Bigg Boss Finale: ಬಿಗ್​ ಬಾಸ್​ನಿಂದ ದಿವ್ಯಾ ಉರುಡುಗ ಔಟ್​; ಆಪ್ತ ಗೆಳತಿಯನ್ನೇ ಹಿಂದಿಕ್ಕಿದ ಅರವಿಂದ್​​ ಕೆಪಿ

Divya Uruduga: ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆಗೆ ಎಂಟ್ರಿ ಪಡೆಯುವ ಮೂಲಕ ನಟಿ ದಿವ್ಯಾ ಉರುಡುಗ ಅವರು ಭರವಸೆ ಮೂಡಿಸಿದ್ದರು. ಆದರೆ ಇನ್ನೇನು ಟ್ರೋಫಿ ಕೈಯಲ್ಲಿ ಹಿಡಿಯಬೇಕು ಎನ್ನುವಷ್ಟರಲ್ಲಿ ಅವರು ಎಲಿಮಿನೇಟ್​ ಆಗಿದ್ದಾರೆ.

Bigg Boss Finale: ಬಿಗ್​ ಬಾಸ್​ನಿಂದ ದಿವ್ಯಾ ಉರುಡುಗ ಔಟ್​; ಆಪ್ತ ಗೆಳತಿಯನ್ನೇ ಹಿಂದಿಕ್ಕಿದ ಅರವಿಂದ್​​ ಕೆಪಿ
ದಿವ್ಯಾ ಉರುಡುಗ
Follow us
| Updated By: ಮದನ್​ ಕುಮಾರ್​

Updated on:Aug 08, 2021 | 10:50 PM

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆ (Bigg Boss Finale) ಎಪಿಸೋಡ್​ನಲ್ಲಿ ದಿವ್ಯಾ ಉರುಡುಗ (Divya Uruduga) ಎಲಿಮಿನೇಟ್​ ಆಗಿದ್ದಾರೆ. 120 ದಿನಗಳ ಕಾಲ ಕಠಿಣ ಪೈಪೋಟಿ ನೀಡಿದ್ದ ಅವರು ಫಿನಾಲೆ ಪ್ರವೇಶಿಸುವಲ್ಲಿ ಯಶಸ್ವಿ ಆಗಿದ್ದರು. ಟಾಪ್​ 3 ಸ್ಪರ್ಧಿಗಳಲ್ಲಿ ಸ್ಥಾನ ಪಡೆಯುವ ಮೂಲಕ ಭರವಸೆ ಮೂಡಿಸಿದ್ದರು. ಆದರೆ ಕೊನೇ ಕ್ಷಣದಲ್ಲಿ ಅವರಿಗೆ ಹಿನ್ನಡೆ ಆಗಿದೆ. ವೀಕ್ಷಕರಿಂದ ಹೆಚ್ಚು ವೋಟ್​ ಪಡೆಯುವಲ್ಲಿ ಅವರು ವಿಫಲರಾಗಿದ್ದಾರೆ. ಮಂಜು ಪಾವಗಡ, ಅರವಿಂದ್​ ಕೆಪಿ (Aravind KP) ಮತ್ತು ದಿವ್ಯಾ ಉರುಡುಗ ಫಿನಾಲೆ ಪ್ರವೇಶಿಸಿದ್ದರು. ದಿವ್ಯಾಗಿಂತಲೂ ಅರವಿಂದ್​ ಹೆಚ್ಚು ವೋಟ್​ ಪಡೆಯುವ ಮೂಲಕ ತಮ್ಮ ಆಪ್ತ ಸ್ನೇಹಿತೆಯನ್ನೇ ಹಿಂದಿಕ್ಕಿದ್ದಾರೆ. ಈಗ ಮಂಜು ಮತ್ತು ಅರವಿಂದ್​ ನಡುವೆ ಹಣಾಹಣಿ ಮುಂದುವರಿದಿದೆ.

ಈ ಸೀಸನ್​ನಲ್ಲಿ ಅರವಿಂದ್​ ಕೆಪಿ ಮತ್ತು ದಿವ್ಯಾ ಉರುಡುಗ ಅವರು ಬೆಸ್ಟ್​ ಜೋಡಿ ಆಗಿದ್ದರು. ಎಲ್ಲ ವಿಚಾರದಲ್ಲಿಯೂ ಒಬ್ಬರಿಗೊಬ್ಬರು ಸಪೋರ್ಟ್​ ಮಾಡಿಕೊಳ್ಳುತ್ತ ಮುಂದೆ ಸಾಗುತ್ತಿದ್ದರು. ಇಬ್ಬರೂ ರಿಯಲ್​ ಲೈಫ್​ನಲ್ಲಿ ಕೂಡ ಜೊತೆಯಾಗಿದ್ದರೆ ಚೆಂದ ಎಂದು ವೀಕ್ಷಕರು ಮಾತನಾಡಿಕೊಳ್ಳುವ ಮಟ್ಟಕ್ಕೆ ಈ ಜೋಡಿಯ ನಡುವೆ ಬಾಂಧವ್ಯ ಇತ್ತು. ಅಂತಿಮವಾಗಿ ಅವರಿಬ್ಬರ ನಡುವೆಯೇ ಬಿಗ್​ ಬಾಸ್​ ಫಿನಾಲೆಯ ಟಫ್​ ಕಾಂಪಿಟೀಷನ್​ ನಡೆಯಿತು.

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗಗೆ ಹೋಲಿಸಿದರೆ ಅರವಿಂದ್​​ ಅವರಿಗೆ ಜನಪ್ರಿಯತೆ ಜಾಸ್ತಿ ಇತ್ತು. ಅವರು ಮನರಂಜನೆ ಕ್ಷೇತ್ರದಿಂದ ಬಾರದಿದ್ದರೂ ಹೆಚ್ಚು ವೋಟ್​ ಪಡೆಯುವಲ್ಲಿ ಯಶಸ್ವಿ ಆದರು. ಟಾಸ್ಕ್​ನಲ್ಲಿಯೂ ಅವರು ಹಿಂದೆ ಬಿದ್ದಿರಲಿಲ್ಲ. ಅವರ ಜೊತೆ ಹೆಚ್ಚು ಆಪ್ತವಾಗಿ ಗುರುತಿಸಿಕೊಂಡಿದ್ದೇ ದಿವ್ಯಾಗೆ ಮುಳುವಾಗಿರಬಹುದು ಎಂಬ ಅಭಿಪ್ರಾಯ ವೀಕ್ಷಕರ ವರ್ಗದಿಂದ ಕೇಳಿಬರುತ್ತಿದೆ.

ತಾವು ಔಟ್​ ಎಂದು ಗೊತ್ತಾದ ತಕ್ಷಣ ದಿವ್ಯಾ ಉರುಡುಗ ಭಾವುಕರಾದರು. ಅವರಿಗಿಂತಲೂ ಹೆಚ್ಚಾಗಿ ಅರವಿಂದ್​ ಅವರು ಎಮೋಷನಲ್​ ಆದರು. ಕಣ್ಣೀರು ಹಾಕುತ್ತಲೇ ದಿವ್ಯಾ ಅವರು ತಮ್ಮ ಬಿಗ್​ ಬಾಸ್​ ಜರ್ನಿಗೆ ಅಂತ್ಯ ಹಾಡಿದರು. ಅವರ ಕಣ್ಣೀರು ಒರೆಸಿ ಅರವಿಂದ್​ ಮತ್ತು ಮಂಜು ಬೀಳ್ಕೊಟ್ಟರು. ‘ಇದು ನನ್ನ ಅದ್ಭುತ ಅನುಭವ. ಇದನ್ನು ನಾನು ಜೀವನ ಪರ್ಯಂತ ಕಾಪಾಡಿಕೊಳ್ಳುತ್ತೇನೆ’ ಎಂದು ದೊಡ್ಮನೆಯೊಳಗೆ ದಿವ್ಯಾ ಕೊನೇ ಮಾತುಗಳನ್ನು ಆಡಿದರು.​

ಇದನ್ನೂ ಓದಿ:

Bigg Boss Finale: ಬಿಗ್​ ಬಾಸ್​​ ಸ್ಕ್ರಿಪ್ಟೆಡ್ ಶೋ ಹೌದೋ ಅಲ್ಲವೋ? ಸುದೀಪ್​ ಎದುರು ನೇರವಾಗಿ ಉತ್ತರ ಕೊಟ್ಟ ವೈಷ್ಣವಿ

ಬಿಗ್​ ಬಾಸ್​ ಪ್ರಶಸ್ತಿ ಮೊತ್ತದಲ್ಲಿ ಏರಿಕೆ; ಟಾಪ್​ 5ನಲ್ಲಿರುವ ಎಲ್ಲರಿಗೂ ಸಿಗುತ್ತಿದೆ ಪ್ರೈಜ್​​​ ಅಮೌಂಟ್​

Published On - 10:33 pm, Sun, 8 August 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ