AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಯಲ್ಲಿ ಶಮಂತ್ ಹಾಡು, ರಘು ಡ್ಯಾನ್ಸ್​, ಪ್ರಿಯಾಂಕಾ-ದಿವ್ಯಾ ವೈಯ್ಯಾರ, ಹಳೇ ಸ್ಪರ್ಧಿಗಳ ಧಮಾಕಾ

ಬಿಗ್​ ಬಾಸ್​ ಫಿನಾಲೆ ಎಪಿಸೋಡ್​ ಎಂದರೆ ಅಲ್ಲಿ ಬರೀ ಯಾರು ವಿನ್ನರ್​ ಎಂಬುದರ ಘೋಷಣೆ ಮಾತ್ರ ಅಲ್ಲ, ಅದೊಂದು ಸೆಲೆಬ್ರೇಷನ್​. ಅದಕ್ಕಾಗಿ ತಿಂಗಳಿಂದಲೇ ಕಲರ್ಸ್​ ಕನ್ನಡ ವಾಹಿನಿ ತಾಲೀಮು ನಡೆಸಿರುತ್ತದೆ.

ಬಿಗ್​ ಬಾಸ್​ ಫಿನಾಲೆಯಲ್ಲಿ ಶಮಂತ್ ಹಾಡು, ರಘು ಡ್ಯಾನ್ಸ್​, ಪ್ರಿಯಾಂಕಾ-ದಿವ್ಯಾ ವೈಯ್ಯಾರ, ಹಳೇ ಸ್ಪರ್ಧಿಗಳ ಧಮಾಕಾ
ಬಿಗ್​ ಬಾಸ್​ ಫಿನಾಲೆಯಲ್ಲಿ ಶಮಂತ್ ಹಾಡು, ರಘು ಡ್ಯಾನ್ಸ್​, ಪ್ರಿಯಾಂಕಾ-ದಿವ್ಯಾ ವೈಯ್ಯಾರ, ಹಳೇ ಸ್ಪರ್ಧಿಗಳ ಧಮಾಕಾ
TV9 Web
| Edited By: |

Updated on: Aug 07, 2021 | 12:50 PM

Share

ಬಿಗ್​ ಬಾಸ್​ ವೀಕ್ಷಕರಿಗೆ ಆ.7 ಮತ್ತು 8ರಂದು ಹಬ್ಬವೇ ಸರಿ. ಶನಿವಾರ-ಭಾನುವಾರ ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆ (Bigg Boss Finale) ನಡೆಯುತ್ತಿದೆ. ಇಷ್ಟು ದಿನಗಳ ಕಾಲ ಕಠಿಣ ಸ್ಪರ್ಧೆ ನೀಡಿದ ಐವರು ಸ್ಪರ್ಧಿಗಳು ಫಿನಾಲೆ ವೇದಿಕೆಗೆ ಬಂದಿದ್ದಾರೆ. ಮಂಜು ಪಾವಗಡ, ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ಅರವಿಂದ್​ ಕೆ.ಪಿ. ಹಾಗೂ ವೈಷ್ಣವಿ ಗೌಡ ಅವರಲ್ಲಿ ಯಾರು ಬಿಗ್​ ಬಾಸ್​ ವಿನ್ನರ್ (Bigg Boss Winner)​ ಪಟ್ಟ ತಮ್ಮದಾಗಿಸಿಕೊಳ್ಳುತ್ತಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ತೀವ್ರವಾಗಿದೆ. ತುಂಬ ಅದ್ದೂರಿಯಾಗಿ ಫಿನಾಲೆ ಕಾರ್ಯಕ್ರಮವನ್ನು ಕಲರ್ಸ್​ ಕನ್ನಡ (Colors Kannada) ವಾಹಿನಿ ಕಟ್ಟಿಕೊಡಲಿದೆ.

ಫಿನಾಲೆ ಎಂದರೆ ಅಲ್ಲಿ ಬರೀ ಯಾರು ವಿನ್ನರ್​ ಎಂಬುದರ ಘೋಷಣೆ ಮಾತ್ರ ಅಲ್ಲ. ಅದೊಂದು ಸೆಲೆಬ್ರೇಷನ್​. ಅದಕ್ಕಾಗಿ ತಿಂಗಳಿಂದಲೇ ಕಲರ್ಸ್​ ಕನ್ನಡ ವಾಹಿನಿ ತಾಲೀಮು ನಡೆಸಿರುತ್ತದೆ. ಹಲವು ಸೆಲೆಬ್ರಿಟಿಗಳನ್ನು ಕರೆಸಿ ವೇದಿಕೆಯ ರಂಗೇರಿಸಲಾಗಿದೆ. ಈ ಮೊದಲೇ ಎಲಿಮಿನೇಟ್​ ಆದ ಶಮಂತ್​ ಬ್ರೋ ಗೌಡ, ವಿಶ್ವನಾಥ್​ ಅವರು ಈ ವೇದಿಕೆಯಲ್ಲಿ ಹಾಡು ಹೇಳಿದ್ದಾರೆ. ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​ ಅವರು ಡ್ಯಾನ್ಸ್​ ಮಾಡಿದ್ದಾರೆ. ಡ್ಯಾನ್ಸ್​ ವಿಚಾರದಲ್ಲಿ ರಘು ಗೌಡ ಕೂಡ ಹಿಂದೆ ಬಿದ್ದಿಲ್ಲ.

ಹಳೇ ಸೀಸನ್​ನ ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಫಿನಾಲೆಯಲ್ಲಿ ಕಿಚ್ಚು ಹಚ್ಚಿದ್ದಾರೆ. ಕಿಶನ್​ ಬಿಳಗಲಿ ಬಿಂದಾಸ್​ ಆಗಿ ಹೆಜ್ಜೆ ಹಾಕಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯ ಸ್ಟಾರ್​ ನಟ ಕಾರ್ತಿಕ್​ ಜಯರಾಮ್​ (ಜೆಕೆ) ಅವರು ಕೂಡ ನೃತ್ಯ ಮಾಡಿದ್ದಾರೆ. ಈ ಎಲ್ಲದರ ಝಲಕ್​ ತೋರಿಸಲು ಕಲರ್ಸ್​ ಕನ್ನಡ ವಾಹಿನಿ ಒಂದು ಪ್ರೋಮೋ ಬಿಡುಗಡೆ ಮಾಡಿದೆ. ಫಿನಾಲೆ ಎಪಿಸೋಡ್​ನ ಶೂಟಿಂಗ್​ ಭರದಿಂದ ಸಾಗಿದ್ದು, ಇಂದು ಸಂಜೆ 6 ಗಂಟೆಗೆ ಪ್ರಸಾರ ಆರಂಭ ಆಗಲಿದೆ.

ಈ ಬಾರಿ ಬಿಗ್​ ಬಾಸ್​ ಗೆಲ್ಲೋದು ಯಾರು ಎಂಬ ಬಗ್ಗೆ ದೊಡ್ಡ ಕೌತುಕ ಮೂಡಿದೆ. ಅರವಿಂದ್​ ಮತ್ತು ಮಂಜು ಪಾವಗಡ ನಡುವೆ ಟಫ್​ ಸ್ಪರ್ಧೆ ಏರ್ಪಟ್ಟಿದೆ. ವೀಕ್ಷಕರ ವೋಟಿಂಗ್​ ಬಲದಿಂದಾಗಿ ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ವೈಷ್ಣವಿ ಗೌಡ ಕೂಡ ಕಮಾಲ್​ ಮಾಡುವ ಸಾಧ್ಯತೆ ದಟ್ಟವಾಗಿದೆ.

ಫಿನಾಲೆ ತಲುಪಿರುವ ಈ ಐದೂ ಜನರಿಗೆ ಶುಭವಾಗಲಿ ಎಂದು ಕಿಚ್ಚ ಸುದೀಪ್​ ಅವರು ಟ್ವಿಟರ್​ ಮೂಲಕ ಹಾರೈಸಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?

ಬಿಗ್​ ಬಾಸ್​ ಫಿನಾಲೆಯಲ್ಲಿ ಸುದೀಪ್​ ಅಕ್ಕ-ಪಕ್ಕ ನಿಲ್ಲುವ ಸ್ಪರ್ಧಿಗಳು ಇವರೇನಾ? ಸಿಕ್ತು ಮತ್ತೊಂದು ಸಾಕ್ಷಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ