AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ದೊಡ್ಮನೆಯೊಳಗೆ ವೈಷ್ಣವಿ ಜೊತೆ ಚೆನ್ನಾಗಿದ್ದ ರಘು ಗೌಡ ಫಿನಾಲೆ ವೇಳೆಗೆ ಪ್ರಚಾರ ಮಾಡಿದ್ದು ಯಾರ ಪರವಾಗಿ?

Bigg Boss Finale: ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆಪಿ, ದಿವ್ಯಾ ಉರುಡುಗ, ವೈಷ್ಣವಿ ಗೌಡ, ಪ್ರಶಾಂತ್​ ಸಂಬರಗಿ ಪರವಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ರಘು ಗೌಡ ಯಾರ ಪರವಾಗಿ ಪ್ರಚಾರ ಮಾಡುತ್ತಾರೆ ಎಂಬ ಕೌತುಕ ಸಹಜ.

Vaishnavi Gowda: ದೊಡ್ಮನೆಯೊಳಗೆ ವೈಷ್ಣವಿ ಜೊತೆ ಚೆನ್ನಾಗಿದ್ದ ರಘು ಗೌಡ ಫಿನಾಲೆ ವೇಳೆಗೆ ಪ್ರಚಾರ ಮಾಡಿದ್ದು ಯಾರ ಪರವಾಗಿ?
ವೈಷ್ಣವಿ, ರಘು ಗೌಡ
TV9 Web
| Edited By: |

Updated on:Aug 03, 2021 | 12:39 PM

Share

ಬಿಗ್​ ಬಾಸ್​ ಕನ್ನಡ (Bigg Boss) ಸೀಸನ್​ 8ರಲ್ಲಿ ಅನೇಕ ಘಟನೆಗಳು ನಡೆದಿವೆ. ಅಪರಿಚಿತರಾಗಿ ಮನೆಯೊಳಗೆ ಹೋದವರು ನಂತರ ಗೆಳೆಯರಾದರು. ಮೊದಲು ಗೆಳೆಯರಾಗಿದ್ದವರು ಮನೆಯೊಳಗೆ ಬಂದು ಮನಸ್ತಾಪ ಮಾಡಿಕೊಂಡರು. ಹೀಗೆ ಎಲ್ಲ ಏಳು-ಬೀಳುಗಳಿಗೂ ದೊಡ್ಮನೆ ಸಾಕ್ಷಿ ಆಗಿದೆ. ಬಿಗ್ ಬಾಸ್​ಗೆ ಬರುವುದಕ್ಕೂ ಮುನ್ನ ವೈಷ್ಣವಿ ಗೌಡ (Vaishnavi Gowda) ಮತ್ತು ರಘು ಗೌಡ (Raghu Gowda) ನಡುವೆ ಯಾವುದೇ ಪರಿಚಯ ಇರಲಿಲ್ಲ. ಆದರೆ ದಿನಕಳೆದಂತೆ ಇಬ್ಬರ ನಡುವೆ ಹೊಂದಾಣಿಕೆ ಮೂಡಲು ಆರಂಭಿಸಿತು. ನಂತರ ಇಬ್ಬರೂ ಬೆಸ್ಟ್​ ಫ್ರೆಂಡ್ಸ್​ ಆದರು.

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನಲ್ಲಿ ರಘು ಗೌಡ ಎಲಿಮಿನೇಟ್​ ಆದರು. ಆದರೆ ವೈಷ್ಣವಿ ಗೌಡ ಇನ್ನೂ ಮನೆಯೊಳಗೆ ಇದ್ದುಕೊಂಡು ಫಿನಾಲೆಯ ಕನಸು ಕಾಣುತ್ತಿದ್ದಾರೆ. ಇದು ಅಂತಿಮ ವಾರ ಆಗಿರುವುದರಿಂದ ಉಳಿದಿರುವ ಆರು ಸ್ಪರ್ಧಿಗಳ ನಡುವೆ ಪೈಪೋಟಿ ಜೋರಾಗಿದೆ. ಈ ಕೊನೇ ಹಂತದಲ್ಲಿ ಯಾರಿಗೆ ಎಷ್ಟು ವೋಟ್​ ಸಿಗುತ್ತದೆ ಎಂಬುದು ತುಂಬ ಮುಖ್ಯವಾಗುತ್ತದೆ. ಅದಕ್ಕಾಗಿ ಸೋಶಿಯಲ್​ ಮೀಡಿಯಾದಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ.

ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆಪಿ, ದಿವ್ಯಾ ಉರುಡುಗ, ವೈಷ್ಣವಿ ಗೌಡ, ಪ್ರಶಾಂತ್​ ಸಂಬರಗಿ ಪರವಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ರಘು ಗೌಡ ಯಾರ ಪರವಾಗಿ ಪ್ರಚಾರ ಮಾಡುತ್ತಾರೆ ಎಂಬ ಕೌತುಕ ಸಹಜ. ಅದಕ್ಕೀಗ ಉತ್ತರವೂ ಸಿಕ್ಕಿದೆ. ಬಿಗ್​ ಬಾಸ್​ ಮನೆಯಿಂದ ಹೊರಬಂದ ಬಳಿಕ ರಘು ಗೌಡ ಪಾರ್ಟಿ ಬದಲಾಯಿಸಿಲ್ಲ. ಮನೆಯೊಳಗೆ ಇದ್ದಾಗ ವೈಷ್ಣವಿಗೆ ಅವರು ಸಪೋರ್ಟ್​ ಮಾಡುತ್ತಿದ್ದರು. ಮನೆಯಿಂದ ಹೊರಬಂದಾಗಲೂ ಅವರು ಅದನ್ನು ಮುಂದುವರಿಸಿದ್ದಾರೆ.

‘ಬಿಗ್​ ಬಾಸ್​ ಫಿನಾಲೆ ವಾರ ಬಂದಿದೆ. ಅಲ್ಲಿರುವ ಎಲ್ಲರೂ ಒಬ್ಬರಿಗಿಂತ ಒಬ್ಬರು ಕ್ರೇಜಿಯಾಗಿ ಆಡ್ತಾ ಇದಾರೆ. ಅಲ್ಲಿರುವ ಎಲ್ಲರೂ ಘಟಾನುಘಟಿಗಳೇ ಅಂತ ಹೇಳಬೇಕು. ಆದರೆ ವೋಟ್ ಮಾಡುವಾಗ ನಮ್ಮ-ನಿಮ್ಮ ನೆಚ್ಚಿನ ವೈಷ್ಣವಿಗೆ ವೋಟ್​ ಮಾಡಿ. ಇಷ್ಟು ದಿನ ಅವರ ಮೇಲೆ ಪ್ರೀತಿ-ಅಭಿಮಾನ ತೋರಿಸಿದ್ದೀರಿ. ಅವರು ಬಿಗ್​ ಬಾಸ್​ ಗೆದ್ದರೆ ನಂಗೆ ಪಾರ್ಟಿ ಕೊಡಿಸುತ್ತೀನಿ ಅಂತ ಹೇಳಿದಾರೆ. ಅದಕ್ಕಾದರೂ ಅವರನ್ನು ಗೆಲ್ಲಿಸಲೇಬೇಕು’ ಎಂದು ರಘು ಗೌಡ ವಿಡಿಯೋ ಮೂಲಕ ಹೇಳಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ನಿಂದ ರಘು ಎಲಿಮಿನೇಟ್​ ಆಗೋಕೆ ಕಾರಣವಾಯ್ತು ಈ ಒಂದು ವಿಚಾರ 

‘ಅವರಿಗೂ ಒಂದು ಕುಟುಂಬ ಇದೆ ನೆನಪಿರಲಿ’; ರಘು-ವೈಷ್ಣವಿ ಗೆಳೆತನಕ್ಕೆ ಬೇರೆ ರೀತಿಯ ಬಣ್ಣ ಹಚ್ಚಿದ ಚಂದ್ರಚೂಡ್​ಗೆ ಕ್ಲಾಸ್​  

Published On - 12:25 pm, Tue, 3 August 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ