AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ದೊಡ್ಮನೆಯೊಳಗೆ ವೈಷ್ಣವಿ ಜೊತೆ ಚೆನ್ನಾಗಿದ್ದ ರಘು ಗೌಡ ಫಿನಾಲೆ ವೇಳೆಗೆ ಪ್ರಚಾರ ಮಾಡಿದ್ದು ಯಾರ ಪರವಾಗಿ?

Bigg Boss Finale: ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆಪಿ, ದಿವ್ಯಾ ಉರುಡುಗ, ವೈಷ್ಣವಿ ಗೌಡ, ಪ್ರಶಾಂತ್​ ಸಂಬರಗಿ ಪರವಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ರಘು ಗೌಡ ಯಾರ ಪರವಾಗಿ ಪ್ರಚಾರ ಮಾಡುತ್ತಾರೆ ಎಂಬ ಕೌತುಕ ಸಹಜ.

Vaishnavi Gowda: ದೊಡ್ಮನೆಯೊಳಗೆ ವೈಷ್ಣವಿ ಜೊತೆ ಚೆನ್ನಾಗಿದ್ದ ರಘು ಗೌಡ ಫಿನಾಲೆ ವೇಳೆಗೆ ಪ್ರಚಾರ ಮಾಡಿದ್ದು ಯಾರ ಪರವಾಗಿ?
ವೈಷ್ಣವಿ, ರಘು ಗೌಡ
TV9 Web
| Edited By: |

Updated on:Aug 03, 2021 | 12:39 PM

Share

ಬಿಗ್​ ಬಾಸ್​ ಕನ್ನಡ (Bigg Boss) ಸೀಸನ್​ 8ರಲ್ಲಿ ಅನೇಕ ಘಟನೆಗಳು ನಡೆದಿವೆ. ಅಪರಿಚಿತರಾಗಿ ಮನೆಯೊಳಗೆ ಹೋದವರು ನಂತರ ಗೆಳೆಯರಾದರು. ಮೊದಲು ಗೆಳೆಯರಾಗಿದ್ದವರು ಮನೆಯೊಳಗೆ ಬಂದು ಮನಸ್ತಾಪ ಮಾಡಿಕೊಂಡರು. ಹೀಗೆ ಎಲ್ಲ ಏಳು-ಬೀಳುಗಳಿಗೂ ದೊಡ್ಮನೆ ಸಾಕ್ಷಿ ಆಗಿದೆ. ಬಿಗ್ ಬಾಸ್​ಗೆ ಬರುವುದಕ್ಕೂ ಮುನ್ನ ವೈಷ್ಣವಿ ಗೌಡ (Vaishnavi Gowda) ಮತ್ತು ರಘು ಗೌಡ (Raghu Gowda) ನಡುವೆ ಯಾವುದೇ ಪರಿಚಯ ಇರಲಿಲ್ಲ. ಆದರೆ ದಿನಕಳೆದಂತೆ ಇಬ್ಬರ ನಡುವೆ ಹೊಂದಾಣಿಕೆ ಮೂಡಲು ಆರಂಭಿಸಿತು. ನಂತರ ಇಬ್ಬರೂ ಬೆಸ್ಟ್​ ಫ್ರೆಂಡ್ಸ್​ ಆದರು.

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನಲ್ಲಿ ರಘು ಗೌಡ ಎಲಿಮಿನೇಟ್​ ಆದರು. ಆದರೆ ವೈಷ್ಣವಿ ಗೌಡ ಇನ್ನೂ ಮನೆಯೊಳಗೆ ಇದ್ದುಕೊಂಡು ಫಿನಾಲೆಯ ಕನಸು ಕಾಣುತ್ತಿದ್ದಾರೆ. ಇದು ಅಂತಿಮ ವಾರ ಆಗಿರುವುದರಿಂದ ಉಳಿದಿರುವ ಆರು ಸ್ಪರ್ಧಿಗಳ ನಡುವೆ ಪೈಪೋಟಿ ಜೋರಾಗಿದೆ. ಈ ಕೊನೇ ಹಂತದಲ್ಲಿ ಯಾರಿಗೆ ಎಷ್ಟು ವೋಟ್​ ಸಿಗುತ್ತದೆ ಎಂಬುದು ತುಂಬ ಮುಖ್ಯವಾಗುತ್ತದೆ. ಅದಕ್ಕಾಗಿ ಸೋಶಿಯಲ್​ ಮೀಡಿಯಾದಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ.

ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆಪಿ, ದಿವ್ಯಾ ಉರುಡುಗ, ವೈಷ್ಣವಿ ಗೌಡ, ಪ್ರಶಾಂತ್​ ಸಂಬರಗಿ ಪರವಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ರಘು ಗೌಡ ಯಾರ ಪರವಾಗಿ ಪ್ರಚಾರ ಮಾಡುತ್ತಾರೆ ಎಂಬ ಕೌತುಕ ಸಹಜ. ಅದಕ್ಕೀಗ ಉತ್ತರವೂ ಸಿಕ್ಕಿದೆ. ಬಿಗ್​ ಬಾಸ್​ ಮನೆಯಿಂದ ಹೊರಬಂದ ಬಳಿಕ ರಘು ಗೌಡ ಪಾರ್ಟಿ ಬದಲಾಯಿಸಿಲ್ಲ. ಮನೆಯೊಳಗೆ ಇದ್ದಾಗ ವೈಷ್ಣವಿಗೆ ಅವರು ಸಪೋರ್ಟ್​ ಮಾಡುತ್ತಿದ್ದರು. ಮನೆಯಿಂದ ಹೊರಬಂದಾಗಲೂ ಅವರು ಅದನ್ನು ಮುಂದುವರಿಸಿದ್ದಾರೆ.

‘ಬಿಗ್​ ಬಾಸ್​ ಫಿನಾಲೆ ವಾರ ಬಂದಿದೆ. ಅಲ್ಲಿರುವ ಎಲ್ಲರೂ ಒಬ್ಬರಿಗಿಂತ ಒಬ್ಬರು ಕ್ರೇಜಿಯಾಗಿ ಆಡ್ತಾ ಇದಾರೆ. ಅಲ್ಲಿರುವ ಎಲ್ಲರೂ ಘಟಾನುಘಟಿಗಳೇ ಅಂತ ಹೇಳಬೇಕು. ಆದರೆ ವೋಟ್ ಮಾಡುವಾಗ ನಮ್ಮ-ನಿಮ್ಮ ನೆಚ್ಚಿನ ವೈಷ್ಣವಿಗೆ ವೋಟ್​ ಮಾಡಿ. ಇಷ್ಟು ದಿನ ಅವರ ಮೇಲೆ ಪ್ರೀತಿ-ಅಭಿಮಾನ ತೋರಿಸಿದ್ದೀರಿ. ಅವರು ಬಿಗ್​ ಬಾಸ್​ ಗೆದ್ದರೆ ನಂಗೆ ಪಾರ್ಟಿ ಕೊಡಿಸುತ್ತೀನಿ ಅಂತ ಹೇಳಿದಾರೆ. ಅದಕ್ಕಾದರೂ ಅವರನ್ನು ಗೆಲ್ಲಿಸಲೇಬೇಕು’ ಎಂದು ರಘು ಗೌಡ ವಿಡಿಯೋ ಮೂಲಕ ಹೇಳಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ನಿಂದ ರಘು ಎಲಿಮಿನೇಟ್​ ಆಗೋಕೆ ಕಾರಣವಾಯ್ತು ಈ ಒಂದು ವಿಚಾರ 

‘ಅವರಿಗೂ ಒಂದು ಕುಟುಂಬ ಇದೆ ನೆನಪಿರಲಿ’; ರಘು-ವೈಷ್ಣವಿ ಗೆಳೆತನಕ್ಕೆ ಬೇರೆ ರೀತಿಯ ಬಣ್ಣ ಹಚ್ಚಿದ ಚಂದ್ರಚೂಡ್​ಗೆ ಕ್ಲಾಸ್​  

Published On - 12:25 pm, Tue, 3 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ