ಬಿಗ್​ ಬಾಸ್​ ಫಿನಾಲೆಯಲ್ಲಿ ಶಮಂತ್ ಹಾಡು, ರಘು ಡ್ಯಾನ್ಸ್​, ಪ್ರಿಯಾಂಕಾ-ದಿವ್ಯಾ ವೈಯ್ಯಾರ, ಹಳೇ ಸ್ಪರ್ಧಿಗಳ ಧಮಾಕಾ

ಬಿಗ್​ ಬಾಸ್​ ಫಿನಾಲೆ ಎಪಿಸೋಡ್​ ಎಂದರೆ ಅಲ್ಲಿ ಬರೀ ಯಾರು ವಿನ್ನರ್​ ಎಂಬುದರ ಘೋಷಣೆ ಮಾತ್ರ ಅಲ್ಲ, ಅದೊಂದು ಸೆಲೆಬ್ರೇಷನ್​. ಅದಕ್ಕಾಗಿ ತಿಂಗಳಿಂದಲೇ ಕಲರ್ಸ್​ ಕನ್ನಡ ವಾಹಿನಿ ತಾಲೀಮು ನಡೆಸಿರುತ್ತದೆ.

ಬಿಗ್​ ಬಾಸ್​ ಫಿನಾಲೆಯಲ್ಲಿ ಶಮಂತ್ ಹಾಡು, ರಘು ಡ್ಯಾನ್ಸ್​, ಪ್ರಿಯಾಂಕಾ-ದಿವ್ಯಾ ವೈಯ್ಯಾರ, ಹಳೇ ಸ್ಪರ್ಧಿಗಳ ಧಮಾಕಾ
ಬಿಗ್​ ಬಾಸ್​ ಫಿನಾಲೆಯಲ್ಲಿ ಶಮಂತ್ ಹಾಡು, ರಘು ಡ್ಯಾನ್ಸ್​, ಪ್ರಿಯಾಂಕಾ-ದಿವ್ಯಾ ವೈಯ್ಯಾರ, ಹಳೇ ಸ್ಪರ್ಧಿಗಳ ಧಮಾಕಾ
Follow us
| Updated By: ಮದನ್​ ಕುಮಾರ್​

Updated on: Aug 07, 2021 | 12:50 PM

ಬಿಗ್​ ಬಾಸ್​ ವೀಕ್ಷಕರಿಗೆ ಆ.7 ಮತ್ತು 8ರಂದು ಹಬ್ಬವೇ ಸರಿ. ಶನಿವಾರ-ಭಾನುವಾರ ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆ (Bigg Boss Finale) ನಡೆಯುತ್ತಿದೆ. ಇಷ್ಟು ದಿನಗಳ ಕಾಲ ಕಠಿಣ ಸ್ಪರ್ಧೆ ನೀಡಿದ ಐವರು ಸ್ಪರ್ಧಿಗಳು ಫಿನಾಲೆ ವೇದಿಕೆಗೆ ಬಂದಿದ್ದಾರೆ. ಮಂಜು ಪಾವಗಡ, ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ಅರವಿಂದ್​ ಕೆ.ಪಿ. ಹಾಗೂ ವೈಷ್ಣವಿ ಗೌಡ ಅವರಲ್ಲಿ ಯಾರು ಬಿಗ್​ ಬಾಸ್​ ವಿನ್ನರ್ (Bigg Boss Winner)​ ಪಟ್ಟ ತಮ್ಮದಾಗಿಸಿಕೊಳ್ಳುತ್ತಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ತೀವ್ರವಾಗಿದೆ. ತುಂಬ ಅದ್ದೂರಿಯಾಗಿ ಫಿನಾಲೆ ಕಾರ್ಯಕ್ರಮವನ್ನು ಕಲರ್ಸ್​ ಕನ್ನಡ (Colors Kannada) ವಾಹಿನಿ ಕಟ್ಟಿಕೊಡಲಿದೆ.

ಫಿನಾಲೆ ಎಂದರೆ ಅಲ್ಲಿ ಬರೀ ಯಾರು ವಿನ್ನರ್​ ಎಂಬುದರ ಘೋಷಣೆ ಮಾತ್ರ ಅಲ್ಲ. ಅದೊಂದು ಸೆಲೆಬ್ರೇಷನ್​. ಅದಕ್ಕಾಗಿ ತಿಂಗಳಿಂದಲೇ ಕಲರ್ಸ್​ ಕನ್ನಡ ವಾಹಿನಿ ತಾಲೀಮು ನಡೆಸಿರುತ್ತದೆ. ಹಲವು ಸೆಲೆಬ್ರಿಟಿಗಳನ್ನು ಕರೆಸಿ ವೇದಿಕೆಯ ರಂಗೇರಿಸಲಾಗಿದೆ. ಈ ಮೊದಲೇ ಎಲಿಮಿನೇಟ್​ ಆದ ಶಮಂತ್​ ಬ್ರೋ ಗೌಡ, ವಿಶ್ವನಾಥ್​ ಅವರು ಈ ವೇದಿಕೆಯಲ್ಲಿ ಹಾಡು ಹೇಳಿದ್ದಾರೆ. ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​ ಅವರು ಡ್ಯಾನ್ಸ್​ ಮಾಡಿದ್ದಾರೆ. ಡ್ಯಾನ್ಸ್​ ವಿಚಾರದಲ್ಲಿ ರಘು ಗೌಡ ಕೂಡ ಹಿಂದೆ ಬಿದ್ದಿಲ್ಲ.

ಹಳೇ ಸೀಸನ್​ನ ಸ್ಪರ್ಧಿಗಳು ಈ ಬಾರಿ ಬಿಗ್​ ಬಾಸ್​ ಫಿನಾಲೆಯಲ್ಲಿ ಕಿಚ್ಚು ಹಚ್ಚಿದ್ದಾರೆ. ಕಿಶನ್​ ಬಿಳಗಲಿ ಬಿಂದಾಸ್​ ಆಗಿ ಹೆಜ್ಜೆ ಹಾಕಿದ್ದಾರೆ. ಕಿರುತೆರೆ ಮತ್ತು ಹಿರಿತೆರೆಯ ಸ್ಟಾರ್​ ನಟ ಕಾರ್ತಿಕ್​ ಜಯರಾಮ್​ (ಜೆಕೆ) ಅವರು ಕೂಡ ನೃತ್ಯ ಮಾಡಿದ್ದಾರೆ. ಈ ಎಲ್ಲದರ ಝಲಕ್​ ತೋರಿಸಲು ಕಲರ್ಸ್​ ಕನ್ನಡ ವಾಹಿನಿ ಒಂದು ಪ್ರೋಮೋ ಬಿಡುಗಡೆ ಮಾಡಿದೆ. ಫಿನಾಲೆ ಎಪಿಸೋಡ್​ನ ಶೂಟಿಂಗ್​ ಭರದಿಂದ ಸಾಗಿದ್ದು, ಇಂದು ಸಂಜೆ 6 ಗಂಟೆಗೆ ಪ್ರಸಾರ ಆರಂಭ ಆಗಲಿದೆ.

ಈ ಬಾರಿ ಬಿಗ್​ ಬಾಸ್​ ಗೆಲ್ಲೋದು ಯಾರು ಎಂಬ ಬಗ್ಗೆ ದೊಡ್ಡ ಕೌತುಕ ಮೂಡಿದೆ. ಅರವಿಂದ್​ ಮತ್ತು ಮಂಜು ಪಾವಗಡ ನಡುವೆ ಟಫ್​ ಸ್ಪರ್ಧೆ ಏರ್ಪಟ್ಟಿದೆ. ವೀಕ್ಷಕರ ವೋಟಿಂಗ್​ ಬಲದಿಂದಾಗಿ ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ವೈಷ್ಣವಿ ಗೌಡ ಕೂಡ ಕಮಾಲ್​ ಮಾಡುವ ಸಾಧ್ಯತೆ ದಟ್ಟವಾಗಿದೆ.

ಫಿನಾಲೆ ತಲುಪಿರುವ ಈ ಐದೂ ಜನರಿಗೆ ಶುಭವಾಗಲಿ ಎಂದು ಕಿಚ್ಚ ಸುದೀಪ್​ ಅವರು ಟ್ವಿಟರ್​ ಮೂಲಕ ಹಾರೈಸಿದ್ದಾರೆ.

ಇದನ್ನೂ ಓದಿ:

ಬಿಗ್​ ಬಾಸ್​ ಬಳಿಕ ರಂಜಿಸಲು ಬರ್ತಿವೆ ಹೊಸ ಸೀರಿಯಲ್​ಗಳು; ಲಕ್ಷಣ, ಕನ್ಯಾಕುಮಾರಿ ಕಥೆ ಏನು?

ಬಿಗ್​ ಬಾಸ್​ ಫಿನಾಲೆಯಲ್ಲಿ ಸುದೀಪ್​ ಅಕ್ಕ-ಪಕ್ಕ ನಿಲ್ಲುವ ಸ್ಪರ್ಧಿಗಳು ಇವರೇನಾ? ಸಿಕ್ತು ಮತ್ತೊಂದು ಸಾಕ್ಷಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ