AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanya Iyer: ‘ನಾನು ಮದ್ಯಪಾನ ಮಾಡಿರಲಿಲ್ಲ’: ಕಂಬಳ ಗಲಾಟೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸಾನ್ಯಾ ಐಯ್ಯರ್​ ಸ್ಪಷ್ಟನೆ

Sanya Iyer | Kambala Controversy: ಕಂಬಳಕ್ಕೆ ಬರುವಾಗ ಸಾನ್ಯಾ ಐಯ್ಯರ್​ ಅವರು ತಮ್ಮ ಸ್ನೇಹಿತರ ಜೊತೆ ಸೇರಿ ಮದ್ಯಪಾನ ಮಾಡಿದ್ದರು ಎಂಬ ಆರೋಪ ಎದುರಾಗಿದೆ. ಆ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.

Sanya Iyer: ‘ನಾನು ಮದ್ಯಪಾನ ಮಾಡಿರಲಿಲ್ಲ’: ಕಂಬಳ ಗಲಾಟೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಸಾನ್ಯಾ ಐಯ್ಯರ್​ ಸ್ಪಷ್ಟನೆ
ಸಾನ್ಯಾ ಐಯ್ಯರ್
ಮದನ್​ ಕುಮಾರ್​
|

Updated on:Jan 31, 2023 | 6:30 PM

Share

ಕಿರುತೆರೆ ನಟಿ ಸಾನ್ಯಾ ಐಯ್ಯರ್​ ಅವರು ವಿವಾದದಲ್ಲಿ ಸಿಲುಕಿದ್ದಾರೆ. ಇತ್ತೀಚೆಗೆ ಕಂಬಳ (Kambala) ವೀಕ್ಷಿಸಲು ಅವರು ತೆರಳಿದ್ದಾಗ ಯುವಕನೊಬ್ಬನ ಜೊತೆ ಜಗಳ ಆಗಿದೆ. ಆ ಗಲಾಟೆ ಕುರಿತು ಹಲವಾರು ಸುದ್ದಿಗಳು ಹಬ್ಬಿವೆ. ಅವುಗಳ ಕುರಿತು ಸ್ಪಷ್ಟನೆ ನೀಡಲು ಸಾನ್ಯಾ ಐಯ್ಯರ್​ ಅವರು ಇಂದು (ಜ.31) ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಈ ವೇಳೆ ಅವರು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ‘ನಾವು ಕಂಬಳ ನೋಡಲು ಪುತ್ತೂರಿಗೆ ಹೋಗಿದ್ವಿ. ನನ್ನನ್ನು ಅತಿಥಿಯಾಗಿ ಕರೆದಿದ್ದರು. ಆ ಸಾಂಸ್ಕೃತಿಕ ಕ್ರೀಡೆಯನ್ನು ಸರಿಯಾಗಿ ನೋಡಲು ಸಾಧ್ಯವಾಗಿರಲಿಲ್ಲ. ಮತ್ತೆ ಸ್ನೇಹಿತೆಯರ ಜೊತೆ ಕಂಬಳ ನೋಡಲು ಬಂದೆ. ಆಗ ನಶೆಯಲ್ಲಿ ಇದ್ದ ಓರ್ವ ಯುವಕ ಕಿರುಕುಳ ನೀಡಲು ಪ್ರಯತ್ನಿಸಿದ. ಆಗ ನಾವು ಜೋರಾಗಿ ಕಿರುಚಿಕೊಂಡೆವು’ ಎಂದು ಸಾನ್ಯಾ ಅಯ್ಯರ್​ (Sanya Iyer) ಹೇಳಿದ್ದಾರೆ.

‘ಆ ಹುಡುಗ ಯಾರು? ಅವರ ಹೆಸರು ಏನು ಎಂಬುದು ಕೂಡ ನಮಗೆ ತಿಳಿದಿಲ್ಲ. ಬಂದು ಮೈಮೇಲೆ ಬಿದ್ದ. ನಾವು ಕಿರುಚಿದ್ದಕ್ಕೆ ಜನರು ಸೇರಿದರು. ಆಗ ಅವನು ಎಸ್ಕೇಪ್​ ಆದ. ನಮ್ಮ ಕೈಗೆ ಸಿಗಲಿಲ್ಲ. ನಾವು ಬರುತ್ತೇವೆ ಎಂಬುದನ್ನು ಮುಖ್ಯ ಆಯೋಜಕರಿಗೆ ನಾವು ತಿಳಿಸಿರಲಿಲ್ಲ. ಒಂದು ವೇಳೆ ತಿಳಿಸಿದ್ದರೆ ಅವರು ಸರಿಯಾಗಿ ಕರೆದುಕೊಂಡು ಹೋಗುತ್ತಿದ್ದರು. ಈ ಘಟನೆ ಆದ ಬಳಿಕ ಅವರಿಗೆ ವಿಷಯ ತಿಳಿಯಿತು. ಆಮೇಲೆ ಅವರು ಬಂದು ನಮ್ಮನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ವೇದಿಕೆ ಮೇಲೆ ಕೂರಿಸಿದರು’ ಎಂದು ಸಾನ್ಯಾ ಐಯ್ಯರ್​ ಹೇಳಿದ್ದಾರೆ.

ಇದನ್ನೂ ಓದಿ: Sanya Iyer ‘ಹೆಣ್ಮಕ್ಳ ಮುಟ್ಟಿದ್ರೆ ಸರಿ ಇರಲ್ಲ’; ಕಪಾಳ ಮೋಕ್ಷದ ಬಳಿಕ ಸಾನ್ಯಾ ಐಯ್ಯರ್ ತರಾಟೆ

ಇದನ್ನೂ ಓದಿ
Image
Rakesh Adiga: ‘ಬಿಗ್​ ಬಾಸ್​’ ವಿನ್​ ಆಗದಿದ್ರೂ 12 ಲಕ್ಷ ರೂಪಾಯಿಗೂ ಅಧಿಕ ನಗದು ಬಹುಮಾನ ಪಡೆದ ರಾಕೇಶ್​ ಅಡಿಗ
Image
Deepika Das: ದೀಪಿಕಾ ದಾಸ್​ ಬಿಗ್​ ಬಾಸ್​ ಫಿನಾಲೆಗೆ ಬಂದರೂ ಸಿಗಲಿಲ್ಲ ಟ್ರೋಫಿ; ಎಡವಿದ್ದು ಎಲ್ಲಿ?
Image
Bigg Boss Winner Roopesh Shetty: ‘ನಾನು ಗೆದ್ದಿಲ್ಲ, ನೀವು ಗೆಲ್ಲಿಸಿದ್ದೀರಿ’: ಬಿಗ್​ ಬಾಸ್​ ವಿನ್ನರ್​ ರೂಪೇಶ್​ ಶೆಟ್ಟಿ ಮೊದಲ ರಿಯಾಕ್ಷನ್​
Image
Rakesh Adiga: ‘ಬಿಗ್​ ಬಾಸ್​’ ರನ್ನರ್​ ಅಪ್​ ಆದ ರಾಕೇಶ್​ ಅಡಿಗ; ವಿನ್ನರ್​ ಪಟ್ಟ ಜಸ್ಟ್​ ಮಿಸ್​

ಕಂಬಳಕ್ಕೆ ಬರುವಾಗ ಸಾನ್ಯಾ ಐಯ್ಯರ್​ ಅವರು ತಮ್ಮ ಸ್ನೇಹಿತರ ಜೊತೆ ಸೇರಿ ಮದ್ಯಪಾನ ಮಾಡಿದ್ದರು ಎಂಬ ಆರೋಪ ಎದುರಾಗಿದೆ. ಆ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ಖಂಡಿತವಾಗಿಯೂ ನಾನು ಮದ್ಯಪಾನ ಮಾಡಿಲ್ಲ. ಬಾಂಬೆಯಲ್ಲಿ ನನ್ನ ಶೂಟಿಂಗ್​ ಇದೆ. ಅದಕ್ಕಾಗಿ ನಾನು ಜೀರೋ ಶುಗರ್​ ಡಯೆಟ್​ ಮಾಡುತ್ತಿದ್ದೇನೆ. ಅಂಥದ್ದರಲ್ಲಿ ಮದ್ಯಪಾನ ಹೇಗೆ ಮಾಡಲಿ? ನಾನು ರುದ್ರಾಕ್ಷಿ ಧರಿಸಿದ್ದೇನೆ. ಹಾಗಾಗಿ ಮದ್ಯಪಾನ, ಧೂಮಪಾನ ಮಾಡಲ್ಲ. ನಾವು ಹೋಗಿದ್ದು ಪವಿತ್ರವಾದ ಸ್ಥಳಕ್ಕೆ. ಅಲ್ಲಿ ದೇವಸ್ಥಾನಗಳು ಇವೆ. ಅಲ್ಲಿ ಎಂಜಾಯ್​ ಮಾಡೋಕೆ ನಾವು ಹೋಗಿರಲಿಲ್ಲ’ ಎಂದು ಸಾನ್ಯಾ ಐಯ್ಯರ್​ ಹೇಳಿದ್ದಾರೆ.

ಕಿರುತೆರೆಯ ಧಾರಾವಾಹಿಗಳ ಮೂಲಕ ಸಾನ್ಯಾ ಐಯ್ಯರ್​ ಅವರು ಮನೆಮಾತಾಗಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಮೊದಲ ಸೀಸನ್​ ಹಾಗೂ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಸ್ಪರ್ಧಿಸಿದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:30 pm, Tue, 31 January 23

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ