AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಯಲ್ಲಿ ಶಮಂತ್ ಹಾಡು, ರಘು ಡ್ಯಾನ್ಸ್​, ಪ್ರಿಯಾಂಕಾ-ದಿವ್ಯಾ ವೈಯ್ಯಾರ, ಹಳೇ ಸ್ಪರ್ಧಿಗಳ ಧಮಾಕಾ

ಬಿಗ್​ ಬಾಸ್​ ಫಿನಾಲೆ ಎಪಿಸೋಡ್​ ಎಂದರೆ ಅಲ್ಲಿ ಬರೀ ಯಾರು ವಿನ್ನರ್​ ಎಂಬುದರ ಘೋಷಣೆ ಮಾತ್ರ ಅಲ್ಲ, ಅದೊಂದು ಸೆಲೆಬ್ರೇಷನ್​. ಅದಕ್ಕಾಗಿ ತಿಂಗಳಿಂದಲೇ ಕಲರ್ಸ್​ ಕನ್ನಡ ವಾಹಿನಿ ತಾಲೀಮು ನಡೆಸಿರುತ್ತದೆ.

ಬಿಗ್​ ಬಾಸ್​ ಫಿನಾಲೆಯಲ್ಲಿ ಶಮಂತ್ ಹಾಡು, ರಘು ಡ್ಯಾನ್ಸ್​, ಪ್ರಿಯಾಂಕಾ-ದಿವ್ಯಾ ವೈಯ್ಯಾರ, ಹಳೇ ಸ್ಪರ್ಧಿಗಳ ಧಮಾಕಾ
ಬಿಗ್​ ಬಾಸ್​ ಫಿನಾಲೆಯಲ್ಲಿ ಶಮಂತ್ ಹಾಡು, ರಘು ಡ್ಯಾನ್ಸ್​, ಪ್ರಿಯಾಂಕಾ-ದಿವ್ಯಾ ವೈಯ್ಯಾರ, ಹಳೇ ಸ್ಪರ್ಧಿಗಳ ಧಮಾಕಾ
TV9 Web
| Edited By: |

Updated on: Aug 07, 2021 | 12:50 PM

Share

ಬಿಗ್​ ಬಾಸ್​ ವೀಕ್ಷಕರಿಗೆ ಆ.7 ಮತ್ತು 8ರಂದು ಹಬ್ಬವೇ ಸರಿ. ಶನಿವಾರ-ಭಾನುವಾರ ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆ (Bigg Boss Finale) ನಡೆಯುತ್ತಿದೆ. ಇಷ್ಟು ದಿನಗಳ ಕಾಲ ಕಠಿಣ ಸ್ಪರ್ಧೆ ನೀಡಿದ ಐವರು ಸ್ಪರ್ಧಿಗಳು ಫಿನಾಲೆ ವೇದಿಕೆಗೆ ಬಂದಿದ್ದಾರೆ. ಮಂಜು ಪಾವಗಡ, ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ಅರವಿಂದ್​ ಕೆ.ಪಿ. ಹಾಗೂ ವೈಷ್ಣವಿ ಗೌಡ ಅವರಲ್ಲಿ ಯಾರು ಬಿಗ್​ ಬಾಸ್​ ವಿನ್ನರ್ (Bigg Boss Winner)​ ಪಟ್ಟ ತಮ್ಮದಾಗಿಸಿಕೊಳ್ಳುತ್ತಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ತೀವ್ರವಾಗಿದೆ. ತುಂಬ ಅದ್ದೂರಿಯಾಗಿ ಫಿನಾಲೆ ಕಾರ್ಯಕ್ರಮವನ್ನು ಕಲರ್ಸ್​ ಕನ್ನಡ (Colors Kannada) ವಾಹಿನಿ ಕಟ್ಟಿಕೊಡಲಿದೆ.

ಫಿನಾಲೆ ಎಂದರೆ ಅಲ್ಲಿ ಬರೀ ಯಾರು ವಿನ್ನರ್​ ಎಂಬುದರ ಘೋಷಣೆ ಮಾತ್ರ ಅಲ್ಲ. ಅದೊಂದು ಸೆಲೆಬ್ರೇಷನ್​. ಅದಕ್ಕಾಗಿ ತಿಂಗಳಿಂದಲೇ ಕಲರ್ಸ್​ ಕನ್ನಡ ವಾಹಿನಿ ತಾಲೀಮು ನಡೆಸಿರುತ್ತದೆ. ಹಲವು ಸೆಲೆಬ್ರಿಟಿಗಳನ್ನು ಕರೆಸಿ ವೇದಿಕೆಯ ರಂಗೇರಿಸಲಾಗಿದೆ. ಈ ಮೊದಲೇ ಎಲಿಮಿನೇಟ್​ ಆದ ಶಮಂತ್​ ಬ್ರೋ ಗೌಡ, ವಿಶ್ವನಾಥ್​ ಅವರು ಈ ವೇದಿಕೆಯಲ್ಲಿ ಹಾಡು ಹೇಳಿದ್ದಾರೆ. ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​ ಅವರು ಡ್ಯಾನ್ಸ್​ ಮಾಡಿದ್ದಾರೆ. ಡ್ಯಾನ್ಸ್​ ವಿಚಾರದಲ್ಲಿ ರಘು ಗೌಡ ಕೂಡ ಹಿಂದೆ ಬಿದ್ದಿಲ್ಲ.

ಹಳೇ ಸೀಸನ್​ನ ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಫಿನಾಲೆಯಲ್ಲಿ ಕಿಚ್ಚು ಹಚ್ಚಿದ್ದಾರೆ. ಕಿಶನ್​ ಬಿಳಗಲಿ ಬಿಂದಾಸ್​ ಆಗಿ ಹೆಜ್ಜೆ ಹಾಕಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯ ಸ್ಟಾರ್​ ನಟ ಕಾರ್ತಿಕ್​ ಜಯರಾಮ್​ (ಜೆಕೆ) ಅವರು ಕೂಡ ನೃತ್ಯ ಮಾಡಿದ್ದಾರೆ. ಈ ಎಲ್ಲದರ ಝಲಕ್​ ತೋರಿಸಲು ಕಲರ್ಸ್​ ಕನ್ನಡ ವಾಹಿನಿ ಒಂದು ಪ್ರೋಮೋ ಬಿಡುಗಡೆ ಮಾಡಿದೆ. ಫಿನಾಲೆ ಎಪಿಸೋಡ್​ನ ಶೂಟಿಂಗ್​ ಭರದಿಂದ ಸಾಗಿದ್ದು, ಇಂದು ಸಂಜೆ 6 ಗಂಟೆಗೆ ಪ್ರಸಾರ ಆರಂಭ ಆಗಲಿದೆ.

ಈ ಬಾರಿ ಬಿಗ್​ ಬಾಸ್​ ಗೆಲ್ಲೋದು ಯಾರು ಎಂಬ ಬಗ್ಗೆ ದೊಡ್ಡ ಕೌತುಕ ಮೂಡಿದೆ. ಅರವಿಂದ್​ ಮತ್ತು ಮಂಜು ಪಾವಗಡ ನಡುವೆ ಟಫ್​ ಸ್ಪರ್ಧೆ ಏರ್ಪಟ್ಟಿದೆ. ವೀಕ್ಷಕರ ವೋಟಿಂಗ್​ ಬಲದಿಂದಾಗಿ ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ವೈಷ್ಣವಿ ಗೌಡ ಕೂಡ ಕಮಾಲ್​ ಮಾಡುವ ಸಾಧ್ಯತೆ ದಟ್ಟವಾಗಿದೆ.

ಫಿನಾಲೆ ತಲುಪಿರುವ ಈ ಐದೂ ಜನರಿಗೆ ಶುಭವಾಗಲಿ ಎಂದು ಕಿಚ್ಚ ಸುದೀಪ್​ ಅವರು ಟ್ವಿಟರ್​ ಮೂಲಕ ಹಾರೈಸಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?

ಬಿಗ್​ ಬಾಸ್​ ಫಿನಾಲೆಯಲ್ಲಿ ಸುದೀಪ್​ ಅಕ್ಕ-ಪಕ್ಕ ನಿಲ್ಲುವ ಸ್ಪರ್ಧಿಗಳು ಇವರೇನಾ? ಸಿಕ್ತು ಮತ್ತೊಂದು ಸಾಕ್ಷಿ

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ