Vaishnavi Gowda: ದೊಡ್ಮನೆಯೊಳಗೆ ವೈಷ್ಣವಿ ಜೊತೆ ಚೆನ್ನಾಗಿದ್ದ ರಘು ಗೌಡ ಫಿನಾಲೆ ವೇಳೆಗೆ ಪ್ರಚಾರ ಮಾಡಿದ್ದು ಯಾರ ಪರವಾಗಿ?

Bigg Boss Finale: ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆಪಿ, ದಿವ್ಯಾ ಉರುಡುಗ, ವೈಷ್ಣವಿ ಗೌಡ, ಪ್ರಶಾಂತ್​ ಸಂಬರಗಿ ಪರವಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ರಘು ಗೌಡ ಯಾರ ಪರವಾಗಿ ಪ್ರಚಾರ ಮಾಡುತ್ತಾರೆ ಎಂಬ ಕೌತುಕ ಸಹಜ.

Vaishnavi Gowda: ದೊಡ್ಮನೆಯೊಳಗೆ ವೈಷ್ಣವಿ ಜೊತೆ ಚೆನ್ನಾಗಿದ್ದ ರಘು ಗೌಡ ಫಿನಾಲೆ ವೇಳೆಗೆ ಪ್ರಚಾರ ಮಾಡಿದ್ದು ಯಾರ ಪರವಾಗಿ?
ವೈಷ್ಣವಿ, ರಘು ಗೌಡ
Follow us
| Edited By: ಮದನ್​ ಕುಮಾರ್​

Updated on:Aug 03, 2021 | 12:39 PM

ಬಿಗ್​ ಬಾಸ್​ ಕನ್ನಡ (Bigg Boss) ಸೀಸನ್​ 8ರಲ್ಲಿ ಅನೇಕ ಘಟನೆಗಳು ನಡೆದಿವೆ. ಅಪರಿಚಿತರಾಗಿ ಮನೆಯೊಳಗೆ ಹೋದವರು ನಂತರ ಗೆಳೆಯರಾದರು. ಮೊದಲು ಗೆಳೆಯರಾಗಿದ್ದವರು ಮನೆಯೊಳಗೆ ಬಂದು ಮನಸ್ತಾಪ ಮಾಡಿಕೊಂಡರು. ಹೀಗೆ ಎಲ್ಲ ಏಳು-ಬೀಳುಗಳಿಗೂ ದೊಡ್ಮನೆ ಸಾಕ್ಷಿ ಆಗಿದೆ. ಬಿಗ್ ಬಾಸ್​ಗೆ ಬರುವುದಕ್ಕೂ ಮುನ್ನ ವೈಷ್ಣವಿ ಗೌಡ (Vaishnavi Gowda) ಮತ್ತು ರಘು ಗೌಡ (Raghu Gowda) ನಡುವೆ ಯಾವುದೇ ಪರಿಚಯ ಇರಲಿಲ್ಲ. ಆದರೆ ದಿನಕಳೆದಂತೆ ಇಬ್ಬರ ನಡುವೆ ಹೊಂದಾಣಿಕೆ ಮೂಡಲು ಆರಂಭಿಸಿತು. ನಂತರ ಇಬ್ಬರೂ ಬೆಸ್ಟ್​ ಫ್ರೆಂಡ್ಸ್​ ಆದರು.

ಬಿಗ್​ ಬಾಸ್​ ಎರಡನೇ ಇನ್ನಿಂಗ್ಸ್​ನಲ್ಲಿ ರಘು ಗೌಡ ಎಲಿಮಿನೇಟ್​ ಆದರು. ಆದರೆ ವೈಷ್ಣವಿ ಗೌಡ ಇನ್ನೂ ಮನೆಯೊಳಗೆ ಇದ್ದುಕೊಂಡು ಫಿನಾಲೆಯ ಕನಸು ಕಾಣುತ್ತಿದ್ದಾರೆ. ಇದು ಅಂತಿಮ ವಾರ ಆಗಿರುವುದರಿಂದ ಉಳಿದಿರುವ ಆರು ಸ್ಪರ್ಧಿಗಳ ನಡುವೆ ಪೈಪೋಟಿ ಜೋರಾಗಿದೆ. ಈ ಕೊನೇ ಹಂತದಲ್ಲಿ ಯಾರಿಗೆ ಎಷ್ಟು ವೋಟ್​ ಸಿಗುತ್ತದೆ ಎಂಬುದು ತುಂಬ ಮುಖ್ಯವಾಗುತ್ತದೆ. ಅದಕ್ಕಾಗಿ ಸೋಶಿಯಲ್​ ಮೀಡಿಯಾದಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ.

ಮಂಜು ಪಾವಗಡ, ದಿವ್ಯಾ ಸುರೇಶ್​, ಅರವಿಂದ್​ ಕೆಪಿ, ದಿವ್ಯಾ ಉರುಡುಗ, ವೈಷ್ಣವಿ ಗೌಡ, ಪ್ರಶಾಂತ್​ ಸಂಬರಗಿ ಪರವಾಗಿ ಸೋಶಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ರಘು ಗೌಡ ಯಾರ ಪರವಾಗಿ ಪ್ರಚಾರ ಮಾಡುತ್ತಾರೆ ಎಂಬ ಕೌತುಕ ಸಹಜ. ಅದಕ್ಕೀಗ ಉತ್ತರವೂ ಸಿಕ್ಕಿದೆ. ಬಿಗ್​ ಬಾಸ್​ ಮನೆಯಿಂದ ಹೊರಬಂದ ಬಳಿಕ ರಘು ಗೌಡ ಪಾರ್ಟಿ ಬದಲಾಯಿಸಿಲ್ಲ. ಮನೆಯೊಳಗೆ ಇದ್ದಾಗ ವೈಷ್ಣವಿಗೆ ಅವರು ಸಪೋರ್ಟ್​ ಮಾಡುತ್ತಿದ್ದರು. ಮನೆಯಿಂದ ಹೊರಬಂದಾಗಲೂ ಅವರು ಅದನ್ನು ಮುಂದುವರಿಸಿದ್ದಾರೆ.

‘ಬಿಗ್​ ಬಾಸ್​ ಫಿನಾಲೆ ವಾರ ಬಂದಿದೆ. ಅಲ್ಲಿರುವ ಎಲ್ಲರೂ ಒಬ್ಬರಿಗಿಂತ ಒಬ್ಬರು ಕ್ರೇಜಿಯಾಗಿ ಆಡ್ತಾ ಇದಾರೆ. ಅಲ್ಲಿರುವ ಎಲ್ಲರೂ ಘಟಾನುಘಟಿಗಳೇ ಅಂತ ಹೇಳಬೇಕು. ಆದರೆ ವೋಟ್ ಮಾಡುವಾಗ ನಮ್ಮ-ನಿಮ್ಮ ನೆಚ್ಚಿನ ವೈಷ್ಣವಿಗೆ ವೋಟ್​ ಮಾಡಿ. ಇಷ್ಟು ದಿನ ಅವರ ಮೇಲೆ ಪ್ರೀತಿ-ಅಭಿಮಾನ ತೋರಿಸಿದ್ದೀರಿ. ಅವರು ಬಿಗ್​ ಬಾಸ್​ ಗೆದ್ದರೆ ನಂಗೆ ಪಾರ್ಟಿ ಕೊಡಿಸುತ್ತೀನಿ ಅಂತ ಹೇಳಿದಾರೆ. ಅದಕ್ಕಾದರೂ ಅವರನ್ನು ಗೆಲ್ಲಿಸಲೇಬೇಕು’ ಎಂದು ರಘು ಗೌಡ ವಿಡಿಯೋ ಮೂಲಕ ಹೇಳಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ನಿಂದ ರಘು ಎಲಿಮಿನೇಟ್​ ಆಗೋಕೆ ಕಾರಣವಾಯ್ತು ಈ ಒಂದು ವಿಚಾರ 

‘ಅವರಿಗೂ ಒಂದು ಕುಟುಂಬ ಇದೆ ನೆನಪಿರಲಿ’; ರಘು-ವೈಷ್ಣವಿ ಗೆಳೆತನಕ್ಕೆ ಬೇರೆ ರೀತಿಯ ಬಣ್ಣ ಹಚ್ಚಿದ ಚಂದ್ರಚೂಡ್​ಗೆ ಕ್ಲಾಸ್​  

Published On - 12:25 pm, Tue, 3 August 21

ತಾಜಾ ಸುದ್ದಿ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ