ಐಶ್ವರ್ಯಾ ಹಾಗೂ ತಮ್ಮ ಬಗ್ಗೆ ಹರಿದಾಡಿದ ವದಂತಿಗೆ ಸ್ಪಷ್ಟನೆ ನೀಡಿದ ಶಿಶಿರ್

ಶಿಶಿರ್ ಹಾಗೂ ಐಶ್ವರ್ಯಾ ಶಿಂಧೋಗಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಪರಸ್ಪರ ಪರಿಚಯ ಆದರು. ಈ ಶೋನಲ್ಲಿ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಸಾಮಾನ್ಯವಾಗಿ ಈ ಗೆಳೆತನ ಬಿಗ್ ಬಾಸ್ ಮನೆಗೆ ಮಾತ್ರ ಸೀಮಿತವಾಗಿರುತ್ತವೆ. ಆದರೆ, ಶಿಶಿರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಗೆಳೆತನ ಮುಂದುವರಿದಿದೆ.

ಐಶ್ವರ್ಯಾ ಹಾಗೂ ತಮ್ಮ ಬಗ್ಗೆ ಹರಿದಾಡಿದ ವದಂತಿಗೆ ಸ್ಪಷ್ಟನೆ ನೀಡಿದ ಶಿಶಿರ್
Aish
Edited By:

Updated on: Oct 01, 2025 | 10:16 AM

ಶಿಶಿರ್ ಅವರು ಸದ್ಯ ಸುದ್ದಿಯಲ್ಲಿ ಇದ್ದಾರೆ. ಅವರ ನಟನೆಯ ‘ಶ್ರೀ ಗಂಧದಗುಡಿ’ ಧಾರಾವಾಹಿಯು ಕಲರ್ಸ್ ಕನ್ನಡದಲ್ಲಿ ಅಕ್ಟೋಬರ್ 6ರಿಂದ ರಾತ್ರಿ 8 ಗಂಟೆಗೆ ಪ್ರಸಾರ ಕಾಣಲಿದೆ. ಬಿಗ್ ಬಾಸ್​ ಮೂಲಕ ಅವರು ಜನಪ್ರಿಯತೆ ಪಡೆದರು. ಬಿಗ್ ಬಾಸ್ ಬಳಿಕ ಅವರು ನಟಿಸುತ್ತಿರುವ ಮೊದಲ ಧಾರಾವಾಹಿ ಇದು. ಹೀಗಿರುವಾಗಲೇ ಶಿಶಿರ್ ಅವರು ತಮ್ಮ ಬಗ್ಗೆ ಹರಿದಾಡಿದ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಏನು ವಿವಾದ? ಅವರ ಬಗ್ಗೆ ಹುಟ್ಟಿಕೊಂಡ ವದಂತಿ ಏನು? ಎಂಬುದರ ಕುರಿತು ಇಲ್ಲಿದೆ ವಿವರ.

ಶಿಶಿರ್ ಹಾಗೂ ಐಶ್ವರ್ಯಾ ಶಿಂಧೋಗಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಪರಸ್ಪರ ಪರಿಚಯ ಆದರು. ಈ ಶೋನಲ್ಲಿ ಇವರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಸಾಮಾನ್ಯವಾಗಿ ಈ ಗೆಳೆತನ ಬಿಗ್ ಬಾಸ್ ಮನೆಗೆ ಮಾತ್ರ ಸೀಮಿತವಾಗಿರುತ್ತವೆ. ಆದರೆ, ಶಿಶಿರ್ ಅವರು ಬಿಗ್ ಬಾಸ್​ನಿಂದ ಹೊರ ಬಂದ ಬಳಿಕವೂ ಗೆಳೆತನ ಮುಂದುವರಿದಿದೆ.

ಈ ಗೆಳೆತನದ ಬಗ್ಗೆ ಅನೇಕರು ನಾನಾ ರೀತಿಯಲ್ಲಿ ಮಾತನಾಡಿದ್ದು ಇದೆ. ಕೆಲವರು ಇವರು ಲಿವಿನ್​ನಲ್ಲಿ ಇದ್ದಾರೆ ಎಂದು ಕೂಡ ಸುದ್ದಿ ಹಬ್ಬಿಸಿದ್ದಾರೆ. ಈ ವಿಚಾರವು ಶಿಶಿರ್​ಗೆ ಬೇಸರ ಮೂಡಿಸಿದೆ. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಆ ರೀತಿ ಏನು ಇಲ್ಲ ಎಂದಿದ್ದಾರೆ. ಶಿಶಿರ್ ಅವರು ತಂದೆ-ತಾಯಿ ಜೊತೆ ವಾಸವಾಗಿದ್ದರಂತೆ. ಇನ್ನು, ಐಶ್ವರ್ಯಾ ಅವರು ಹಾಯಾಗಿ ತಮ್ಮ ಶ್ವಾನ ಸಿಂಬಾ ಜೊತೆ ವಾಸವಿದ್ದಾರೆ. ‘ನಾವು ಲಿವಿನ್​ನಲ್ಲಿ ಇಲ್ಲ’ ಎಂದು ನೇರ ಮಾತುಗಳಲ್ಲಿ ಹೇಳಿದ್ದಾರೆ.

ಇದನ್ನೂ ಓದಿ
ಅಡುಗೆ ಮಾಡುತ್ತಾ ರಿಷಬ್, ಮೇಘನಾ, ಸುದೀಪ್ ಹರಟೆ; ಅಪರೂಪದ ವಿಡಿಯೋ ಇಲ್ಲಿದೆ
ಸ್ತನ ಕ್ಯಾನ್ಸರ್​ನಿಂದ ಕಿರುತೆರೆ ನಟಿ ಕಮಲಶ್ರೀ ನಿಧನ
‘ನಾನೇನು ಸುಮ್ಮನೆ ಬಿಡಲಿಲ್ಲ’; ಮಾಜಿ ಪತಿ ಮಾಡಿದ ಕೆಟ್ಟ ಕೆಲಸ ಹೇಳಿದ ಜಾನ್ವಿ
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಇದನ್ನೂ ಓದಿ: ಗಿಲ್ಲಿ ನಟನಿಗೆ ಕಾಮಿಡಿಯೇ ಮುಳುವಾಯ್ತು: ಬಿಗ್ ಬಾಸ್ ಕಡೆಯಿಂದ ಖಡಕ್ ಎಚ್ಚರಿಕೆ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಿಶಿರ್ ಸ್ಪರ್ಧಿಯಾಗಿ ಕಾಣಿಸಿಕೊಂಡರು. ಆ ಬಳಿಕ ಇವರ ಬೇಡಿಕೆ ಹೆಚ್ಚಾಯಿತು. ಈಗ ಅವರು ‘ಶ್ರೀ ಗಂಧದಗುಡಿ’ ಹೆಸರಿನ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಸಹೋದರರ ಕಥೆ. ಅಪ್ಪ-ಅಮ್ಮ ಇಲ್ಲದ ಮನೆಗೆ ಹೆಣ್ಣೊಬ್ಬಳು ಬರುತ್ತಾಳೆ. ಅವರು ಎದುರಿಸೋ ಸಮಸ್ಯೇಗಳೇ ಧಾರಾವಾಹಿಯ ಹೈಲೈಟ್ ಆಗಿರಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:13 am, Wed, 1 October 25

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us