AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್​ನಲ್ಲಿ ಕೊಟ್ಟ ಬೆಂಬಲ ಪಳಾರ್ ಚಿತ್ರಕ್ಕೂ ಇರಲಿ’: ಅಭಿಮಾನಿಗಳಲ್ಲಿ ಗಿಲ್ಲಿ ಮನವಿ

Gilli Nata: ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ ತಮ್ಮ ಅಭಿನಯದ 'ಪಳಾರ್' ಸಿನಿಮಾಗೆ ಬೆಂಬಲ ನೀಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ರಾಮನಗರ ಸುತ್ತಮುತ್ತ ಶೂಟಿಂಗ್ ಮುಗಿಸಿಕೊಂಡಿರುವ ಈ ಚಿತ್ರಕ್ಕೂ ಬಿಗ್ ಬಾಸ್‌ನಷ್ಟೇ ಪ್ರೋತ್ಸಾಹ ಸಿಗಲಿದೆ ಎಂಬ ಭರವಸೆಯನ್ನು ಕಾರ್ಯಕ್ರಮದ ವೇದಿಕೆಯಲ್ಲಿ ವ್ಯಕ್ತಪಡಿಸಲಾಗಿದೆ.

‘ಬಿಗ್ ಬಾಸ್​ನಲ್ಲಿ ಕೊಟ್ಟ ಬೆಂಬಲ ಪಳಾರ್ ಚಿತ್ರಕ್ಕೂ ಇರಲಿ’: ಅಭಿಮಾನಿಗಳಲ್ಲಿ ಗಿಲ್ಲಿ ಮನವಿ
ಗಿಲ್ಲಿ ನಟ
ರಾಜೇಶ್ ದುಗ್ಗುಮನೆ
|

Updated on:Aug 05, 2026 | 9:46 AM

Share

ಮುಖ್ಯಾಂಶಗಳು

  • ರಾಮನಗರ ಸುತ್ತಮುತ್ತ 'ಪಳಾರ್' ಶೂಟಿಂಗ್
  • ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ಗಿಲ್ಲಿ
  • 'ಬಿಗ್ ಬಾಸ್ ಥರವೇ ಸಿನಿಮಾ ಗೆಲ್ಲಿಸಿ' ಎಂದು ಮನವಿ 

ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಮೂಲಕ ಗಿಲ್ಲಿ ನಟ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ಈಗ ಅವರು ಸಿನಿಮಾದಲ್ಲಿ ಹೀರೋ ಆಗಿ ನಟಿಸೋಕೆ ರೆಡಿ ಆಗಿದ್ದಾರೆ. ಮುಂಬರುವ ಅವರ ಚಿತ್ರಕ್ಕೆ ‘ಪಳಾರ್’ ಎಂಬ ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಬಗ್ಗೆ ಅವರು ವೇದಿಕೆ ಒಂದರಲ್ಲಿ ಮಾತನಾಡಿದ್ದಾರೆ. ರಾಮನಗರ ಹಾಗೂ ಕನಕಪುರ ಸುತ್ತಮುತ್ತ ಸುಮಾರು 15 ರಿಂದ 20 ದಿನಗಳ ಕಾಲ ಈ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಿಗ್ ಬಾಸ್ ರೀತಿಯೇ ಪ್ರೋತ್ಸಾಹಿಸಿ

ವೇದಿಕೆಯಲ್ಲಿ ಉಪಸ್ಥಿತರಿದ್ದ ಸಾವಿರಾರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಗಿಲ್ಲಿ, ‘ನನಗೆ ಬಿಗ್ ಬಾಸ್‌ನಲ್ಲಿದ್ದಾಗ ಎಷ್ಟು ಪ್ರೋತ್ಸಾಹ ಮತ್ತು ಪ್ರೀತಿ ನೀಡಿದಿರೋ, ಅದೇ ರೀತಿ ನಮ್ಮ ‘ಪಳಾರ್’ ಸಿನಿಮಾ ರಿಲೀಸ್ ಆದಾಗಲೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಬೆಂಬಲಿಸಬೇಕು’ ಎಂದು ಮನವಿ ಮಾಡಿಕೊಂಡರು. ಇದಕ್ಕೆ ನೆರೆದಿದ್ದ ಜನಸ್ತೋಮ ಕರತಾಡನದ ಮೂಲಕ ಧ್ವನಿಗೂಡಿಸಿತು.

100 ದಿನ ಓಡಿಸುವ ಭರವಸೆ

ಕಾರ್ಯಕ್ರಮದ ನಿರೂಪಕರು ಮಾತನಾಡಿ, ‘ಅಭಿಮಾನಿಗಳು ಬಿಗ್ ಬಾಸ್‌ನಲ್ಲಿ ಗಿಲ್ಲಿ ಅವರನ್ನು ಗೆಲ್ಲಿಸಿದ ರೀತಿಯೇ, ಈ ಪಳಾರ್ ಚಿತ್ರವನ್ನೂ 100 ಅಥವಾ 200 ದಿನಗಳ ಕಾಲ ಓಡಿಸಿ ಖಂಡಿತ ಗೆಲ್ಲಿಸುತ್ತಾರೆ’ ಎಂದು ಸಭಿಕರ ಪ್ರೀತಿಯನ್ನು ಎತ್ತಿ ತೋರಿಸಿದರು.

ಇದನ್ನೂ ಓದಿ: ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?

ಅವರದ್ದೇ ಟೈಟಲ್

‘ಪಳಾರ್’ ಸಿನಿಮಾ ಟೈಟಲ್ ಇಡೋದಕ್ಕೂ ಒಂದು ಕಾರಣ ಇದೆ. ‘ಬಿಗ್ ಬಾಸ್’ ಮನೆಯಲ್ಲಿ ಇದ್ದಾಗ ಎಲ್ಲರೂ ಗಿಲ್ಲಿಗೆ ಪಳಾರ್ ಎಂದು ಕರೆದರು. ಸ್ಥಳೀಯ ಪ್ರಾದೇಶಿಕ ಆಡುಭಾಷೆಯಲ್ಲಿ ‘ಪಳಾರ್’ ಎಂದರೆ ಚುರುಕಾದ, ಖಡಕ್ ಆದ ಅಥವಾ ರಫ್, ಮಾಸ್ ವ್ಯಕ್ತಿತ್ವದವ ಎಂಬ ಅರ್ಥದಲ್ಲೂ ಬಳಸಲಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:39 am, Wed, 5 August 26

Follow Us
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ