AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ಹಾಗೂ ತಮ್ಮ ಬಗ್ಗೆ ಹರಿದಾಡಿದ ವದಂತಿಗೆ ಸ್ಪಷ್ಟನೆ ನೀಡಿದ ಶಿಶಿರ್

ಶಿಶಿರ್ ಹಾಗೂ ಐಶ್ವರ್ಯಾ ಶಿಂಧೋಗಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಪರಸ್ಪರ ಪರಿಚಯ ಆದರು. ಈ ಶೋನಲ್ಲಿ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಸಾಮಾನ್ಯವಾಗಿ ಈ ಗೆಳೆತನ ಬಿಗ್ ಬಾಸ್ ಮನೆಗೆ ಮಾತ್ರ ಸೀಮಿತವಾಗಿರುತ್ತವೆ. ಆದರೆ, ಶಿಶಿರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಗೆಳೆತನ ಮುಂದುವರಿದಿದೆ.

ಐಶ್ವರ್ಯಾ ಹಾಗೂ ತಮ್ಮ ಬಗ್ಗೆ ಹರಿದಾಡಿದ ವದಂತಿಗೆ ಸ್ಪಷ್ಟನೆ ನೀಡಿದ ಶಿಶಿರ್
Aish
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 01, 2025 | 10:16 AM

Share

ಶಿಶಿರ್ ಅವರು ಸದ್ಯ ಸುದ್ದಿಯಲ್ಲಿ ಇದ್ದಾರೆ. ಅವರ ನಟನೆಯ ‘ಶ್ರೀ ಗಂಧದಗುಡಿ’ ಧಾರಾವಾಹಿಯು ಕಲರ್ಸ್ ಕನ್ನಡದಲ್ಲಿ ಅಕ್ಟೋಬರ್ 6ರಿಂದ ರಾತ್ರಿ 8 ಗಂಟೆಗೆ ಪ್ರಸಾರ ಕಾಣಲಿದೆ. ಬಿಗ್ ಬಾಸ್​ ಮೂಲಕ ಅವರು ಜನಪ್ರಿಯತೆ ಪಡೆದರು. ಬಿಗ್ ಬಾಸ್ ಬಳಿಕ ಅವರು ನಟಿಸುತ್ತಿರುವ ಮೊದಲ ಧಾರಾವಾಹಿ ಇದು. ಹೀಗಿರುವಾಗಲೇ ಶಿಶಿರ್ ಅವರು ತಮ್ಮ ಬಗ್ಗೆ ಹರಿದಾಡಿದ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಏನು ವಿವಾದ? ಅವರ ಬಗ್ಗೆ ಹುಟ್ಟಿಕೊಂಡ ವದಂತಿ ಏನು? ಎಂಬುದರ ಕುರಿತು ಇಲ್ಲಿದೆ ವಿವರ.

ಶಿಶಿರ್ ಹಾಗೂ ಐಶ್ವರ್ಯಾ ಶಿಂಧೋಗಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಪರಸ್ಪರ ಪರಿಚಯ ಆದರು. ಈ ಶೋನಲ್ಲಿ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಸಾಮಾನ್ಯವಾಗಿ ಈ ಗೆಳೆತನ ಬಿಗ್ ಬಾಸ್ ಮನೆಗೆ ಮಾತ್ರ ಸೀಮಿತವಾಗಿರುತ್ತವೆ. ಆದರೆ, ಶಿಶಿರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಗೆಳೆತನ ಮುಂದುವರಿದಿದೆ.

ಈ ಗೆಳೆತನದ ಬಗ್ಗೆ ಅನೇಕರು ನಾನಾ ರೀತಿಯಲ್ಲಿ ಮಾತನಾಡಿದ್ದು ಇದೆ. ಕೆಲವರು ಇವರು ಲಿವಿನ್​ನಲ್ಲಿ ಇದ್ದಾರೆ ಎಂದು ಕೂಡ ಸುದ್ದಿ ಹಬ್ಬಿಸಿದ್ದಾರೆ. ಈ ವಿಚಾರವು ಶಿಶಿರ್​ಗೆ ಬೇಸರ ಮೂಡಿಸಿದೆ. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಆ ರೀತಿ ಏನು ಇಲ್ಲ ಎಂದಿದ್ದಾರೆ. ಶಿಶಿರ್ ಅವರು ತಂದೆ-ತಾಯಿ ಜೊತೆ ವಾಸವಾಗಿದ್ದರಂತೆ. ಇನ್ನು, ಐಶ್ವರ್ಯಾ ಅವರು ಹಾಯಾಗಿ ತಮ್ಮ ಶ್ವಾನ ಸಿಂಬಾ ಜೊತೆ ವಾಸವಿದ್ದಾರೆ. ‘ನಾವು ಲಿವಿನ್​ನಲ್ಲಿ ಇಲ್ಲ’ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ.

ಇದನ್ನೂ ಓದಿ
Image
ಅಡುಗೆ ಮಾಡುತ್ತಾ ರಿಷಬ್, ಮೇಘನಾ, ಸುದೀಪ್ ಹರಟೆ; ಅಪರೂಪದ ವಿಡಿಯೋ ಇಲ್ಲಿದೆ
Image
ಸ್ತನ ಕ್ಯಾನ್ಸರ್​ನಿಂದ ಕಿರುತೆರೆ ನಟಿ ಕಮಲಶ್ರೀ ನಿಧನ
Image
‘ನಾನೇನು ಸುಮ್ಮನೆ ಬಿಡಲಿಲ್ಲ’; ಮಾಜಿ ಪತಿ ಮಾಡಿದ ಕೆಟ್ಟ ಕೆಲಸ ಹೇಳಿದ ಜಾನ್ವಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಇದನ್ನೂ ಓದಿ: ಗಿಲ್ಲಿ ನಟನಿಗೆ ಕಾಮಿಡಿಯೇ ಮುಳುವಾಯ್ತು: ಬಿಗ್ ಬಾಸ್ ಕಡೆಯಿಂದ ಖಡಕ್ ಎಚ್ಚರಿಕೆ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಿಶಿರ್ ಸ್ಪರ್ಧಿಯಾಗಿ ಕಾಣಿಸಿಕೊಂಡರು. ಆ ಬಳಿಕ ಇವರ ಬೇಡಿಕೆ ಹೆಚ್ಚಾಯಿತು. ಈಗ ಅವರು ‘ಶ್ರೀ ಗಂಧದಗುಡಿ’ ಹೆಸರಿನ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಸಹೋದರರ ಕಥೆ. ಅಪ್ಪ-ಅಮ್ಮ ಇಲ್ಲದ ಮನೆಗೆ ಹೆಣ್ಣೊಬ್ಬಳು ಬರುತ್ತಾಳೆ. ಅವರು ಎದುರಿಸೋ ಸಮಸ್ಯೇಗಳೇ ಧಾರಾವಾಹಿಯ ಹೈಲೈಟ್ ಆಗಿರಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:13 am, Wed, 1 October 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ