AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Finale: ಬಿಗ್​ ಬಾಸ್​ನಿಂದ ದಿವ್ಯಾ ಉರುಡುಗ ಔಟ್​; ಆಪ್ತ ಗೆಳತಿಯನ್ನೇ ಹಿಂದಿಕ್ಕಿದ ಅರವಿಂದ್​​ ಕೆಪಿ

Divya Uruduga: ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆಗೆ ಎಂಟ್ರಿ ಪಡೆಯುವ ಮೂಲಕ ನಟಿ ದಿವ್ಯಾ ಉರುಡುಗ ಅವರು ಭರವಸೆ ಮೂಡಿಸಿದ್ದರು. ಆದರೆ ಇನ್ನೇನು ಟ್ರೋಫಿ ಕೈಯಲ್ಲಿ ಹಿಡಿಯಬೇಕು ಎನ್ನುವಷ್ಟರಲ್ಲಿ ಅವರು ಎಲಿಮಿನೇಟ್​ ಆಗಿದ್ದಾರೆ.

Bigg Boss Finale: ಬಿಗ್​ ಬಾಸ್​ನಿಂದ ದಿವ್ಯಾ ಉರುಡುಗ ಔಟ್​; ಆಪ್ತ ಗೆಳತಿಯನ್ನೇ ಹಿಂದಿಕ್ಕಿದ ಅರವಿಂದ್​​ ಕೆಪಿ
ದಿವ್ಯಾ ಉರುಡುಗ
TV9 Web
| Edited By: |

Updated on:Aug 08, 2021 | 10:50 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆ (Bigg Boss Finale) ಎಪಿಸೋಡ್​ನಲ್ಲಿ ದಿವ್ಯಾ ಉರುಡುಗ (Divya Uruduga) ಎಲಿಮಿನೇಟ್​ ಆಗಿದ್ದಾರೆ. 120 ದಿನಗಳ ಕಾಲ ಕಠಿಣ ಪೈಪೋಟಿ ನೀಡಿದ್ದ ಅವರು ಫಿನಾಲೆ ಪ್ರವೇಶಿಸುವಲ್ಲಿ ಯಶಸ್ವಿ ಆಗಿದ್ದರು. ಟಾಪ್​ 3 ಸ್ಪರ್ಧಿಗಳಲ್ಲಿ ಸ್ಥಾನ ಪಡೆಯುವ ಮೂಲಕ ಭರವಸೆ ಮೂಡಿಸಿದ್ದರು. ಆದರೆ ಕೊನೇ ಕ್ಷಣದಲ್ಲಿ ಅವರಿಗೆ ಹಿನ್ನಡೆ ಆಗಿದೆ. ವೀಕ್ಷಕರಿಂದ ಹೆಚ್ಚು ವೋಟ್​ ಪಡೆಯುವಲ್ಲಿ ಅವರು ವಿಫಲರಾಗಿದ್ದಾರೆ. ಮಂಜು ಪಾವಗಡ, ಅರವಿಂದ್​ ಕೆಪಿ (Aravind KP) ಮತ್ತು ದಿವ್ಯಾ ಉರುಡುಗ ಫಿನಾಲೆ ಪ್ರವೇಶಿಸಿದ್ದರು. ದಿವ್ಯಾಗಿಂತಲೂ ಅರವಿಂದ್​ ಹೆಚ್ಚು ವೋಟ್​ ಪಡೆಯುವ ಮೂಲಕ ತಮ್ಮ ಆಪ್ತ ಸ್ನೇಹಿತೆಯನ್ನೇ ಹಿಂದಿಕ್ಕಿದ್ದಾರೆ. ಈಗ ಮಂಜು ಮತ್ತು ಅರವಿಂದ್​ ನಡುವೆ ಹಣಾಹಣಿ ಮುಂದುವರಿದಿದೆ.

ಈ ಸೀಸನ್​ನಲ್ಲಿ ಅರವಿಂದ್​ ಕೆಪಿ ಮತ್ತು ದಿವ್ಯಾ ಉರುಡುಗ ಅವರು ಬೆಸ್ಟ್​ ಜೋಡಿ ಆಗಿದ್ದರು. ಎಲ್ಲ ವಿಚಾರದಲ್ಲಿಯೂ ಒಬ್ಬರಿಗೊಬ್ಬರು ಸಪೋರ್ಟ್​ ಮಾಡಿಕೊಳ್ಳುತ್ತ ಮುಂದೆ ಸಾಗುತ್ತಿದ್ದರು. ಇಬ್ಬರೂ ರಿಯಲ್​ ಲೈಫ್​ನಲ್ಲಿ ಕೂಡ ಜೊತೆಯಾಗಿದ್ದರೆ ಚೆಂದ ಎಂದು ವೀಕ್ಷಕರು ಮಾತನಾಡಿಕೊಳ್ಳುವ ಮಟ್ಟಕ್ಕೆ ಈ ಜೋಡಿಯ ನಡುವೆ ಬಾಂಧವ್ಯ ಇತ್ತು. ಅಂತಿಮವಾಗಿ ಅವರಿಬ್ಬರ ನಡುವೆಯೇ ಬಿಗ್​ ಬಾಸ್​ ಫಿನಾಲೆಯ ಟಫ್​ ಕಾಂಪಿಟೀಷನ್​ ನಡೆಯಿತು.

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗಗೆ ಹೋಲಿಸಿದರೆ ಅರವಿಂದ್​​ ಅವರಿಗೆ ಜನಪ್ರಿಯತೆ ಜಾಸ್ತಿ ಇತ್ತು. ಅವರು ಮನರಂಜನೆ ಕ್ಷೇತ್ರದಿಂದ ಬಾರದಿದ್ದರೂ ಹೆಚ್ಚು ವೋಟ್​ ಪಡೆಯುವಲ್ಲಿ ಯಶಸ್ವಿ ಆದರು. ಟಾಸ್ಕ್​ನಲ್ಲಿಯೂ ಅವರು ಹಿಂದೆ ಬಿದ್ದಿರಲಿಲ್ಲ. ಅವರ ಜೊತೆ ಹೆಚ್ಚು ಆಪ್ತವಾಗಿ ಗುರುತಿಸಿಕೊಂಡಿದ್ದೇ ದಿವ್ಯಾಗೆ ಮುಳುವಾಗಿರಬಹುದು ಎಂಬ ಅಭಿಪ್ರಾಯ ವೀಕ್ಷಕರ ವರ್ಗದಿಂದ ಕೇಳಿಬರುತ್ತಿದೆ.

ತಾವು ಔಟ್​ ಎಂದು ಗೊತ್ತಾದ ತಕ್ಷಣ ದಿವ್ಯಾ ಉರುಡುಗ ಭಾವುಕರಾದರು. ಅವರಿಗಿಂತಲೂ ಹೆಚ್ಚಾಗಿ ಅರವಿಂದ್​ ಅವರು ಎಮೋಷನಲ್​ ಆದರು. ಕಣ್ಣೀರು ಹಾಕುತ್ತಲೇ ದಿವ್ಯಾ ಅವರು ತಮ್ಮ ಬಿಗ್​ ಬಾಸ್​ ಜರ್ನಿಗೆ ಅಂತ್ಯ ಹಾಡಿದರು. ಅವರ ಕಣ್ಣೀರು ಒರೆಸಿ ಅರವಿಂದ್​ ಮತ್ತು ಮಂಜು ಬೀಳ್ಕೊಟ್ಟರು. ‘ಇದು ನನ್ನ ಅದ್ಭುತ ಅನುಭವ. ಇದನ್ನು ನಾನು ಜೀವನ ಪರ್ಯಂತ ಕಾಪಾಡಿಕೊಳ್ಳುತ್ತೇನೆ’ ಎಂದು ದೊಡ್ಮನೆಯೊಳಗೆ ದಿವ್ಯಾ ಕೊನೇ ಮಾತುಗಳನ್ನು ಆಡಿದರು.​

ಇದನ್ನೂ ಓದಿ:

Bigg Boss Finale: ಬಿಗ್​ ಬಾಸ್​​ ಸ್ಕ್ರಿಪ್ಟೆಡ್ ಶೋ ಹೌದೋ ಅಲ್ಲವೋ? ಸುದೀಪ್​ ಎದುರು ನೇರವಾಗಿ ಉತ್ತರ ಕೊಟ್ಟ ವೈಷ್ಣವಿ

ಬಿಗ್​ ಬಾಸ್​ ಪ್ರಶಸ್ತಿ ಮೊತ್ತದಲ್ಲಿ ಏರಿಕೆ; ಟಾಪ್​ 5ನಲ್ಲಿರುವ ಎಲ್ಲರಿಗೂ ಸಿಗುತ್ತಿದೆ ಪ್ರೈಜ್​​​ ಅಮೌಂಟ್​

Published On - 10:33 pm, Sun, 8 August 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?