AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ ಗೆದ್ದಷ್ಟೇ ಖುಷಿಯಲ್ಲಿದ್ದಾರೆ ಐಶ್ವರ್ಯಾ; ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ನ ಆ ಒಂದು ನಿರ್ಧಾರ

ಐಶ್ವರ್ಯಾ ಶಿಂಧೋಗಿ ಅವರು ಬಿಗ್ ಬಾಸ್ ಕನ್ನಡದಿಂದ ಎಲಿಮಿನೇಟ್ ಆಗಿದ್ದಾರೆ. ಅವರ ಭಾವನಾತ್ಮಕ ವಿದಾಯ ಮತ್ತು 90 ದಿನಗಳ ಪ್ರಯಾಣದ ಅನುಭವಗಳನ್ನು ಅವರು ಹಂಚಿಕೊಂಡಿದ್ದಾರೆ. ತಂದೆ-ತಾಯಿ ಇಲ್ಲದ ಐಶ್ವರ್ಯಾ ಅವರಿಗೆ ಬಿಗ್ ಬಾಸ್ ತಂಡದಿಂದ ವಿಶೇಷ ಗೌರವ ಸಿಕ್ಕಿದೆ. ಅವರ ಬಾಂಧವ್ಯಗಳು ಮತ್ತು ಮನೆಯಲ್ಲಿನ ಅನುಭವಗಳ ಬಗ್ಗೆ ಅವರು ಮಾತನಾಡಿದ್ದಾರೆ.

ಕಪ್ ಗೆದ್ದಷ್ಟೇ ಖುಷಿಯಲ್ಲಿದ್ದಾರೆ ಐಶ್ವರ್ಯಾ; ಇದಕ್ಕೆ ಕಾರಣ ಆಗಿದ್ದು ಬಿಗ್ ಬಾಸ್​ನ ಆ ಒಂದು ನಿರ್ಧಾರ
ಐಶ್ವರ್ಯಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 31, 2024 | 12:53 PM

Share

ಬಿಗ್ ಬಾಸ್ ಮನೆಯಿಂದ ಐಶ್ವರ್ಯಾ ಶಿಂಧೋಗಿ ಅವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಅವರು ಅಲ್ಲಿ ಸಾಕಷ್ಟು ಏರಿಳಿತ ಕಂಡರು. 90 ದಿನಗಳ ಬಿಗ್ ಬಾಸ್ ಜರ್ನಿಯಲ್ಲಿ ಅವರು ಸಾಕಷ್ಟು ನೆನಪುಗಳೊಂದಿಗೆ ದೊಡ್ಮನೆಯಿಂದ ಹೊರ ಬಂದಿದ್ದಾರೆ. ಈಗ ಅವರಿಗೆ ಕಪ್​ ಗೆದ್ದಷ್ಟೇ ಖುಷಿ ಆಗಿದೆ. ಈ ಬಗ್ಗೆ ಅವರು ಟಿವಿ9 ಕನ್ನಡ ಜೊತೆ ಮಾತನಾಡಿದ್ದಾರೆ. ಬಿಗ್ ಬಾಸ್ ಜರ್ನಿಯನ್ನು ಅವರು ನೆನಪಿಸಿಕೊಂಡಿದ್ದಾರೆ.

ಐಶ್ವರ್ಯಾಗೆ ತಂದೆ-ತಾಯಿ ಇಲ್ಲ. ಹೀಗಾಗಿ, ಅವರು ಎಲಿಮಿನೇಟ್ ಆಗುವಾಗ ಬಿಗ್ ಬಾಸ್ ಭಾವುಕ ಸಾಲುಗಳನ್ನು ಬರೆದಿದ್ದರು. ಈ ಬಗ್ಗೆ ಐಶ್ವರ್ಯಾ ಮಾತನಾಡಿದ್ದಾರೆ. ‘ಬಿಗ್ ಬಾಸ್ ವೀಕೆಂಡ್ ಒಬ್ಬರು ಎಲಿಮಿನೇಟ್ ಆಗುತ್ತಾರೆ. ಈ ವಾರದ ಎಲಿಮಿನೇಷನ್ ಕಾಲೇಜುಗಳಲ್ಲಿ ನಡೆಸುವ ಒಂದು ಫೇರ್​ವೆಲ್​ ರೀತಿಯೇ ಇತ್ತು. ಬಿಗ್ ಬಾಸ್ ಪ್ರೀತಿ ಹಾರೈಕೆ ಮೂಲಕ ನನ್ನನ್ನು ಕಳುಹಿಸಿದ್ದಾರೆ. ಒಂದು ಕಡೆ ಬೇಸರ ಇದೆ, ಮತ್ತೊಂದು ಕಡೆ ಖುಷಿ ಇದೆ’ ಎಂದಿದ್ದಾರೆ ಐಶ್ವರ್ಯಾ ಅವರು.

‘ನನ್ನ ಎಲಿಮಿನೇಷನ್ ವೇಳೆ ಬಿಗ್ ಬಾಸ್ ವಿಶೇಷ ಲೆಟರ್ ಕಳುಹಿಸಿದ್ದರು. ನಿಮ್ಮ ನವರಸಗಳನ್ನು ಬಿಗ್ ಬಾಸ್ ಮನೆ ನೋಡಿದೆ ಎಂದು ಲೆಟರ್​​ನಲ್ಲಿ ಬರೆಯಲಾಗಿತ್ತು. ಡೋರ್ ಹತ್ತಿರ ನಿಲ್ಲುವಾಗ ಬಿಗ್ ಬಾಸ್ ಮಾತನಾಡಿದರು. ತವರನ್ನು ಬಿಟ್ಟು ಹೋಗುತ್ತಿದ್ದೀಯಾ, ಹೋಗಿ ಬಾ ಮಗಳೆ ಎಂದರು. ಇದರಿಂದ ಕಪ್ ಗೆದ್ದಷ್ಟೇ ಖುಷಿ ಆಗಿದೆ. ಬಿಗ್ ಬಾಸ್ ಇತಿಹಾಸದಲ್ಲಿ ಇಷ್ಟು ಎಮೋಷನಲ್ ಫೇರ್​ವೆಲ್​ ಯಾರಿಗೂ ಸಿಕ್ಕಿರುವುದಿಲ್ಲ ಎಂಬುದು ನನ್ನ ಭಾವನೆ. ಎಲಿಮಿನೇಷನ್ ಪ್ರಕ್ರಿಯೆ ಕೂಡ ಇಷ್ಟು ಬ್ಯೂಟಿಫುಲ್ ಇರುತ್ತದೆ ಎಂಬುದು ಗೊತ್ತಿರಲಿಲ್ಲ. ಬಿಗ್ ಬಾಸ್ ಸಾಕಷ್ಟು ನೀತಿ ಪಾಠಗಳನ್ನು ಕಲಿಸಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ

‘ಬಿಗ್ ಬಾಸ್ ಮನೇನ ನಾನು ಮನೆಯ ರೀತಿ ನೋಡಿಲ್ಲ. ಅದುವೇ ನನ್ನ ಮನೆ ಆಯ್ತು. ಎಲ್ಲವೂ ಕಂಫರ್ಟ್​ಜೋನ್ ತರ ಫೀಲ್ ಆಯ್ತು. ಅಲ್ಲಿ ಹೋಗಾದ ಬಳಿಕ ಅದು ನನ್ನ ಮನೆ ಆಯ್ತು. ಬಾಂಡ್ ಶೇರ್ ಮಾಡಿಕೊಂಡಿದ್ದೆ. ಒಬ್ಬರು ಅಣ್ಣ ಆಗಿದ್ದರು, ಒಬ್ಬರು ತಂಗಿ ಆಗಿದ್ದರು. ಎಷ್ಟೇ ಕಿತ್ತಾಡಿದರೂ ಮತ್ತೆ ಹೋಗಿ ಮಾತನಾಡಬೇಕಿತ್ತು’ ಎಂದು ಬಿಗ್ ಬಾಸ್ ಮನೆಯ ದಿನಗಳನ್ನು ಐಶ್ವರ್ಯಾ ನೆನಪಿಸಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ