AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ಮಾಜಿ ಸ್ಪರ್ಧಿಯ ಮೇಲೆ ನಡೆಯಿತು ಹಲ್ಲೆ; ಪಾಲಕರ ಎದುರೇ ಥಳಿಸಿದ ಆಗಂತುಕ

ಆಸ್ಪತ್ರೆಯಿಂದ ಹೊರ ಬರುವಾಗ ವ್ಯಕ್ತಿಯೋರ್ವ ಎದುರಾಗಿದ್ದಾನೆ. ಏಕಾಏಕಿ ಪ್ರಿಯಾಂಕ್ ಮೇಲೆ ಹಲ್ಲೆ ನಡೆಸಿದ್ದಾನೆ. ಅದೃಷ್ಟವಶಾತ್ ಪ್ರಿಯಾಂಕ್ ಅವರಿಗೆ ಯಾವುದೇ ತೊಂದರೆ ಆಗಿಲ್ಲ.

‘ಬಿಗ್ ಬಾಸ್’ ಮಾಜಿ ಸ್ಪರ್ಧಿಯ ಮೇಲೆ ನಡೆಯಿತು ಹಲ್ಲೆ; ಪಾಲಕರ ಎದುರೇ ಥಳಿಸಿದ ಆಗಂತುಕ
ಪ್ರಿಯಾಂಕ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 03, 2022 | 2:37 PM

ನಟ ಹಾಗೂ ಹಿಂದಿ ‘ಬಿಗ್ ಬಾಸ್’ (Bigg Boss) ಮಾಜಿ ಸ್ಪರ್ಧಿ ಪ್ರಿಯಾಂಕ್ ಶರ್ಮಾ (Priyank Sharma) ಅವರ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ್ದಾನೆ. ತಂದೆ-ತಾಯಿ ಎದುರೇ ಪ್ರಿಯಾಂಕ್ ಅವರನ್ನು ಥಳಿಸಲಾಗಿದೆ. ನಂತರ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ಅವರಿಗೆ ಯಾವುದೇ ರೀತಿಯ ಪ್ರಾಣ ಹಾನಿ ಆಗಿಲ್ಲ ಅನ್ನೋದು ಸಮಾಧಾನಕರ ವಿಚಾರ. ಜುಲೈ 30ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಪ್ರಿಯಾಂಕ್ ಶರ್ಮಾ ಅವರು ತಾಯಿ ಜತೆ ಘಜಿಯಾಬಾದ್ ಆಸ್ಪತ್ರೆಗೆ ತೆರಳಿದ್ದರು. ಅವರ ತಾಯಿಗೆ ಚೆಕಪ್ ಮಾಡಿಸುವುದಿತ್ತು. ಪ್ರಿಯಾಂಕ್ ಅವರ ತಂದೆ ಕೂಡ ಇವರ ಜತೆ ಆಗಮಿಸಿದ್ದರು. ಚಿಕಿತ್ಸೆ ಕೊಡಿಸಿ ಆಸ್ಪತ್ರೆಯಿಂದ ಹೊರ ಬರುವಾಗ ವ್ಯಕ್ತಿಯೋರ್ವ ಎದುರಾಗಿದ್ದಾನೆ. ಏಕಾಏಕಿ ಪ್ರಿಯಾಂಕ್ ಮೇಲೆ ಹಲ್ಲೆ ನಡೆಸಿದ್ದಾನೆ. ಅದೃಷ್ಟವಶಾತ್ ಪ್ರಿಯಾಂಕ್ ಅವರಿಗೆ ಯಾವುದೇ ತೊಂದರೆ ಆಗಿಲ್ಲ. ಈ ಬಗ್ಗೆ ಪ್ರಿಯಾಂಕ್ ಅವರು ಇಟೈಮ್ಸ್ ಜತೆ ಮಾತನಾಡಿದ್ದಾರೆ.

‘ಏಕಾಏಕಿ ವ್ಯಕ್ತಿಯೋರ್ವ ಎಕ್ಸಿಟ್ ಗೇಟ್​ ಬಳಿ ಬಂದ. ನನಗೆ ಹೊಡೆಯೋಕೆ ಆರಂಭಿಸಿದ. ನಾನು ಆತನ ಕೈ ಹಿಡಿದು ತಳ್ಳಿದೆ. ಆಸ್ಪತ್ರೆಯ ಸಿಬ್ಬಂದಿ ಬಂದು ನನ್ನನ್ನು ಕಾಪಾಡಿದರು. ನಾನು ಅವರಿಗೆ ಆಭಾರಿ ಆಗಿದ್ದೇನೆ. ನನ್ನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿ ಪರಾರಿಯಾಗಿದ್ದಾನೆ. ಆ ಪರಿಸ್ಥಿತಿ ನಿಜಕ್ಕೂ ಭಯಾನಕವಾಗಿತ್ತು’ ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ  ಪ್ರಿಯಾಂಕ್.

ಇದನ್ನೂ ಓದಿ
Image
‘ಬಿಗ್​ ಬಾಸ್​’ನಲ್ಲಿ ಮದುವೆ ಆದ ಜೋಡಿಗೆ ಚಾನೆಲ್​ನವರಿಂದ ಸಿಕ್ಕಿತ್ತು 50 ಲಕ್ಷ ರೂ.; ಎರಡೇ ತಿಂಗಳಿಗೆ ಡಿವೋರ್ಸ್​
Image
ಬಿಗ್​ ಬಾಸ್​ ನಿರೂಪಕರು ಚೇಂಜ್​; ಅಧಿಕೃತ ಘೋಷಣೆ ಮಾಡಿದ ಸ್ಟಾರ್​ ನಟ; ವೀಕ್ಷಕರಿಗೆ ಬೇಸರ
Image
‘ಬಿಗ್​ ಬಾಸ್​’ ಮನೆಯಲ್ಲಿ ಅಗ್ನಿ ಅವಘಡ; ಸಾವು-ನೋವಿನ ಬಗ್ಗೆ ಆಗಿಲ್ಲ ವರದಿ
Image
ಬಿಗ್​ ಬಾಸ್​ ಗೆದ್ದವರ ಹಿಂದೆ ಲಾಬಿ ಇದೆಯೋ ಇಲ್ಲವೋ? ನೇರವಾಗಿ ಮಾತಾಡಿದ ಸ್ಪರ್ಧಿ ಕರಣ್​ ಕುಂದ್ರಾ

ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಿಯಾಂಕ್ ಅವರು ಕೌಶಂಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ‘ಆಸ್ಪತ್ರೆಯ ಸಿಸಿಟಿವಿ ಪರಿಶೀಲಿಸುತ್ತಿದ್ದೇವೆ. ಹಲ್ಲೆ ಮಾಡಿದ ವ್ಯಕ್ತಿಯನ್ನು ಶೀಘ್ರವೇ ಬಂಧಿಸುತ್ತೇವೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆಗಸ್ಟ್ 2ರಂದು ಪ್ರಿಯಾಂಕ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್ ಒಟಿಟಿ’ ಕುರಿತು ಸುದ್ದಿಗೋಷ್ಠಿ; ಸುದೀಪ್​ ಏನಂದ್ರು? ಇಲ್ಲಿದೆ ವಿಡಿಯೋ

ಎಂಟಿವಿ ‘ಸ್ಪ್ಲಿಟ್ಸ್​​ವಿಲ್ಲಾ’ ರಿಯಾಲಿಟಿ ಶೋನಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಿಯಾಂಕ್ ಖ್ಯಾತಿ ಪಡೆದರು. ನಂತರ ‘ಬಿಗ್ ಬಾಸ್ 11’ಗೂ ಸ್ಪರ್ಧಿ ಆಗಿ ತೆರಳಿದರು. ಕೆಲ ವೆಬ್​ ಸೀರಿಸ್​ಗಳಲ್ಲೂ ಅವರು ನಟಿಸಿದ್ದಾರೆ. ಅವರ ಮೇಲೆ ಹಲ್ಲೆ ಆಗಿದ್ದು ಏಕೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

Published On - 2:37 pm, Wed, 3 August 22

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ