಸ್ಥಳೀಯ ಪ್ರಾದೇಶಿಕ ಆಡುಭಾಷೆಯಲ್ಲಿ ‘ಪಳಾರ್’ ಎಂದರೆ ಚುರುಕಾದ, ಖಡಕ್ ಆದ ಅಥವಾ ರಫ್, ಮಾಸ್ ವ್ಯಕ್ತಿತ್ವದವ ಎಂಬ ಅರ್ಥದಲ್ಲೂ ಬಳಸಲಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:39 am, Wed, 5 August 26

Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್