AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ಹಾಗೂ ತಮ್ಮ ಬಗ್ಗೆ ಹರಿದಾಡಿದ ವದಂತಿಗೆ ಸ್ಪಷ್ಟನೆ ನೀಡಿದ ಶಿಶಿರ್

ಶಿಶಿರ್ ಹಾಗೂ ಐಶ್ವರ್ಯಾ ಶಿಂಧೋಗಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಪರಸ್ಪರ ಪರಿಚಯ ಆದರು. ಈ ಶೋನಲ್ಲಿ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಸಾಮಾನ್ಯವಾಗಿ ಈ ಗೆಳೆತನ ಬಿಗ್ ಬಾಸ್ ಮನೆಗೆ ಮಾತ್ರ ಸೀಮಿತವಾಗಿರುತ್ತವೆ. ಆದರೆ, ಶಿಶಿರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಗೆಳೆತನ ಮುಂದುವರಿದಿದೆ.

ಐಶ್ವರ್ಯಾ ಹಾಗೂ ತಮ್ಮ ಬಗ್ಗೆ ಹರಿದಾಡಿದ ವದಂತಿಗೆ ಸ್ಪಷ್ಟನೆ ನೀಡಿದ ಶಿಶಿರ್
Aish
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Oct 01, 2025 | 10:16 AM

Share

ಶಿಶಿರ್ ಅವರು ಸದ್ಯ ಸುದ್ದಿಯಲ್ಲಿ ಇದ್ದಾರೆ. ಅವರ ನಟನೆಯ ‘ಶ್ರೀ ಗಂಧದಗುಡಿ’ ಧಾರಾವಾಹಿಯು ಕಲರ್ಸ್ ಕನ್ನಡದಲ್ಲಿ ಅಕ್ಟೋಬರ್ 6ರಿಂದ ರಾತ್ರಿ 8 ಗಂಟೆಗೆ ಪ್ರಸಾರ ಕಾಣಲಿದೆ. ಬಿಗ್ ಬಾಸ್​ ಮೂಲಕ ಅವರು ಜನಪ್ರಿಯತೆ ಪಡೆದರು. ಬಿಗ್ ಬಾಸ್ ಬಳಿಕ ಅವರು ನಟಿಸುತ್ತಿರುವ ಮೊದಲ ಧಾರಾವಾಹಿ ಇದು. ಹೀಗಿರುವಾಗಲೇ ಶಿಶಿರ್ ಅವರು ತಮ್ಮ ಬಗ್ಗೆ ಹರಿದಾಡಿದ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಏನು ವಿವಾದ? ಅವರ ಬಗ್ಗೆ ಹುಟ್ಟಿಕೊಂಡ ವದಂತಿ ಏನು? ಎಂಬುದರ ಕುರಿತು ಇಲ್ಲಿದೆ ವಿವರ.

ಶಿಶಿರ್ ಹಾಗೂ ಐಶ್ವರ್ಯಾ ಶಿಂಧೋಗಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಪರಸ್ಪರ ಪರಿಚಯ ಆದರು. ಈ ಶೋನಲ್ಲಿ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಸಾಮಾನ್ಯವಾಗಿ ಈ ಗೆಳೆತನ ಬಿಗ್ ಬಾಸ್ ಮನೆಗೆ ಮಾತ್ರ ಸೀಮಿತವಾಗಿರುತ್ತವೆ. ಆದರೆ, ಶಿಶಿರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಗೆಳೆತನ ಮುಂದುವರಿದಿದೆ.

ಈ ಗೆಳೆತನದ ಬಗ್ಗೆ ಅನೇಕರು ನಾನಾ ರೀತಿಯಲ್ಲಿ ಮಾತನಾಡಿದ್ದು ಇದೆ. ಕೆಲವರು ಇವರು ಲಿವಿನ್​ನಲ್ಲಿ ಇದ್ದಾರೆ ಎಂದು ಕೂಡ ಸುದ್ದಿ ಹಬ್ಬಿಸಿದ್ದಾರೆ. ಈ ವಿಚಾರವು ಶಿಶಿರ್​ಗೆ ಬೇಸರ ಮೂಡಿಸಿದೆ. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಆ ರೀತಿ ಏನು ಇಲ್ಲ ಎಂದಿದ್ದಾರೆ. ಶಿಶಿರ್ ಅವರು ತಂದೆ-ತಾಯಿ ಜೊತೆ ವಾಸವಾಗಿದ್ದರಂತೆ. ಇನ್ನು, ಐಶ್ವರ್ಯಾ ಅವರು ಹಾಯಾಗಿ ತಮ್ಮ ಶ್ವಾನ ಸಿಂಬಾ ಜೊತೆ ವಾಸವಿದ್ದಾರೆ. ‘ನಾವು ಲಿವಿನ್​ನಲ್ಲಿ ಇಲ್ಲ’ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ.

ಇದನ್ನೂ ಓದಿ
Image
ಅಡುಗೆ ಮಾಡುತ್ತಾ ರಿಷಬ್, ಮೇಘನಾ, ಸುದೀಪ್ ಹರಟೆ; ಅಪರೂಪದ ವಿಡಿಯೋ ಇಲ್ಲಿದೆ
Image
ಸ್ತನ ಕ್ಯಾನ್ಸರ್​ನಿಂದ ಕಿರುತೆರೆ ನಟಿ ಕಮಲಶ್ರೀ ನಿಧನ
Image
‘ನಾನೇನು ಸುಮ್ಮನೆ ಬಿಡಲಿಲ್ಲ’; ಮಾಜಿ ಪತಿ ಮಾಡಿದ ಕೆಟ್ಟ ಕೆಲಸ ಹೇಳಿದ ಜಾನ್ವಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಇದನ್ನೂ ಓದಿ: ಗಿಲ್ಲಿ ನಟನಿಗೆ ಕಾಮಿಡಿಯೇ ಮುಳುವಾಯ್ತು: ಬಿಗ್ ಬಾಸ್ ಕಡೆಯಿಂದ ಖಡಕ್ ಎಚ್ಚರಿಕೆ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಿಶಿರ್ ಸ್ಪರ್ಧಿಯಾಗಿ ಕಾಣಿಸಿಕೊಂಡರು. ಆ ಬಳಿಕ ಇವರ ಬೇಡಿಕೆ ಹೆಚ್ಚಾಯಿತು. ಈಗ ಅವರು ‘ಶ್ರೀ ಗಂಧದಗುಡಿ’ ಹೆಸರಿನ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಸಹೋದರರ ಕಥೆ. ಅಪ್ಪ-ಅಮ್ಮ ಇಲ್ಲದ ಮನೆಗೆ ಹೆಣ್ಣೊಬ್ಬಳು ಬರುತ್ತಾಳೆ. ಅವರು ಎದುರಿಸೋ ಸಮಸ್ಯೇಗಳೇ ಧಾರಾವಾಹಿಯ ಹೈಲೈಟ್ ಆಗಿರಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:13 am, Wed, 1 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ