AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಬಗ್ಗೆ ಕೇಳಿದ ಆ ಒಂದು ಪ್ರಶ್ನೆಗೆ ಕಂಗಾಲಾದ ಚೈತ್ರಾ ಕುಂದಾಪುರ

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಚೈತ್ರಾ ಕುಂದಾಪುರ ಅವರ ಆಟ ವಿವಾದಕ್ಕೆ ಕಾರಣವಾಗಿದೆ. ಸುದೀಪ್ ಅವರು ಜಗದೀಶ್ ಅವರನ್ನು ಬೆಂಬಲಿಸಿದ್ದಾರೆ ಎಂದು ಚೈತ್ರಾ ಆರೋಪಿಸಿದ್ದರು. ನಂತರ ಯೋಗರಾಜ್ ಭಟ್ ಅವರು ಚೈತ್ರಾ ಅವರನ್ನು ಪ್ರಶ್ನಿಸಿದಾಗ ಅವರು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಲು ಹೆಣಗಾಡಿದರು. ಸುದೀಪ್ ಅವರ ಹೇಳಿಕೆಗಳ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ.

ಸುದೀಪ್ ಬಗ್ಗೆ ಕೇಳಿದ ಆ ಒಂದು ಪ್ರಶ್ನೆಗೆ ಕಂಗಾಲಾದ ಚೈತ್ರಾ ಕುಂದಾಪುರ
ಚೈತ್ರಾ ಕುಂದಾಪುರ
ರಾಜೇಶ್ ದುಗ್ಗುಮನೆ
|

Updated on: Oct 28, 2024 | 6:57 AM

Share

ಚೈತ್ರಾ ಕುಂದಾಪುರ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರ ಆಟ ಕೆಲವರಿಗೆ ಇಷ್ಟ ಆಗುತ್ತಿಲ್ಲ. ಇನ್ನೂ ಕೆಲವರಿಗೆ ಅವರ ಆಟದ ಬಗ್ಗೆ ಮೆಚ್ಚುಗೆ ಇದೆ. ಈಗ ಚೈತ್ರಾ ಕುಂದಾಪುರ ಅವರಿಗೆ ಒಂದು ಪ್ರಶ್ನೆ ಎದುರಾಗಿದೆ. ದೊಡ್ಮನೆಗೆ ಅತಿಥಿಯಾಗಿ ಬಂದಿದ್ದ ಅವರು ಚೈತ್ರಾಗೆ ನೇರ ಪ್ರಶ್ನೆ ಒಂದನ್ನು ಹಾಕಿದ್ದರು. ಇದರಿಂದ ಚೈತ್ರಾ ಕಂಗಾಲಾಗಿದ್ದಾರೆ. ಉತ್ತರಿಸಲಾಗದೆ ಬಡಬಡಿಸಿದ್ದಾರೆ.

ಕಳೆದ ವಾರದ ಎಪಿಸೋಡ್​ನಲ್ಲಿ ಸುದೀಪ್ ಅವರು ಕೆಲ ವಿಚಾರಗಳನ್ನು ಮಾತನಾಡಿದ್ದರು. ಜಗದೀಶ್ ಅವರನ್ನು ಮನೆಯವರೇ ಕೆರಳಿಸಿದ್ದು, ಅವರು ಮಾಡಿದ ತಪ್ಪನ್ನೇ ಮನೆಯವರು ಮಾಡಿದ್ದಾರೆ ಎಂಬರ್ಥದಲ್ಲಿ ಮಾತನಾಡಿದ್ದರು. ಇದು ಅನೇಕರಿಗೆ ಬೇಸರ ಮೂಡಿಸಿತ್ತು. ಪ್ರಮುಖವಾಗಿ ಚೈತ್ರಾ ಅವರು ಸುದೀಪ್ ಬಗ್ಗೆ ಅಸಮಾಧಾನ ಹೊರಹಾಕಿದ್ದರು.

‘ಸುದೀಪ್ ಮಾತನಾಡಿದ್ದು ಜಗದೀಶ್ ಅವರಿಗೆ ಕ್ಲೀನ್ ಚಿಟ್ ಕೊಡುವ ರೀತಿಯಲ್ಲಿ ಇತ್ತು’ ಎಂದು ನೇರವಾಗಿ ಆರೋಪಿಸಿದ್ದರು ಚೈತ್ರಾ. ಇದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಈಗ ಇದೇ ಪ್ರಶ್ನೆಯನ್ನು ಚೈತ್ರಾಗೆ ಕೇಳಲಾಗಿದೆ. ‘ಸುದೀಪ್ ಸ್ಪಷ್ಟವಾಗಿ ಹೇಳಿದ್ದರು, ಜಗದೀಶ್ ಮಾಡಿದ ತಪ್ಪಿಗೆ ಮನೆಯಿಂದ ಹೊರ ಹೋಗಿದ್ದಾರೆ ಎಂದು ಸುದೀಪ್ ಹೇಳಿದ್ದಾರೆ. ಅವರನ್ನು ವಹಿಸಿಕೊಂಡು ಮಾತನಾಡಿದರು ಎಂದು ನಾನು ಎಂದಿಗೂ ಹೇಳಿಲ್ಲ’ ಎಂದಿದ್ದಾರೆ ಚೈತ್ರಾ.

‘ಒಂದು ಮನೆಯ ಸ್ಥಾಪನೆ ಮಾಡಿ, ಮನೆಯವರ ಹಿರಿಯವನಾಗಿ ಅವನಿಗೆ ಈ ರೀತಿ ಮಾಡುವ ಅಗತ್ಯ ಏನಿರುತ್ತದೆ. ನಿಮ್ಮನ್ನು ವಿಲನ್ ಮಾಡೋದ್ರಿಂದ ಏನು ಸಿಗುತ್ತದೆ’ ಎಂದು ಯೋಗರಾಜ್ ಭಟ್ ಕೇಳುತ್ತಿದ್ದಂತೆ ಚೈತ್ರಾ ಕುಂದಾಪುರ ಅವರು ಉತ್ತರ ಕೊಟ್ಟರು. ‘ನಾನು ಆ ಅರ್ಥದಲ್ಲಿ ಹೇಳಿಲ್ಲ. ಅವರು ಹೇಳಿದ ಯಾವ ವಿಚಾರಕ್ಕೂ ನನ್ನ ವಿರೋಧ ಇಲ್ಲ’ ಎಂದು ಚೈತ್ರಾ ಕುಂದಾಪುರ ಹೇಳಿದರು. ‘ಇದು ಸ್ಪಷ್ಟನೆ ಕೊಡುವ ವಿಚಾರ ಅಲ್ಲ’ ಎಂದು ಸುದೀಪ್ ಹೇಳಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯ ಮಂದಿಗೂ ಗೊತ್ತಾಯ್ತು ಸುದೀಪ್ ತಾಯಿ ನಿಧನದ ಸುದ್ದಿ

ಸುದೀಪ್ ಅವರು ಕಳೆದ ವಾರ ಜಗದೀಶ್ ಪರ ಮಾತನಾಡಿದ್ದರು ಎಂಬುದು ಮನೆಯವರ ಆರೋಪ ಆಗಿತ್ತು. ಸುದೀಪ್ ಅವರೇ ಬಿಗ್ ಬಾಸ್ ಮನೆಗೆ ಬಂದಿದ್ದರೆ ಈ ಬಾರಿ ಚೈತ್ರಾಗೆ ಕ್ಲಾಸ್ ತೆಗೆದುಕೊಳ್ಳುತ್ತಿದ್ದರೇನೋ. ಎಲ್ಲವನ್ನೂ ಯೋಗರಾಜ್ ಭಟ್ ಲೈಟ್ ಆಗಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ