AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಯಲ್ಲಿ ಶಮಂತ್ ಹಾಡು, ರಘು ಡ್ಯಾನ್ಸ್​, ಪ್ರಿಯಾಂಕಾ-ದಿವ್ಯಾ ವೈಯ್ಯಾರ, ಹಳೇ ಸ್ಪರ್ಧಿಗಳ ಧಮಾಕಾ

ಬಿಗ್​ ಬಾಸ್​ ಫಿನಾಲೆ ಎಪಿಸೋಡ್​ ಎಂದರೆ ಅಲ್ಲಿ ಬರೀ ಯಾರು ವಿನ್ನರ್​ ಎಂಬುದರ ಘೋಷಣೆ ಮಾತ್ರ ಅಲ್ಲ, ಅದೊಂದು ಸೆಲೆಬ್ರೇಷನ್​. ಅದಕ್ಕಾಗಿ ತಿಂಗಳಿಂದಲೇ ಕಲರ್ಸ್​ ಕನ್ನಡ ವಾಹಿನಿ ತಾಲೀಮು ನಡೆಸಿರುತ್ತದೆ.

ಬಿಗ್​ ಬಾಸ್​ ಫಿನಾಲೆಯಲ್ಲಿ ಶಮಂತ್ ಹಾಡು, ರಘು ಡ್ಯಾನ್ಸ್​, ಪ್ರಿಯಾಂಕಾ-ದಿವ್ಯಾ ವೈಯ್ಯಾರ, ಹಳೇ ಸ್ಪರ್ಧಿಗಳ ಧಮಾಕಾ
ಬಿಗ್​ ಬಾಸ್​ ಫಿನಾಲೆಯಲ್ಲಿ ಶಮಂತ್ ಹಾಡು, ರಘು ಡ್ಯಾನ್ಸ್​, ಪ್ರಿಯಾಂಕಾ-ದಿವ್ಯಾ ವೈಯ್ಯಾರ, ಹಳೇ ಸ್ಪರ್ಧಿಗಳ ಧಮಾಕಾ
TV9 Web
| Edited By: |

Updated on: Aug 07, 2021 | 12:50 PM

Share

ಬಿಗ್​ ಬಾಸ್​ ವೀಕ್ಷಕರಿಗೆ ಆ.7 ಮತ್ತು 8ರಂದು ಹಬ್ಬವೇ ಸರಿ. ಶನಿವಾರ-ಭಾನುವಾರ ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆ (Bigg Boss Finale) ನಡೆಯುತ್ತಿದೆ. ಇಷ್ಟು ದಿನಗಳ ಕಾಲ ಕಠಿಣ ಸ್ಪರ್ಧೆ ನೀಡಿದ ಐವರು ಸ್ಪರ್ಧಿಗಳು ಫಿನಾಲೆ ವೇದಿಕೆಗೆ ಬಂದಿದ್ದಾರೆ. ಮಂಜು ಪಾವಗಡ, ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ಅರವಿಂದ್​ ಕೆ.ಪಿ. ಹಾಗೂ ವೈಷ್ಣವಿ ಗೌಡ ಅವರಲ್ಲಿ ಯಾರು ಬಿಗ್​ ಬಾಸ್​ ವಿನ್ನರ್ (Bigg Boss Winner)​ ಪಟ್ಟ ತಮ್ಮದಾಗಿಸಿಕೊಳ್ಳುತ್ತಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ತೀವ್ರವಾಗಿದೆ. ತುಂಬ ಅದ್ದೂರಿಯಾಗಿ ಫಿನಾಲೆ ಕಾರ್ಯಕ್ರಮವನ್ನು ಕಲರ್ಸ್​ ಕನ್ನಡ (Colors Kannada) ವಾಹಿನಿ ಕಟ್ಟಿಕೊಡಲಿದೆ.

ಫಿನಾಲೆ ಎಂದರೆ ಅಲ್ಲಿ ಬರೀ ಯಾರು ವಿನ್ನರ್​ ಎಂಬುದರ ಘೋಷಣೆ ಮಾತ್ರ ಅಲ್ಲ. ಅದೊಂದು ಸೆಲೆಬ್ರೇಷನ್​. ಅದಕ್ಕಾಗಿ ತಿಂಗಳಿಂದಲೇ ಕಲರ್ಸ್​ ಕನ್ನಡ ವಾಹಿನಿ ತಾಲೀಮು ನಡೆಸಿರುತ್ತದೆ. ಹಲವು ಸೆಲೆಬ್ರಿಟಿಗಳನ್ನು ಕರೆಸಿ ವೇದಿಕೆಯ ರಂಗೇರಿಸಲಾಗಿದೆ. ಈ ಮೊದಲೇ ಎಲಿಮಿನೇಟ್​ ಆದ ಶಮಂತ್​ ಬ್ರೋ ಗೌಡ, ವಿಶ್ವನಾಥ್​ ಅವರು ಈ ವೇದಿಕೆಯಲ್ಲಿ ಹಾಡು ಹೇಳಿದ್ದಾರೆ. ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​ ಅವರು ಡ್ಯಾನ್ಸ್​ ಮಾಡಿದ್ದಾರೆ. ಡ್ಯಾನ್ಸ್​ ವಿಚಾರದಲ್ಲಿ ರಘು ಗೌಡ ಕೂಡ ಹಿಂದೆ ಬಿದ್ದಿಲ್ಲ.

ಹಳೇ ಸೀಸನ್​ನ ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಫಿನಾಲೆಯಲ್ಲಿ ಕಿಚ್ಚು ಹಚ್ಚಿದ್ದಾರೆ. ಕಿಶನ್​ ಬಿಳಗಲಿ ಬಿಂದಾಸ್​ ಆಗಿ ಹೆಜ್ಜೆ ಹಾಕಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯ ಸ್ಟಾರ್​ ನಟ ಕಾರ್ತಿಕ್​ ಜಯರಾಮ್​ (ಜೆಕೆ) ಅವರು ಕೂಡ ನೃತ್ಯ ಮಾಡಿದ್ದಾರೆ. ಈ ಎಲ್ಲದರ ಝಲಕ್​ ತೋರಿಸಲು ಕಲರ್ಸ್​ ಕನ್ನಡ ವಾಹಿನಿ ಒಂದು ಪ್ರೋಮೋ ಬಿಡುಗಡೆ ಮಾಡಿದೆ. ಫಿನಾಲೆ ಎಪಿಸೋಡ್​ನ ಶೂಟಿಂಗ್​ ಭರದಿಂದ ಸಾಗಿದ್ದು, ಇಂದು ಸಂಜೆ 6 ಗಂಟೆಗೆ ಪ್ರಸಾರ ಆರಂಭ ಆಗಲಿದೆ.

ಈ ಬಾರಿ ಬಿಗ್​ ಬಾಸ್​ ಗೆಲ್ಲೋದು ಯಾರು ಎಂಬ ಬಗ್ಗೆ ದೊಡ್ಡ ಕೌತುಕ ಮೂಡಿದೆ. ಅರವಿಂದ್​ ಮತ್ತು ಮಂಜು ಪಾವಗಡ ನಡುವೆ ಟಫ್​ ಸ್ಪರ್ಧೆ ಏರ್ಪಟ್ಟಿದೆ. ವೀಕ್ಷಕರ ವೋಟಿಂಗ್​ ಬಲದಿಂದಾಗಿ ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ವೈಷ್ಣವಿ ಗೌಡ ಕೂಡ ಕಮಾಲ್​ ಮಾಡುವ ಸಾಧ್ಯತೆ ದಟ್ಟವಾಗಿದೆ.

ಫಿನಾಲೆ ತಲುಪಿರುವ ಈ ಐದೂ ಜನರಿಗೆ ಶುಭವಾಗಲಿ ಎಂದು ಕಿಚ್ಚ ಸುದೀಪ್​ ಅವರು ಟ್ವಿಟರ್​ ಮೂಲಕ ಹಾರೈಸಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?

ಬಿಗ್​ ಬಾಸ್​ ಫಿನಾಲೆಯಲ್ಲಿ ಸುದೀಪ್​ ಅಕ್ಕ-ಪಕ್ಕ ನಿಲ್ಲುವ ಸ್ಪರ್ಧಿಗಳು ಇವರೇನಾ? ಸಿಕ್ತು ಮತ್ತೊಂದು ಸಾಕ್ಷಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್