AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸಂಭಾವನೆ ಗುಟ್ಟು ರಟ್ಟು ಮಾಡಿದ ಧನರಾಜ್; ಅಸಲಿ ವಿಷಯ ಕೇಳಿ ಜನ ಶಾಕ್

ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಪಡೆಯುವ ಸಂಭಾವನೆ ಬಗ್ಗೆ ಧನರಾಜ್ ಆಚಾರ್ ಅಚ್ಚರಿಯ ಮಾಹಿತಿ ಹಂಚಿಕೊಂಡಿದ್ದಾರೆ. ಶೋನಲ್ಲಿ ಸಿಕ್ಕಾಪಟ್ಟೆ ದುಡ್ಡಿದ್ದು ಕೆಲವರಿಗೆ ವಿನ್ನರ್ ಪಡೆಯುವ ಮೊತ್ತದ ಅರ್ಧದಷ್ಟು ಸಂಭಾವನೆ ಸಿಗುತ್ತದೆ. ಅತಿ ಕಡಿಮೆ ಸಂಭಾವನೆ ಪಡೆದಿದ್ದು ನಾವೇ ಎಂದು ಧನರಾಜ್ ತಮಾಷೆಯಾಗಿ ಸಂದರ್ಶನದಲ್ಲಿ ಹೇಳಿದ್ದಾರೆ.

ಬಿಗ್ ಬಾಸ್ ಸಂಭಾವನೆ ಗುಟ್ಟು ರಟ್ಟು ಮಾಡಿದ ಧನರಾಜ್; ಅಸಲಿ ವಿಷಯ ಕೇಳಿ ಜನ ಶಾಕ್
ಧನರಾಜ್
ರಾಜೇಶ್ ದುಗ್ಗುಮನೆ
|

Updated on: Jul 28, 2026 | 9:42 AM

Share

ಮುಖ್ಯಾಂಶಗಳು

  • ಬಿಗ್ ಬಾಸ್‌ನಲ್ಲಿ ಹಣ ಮಾಡೋದು ಗ್ಯಾರಂಟಿ
  • ವಿನ್ನರ್ ಮೊತ್ತದ ಅರ್ಧದಷ್ಟು ಸಂಭಾವನೆ
  • ಕಡಿಮೆ ದುಡ್ಡು ತಗೊಂಡಿದ್ದು ನಾವೇ ಅಂದ್ರು ಧನರಾಜ್

ಬಿಗ್ ಬಾಸ್ (Bigg Boss) ಮನೆಯಲ್ಲಿ ಸ್ಪರ್ಧಿಗಳಿಗೆ ಎಷ್ಟು ಸಂಭಾವನೆ ಸಿಗುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ಈ ಪ್ರಶ್ನೆಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಧನರಾಜ್ ಆಚಾರ್ ಕೊನೆಗೂ ಉತ್ತರಿಸಿದ್ದಾರೆ. ಸಂದರ್ಶನ ಒಂದರಲ್ಲಿ ಮಾತನಾಡಿರುವ ಅವರು ಸಂಭಾವನೆಯ ಅಸಲಿ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಧನರಾಜ್ ನೀಡಿರುವ ಈ ಮಾಹಿತಿ ಅನೇಕರಿಗೆ ತೀವ್ರ ಅಚ್ಚರಿ ಮೂಡಿಸಿದೆ.

ಬಿಗ್ ಬಾಸ್ ಮನೆಯಿಂದ ದೊಡ್ಡ ಮಟ್ಟದಲ್ಲಿ ಹಣ ಸಂಪಾದನೆ ಮಾಡಬಹುದು ಎಂದು ಧನರಾಜ್ ಹೇಳಿದ್ದಾರೆ. ಮಾಡುವವರಿಗೆ ಬಿಗ್ ಬಾಸ್‌ನಲ್ಲಿ ಸಿಕ್ಕಾಪಟ್ಟೆ ದುಡ್ಡಿದೆ ಎಂದು ಅವರು ರಿವೀಲ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಪರ್ಧಿಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಬಿಗ್ ಬಾಸ್ ಗೆಲ್ಲುವ ವಿನ್ನರ್ ಪಡೆಯುವ ಪ್ರಶಸ್ತಿ ಮೊತ್ತದ ಅರ್ಧದಷ್ಟು ಹಣವನ್ನು ಕೆಲ ಪ್ರಮುಖ ಸ್ಪರ್ಧಿಗಳು ಸಂಭಾವನೆಯಾಗಿಯೇ ಪಡೆಯುತ್ತಾರೆ’ ಎಂಬ ವಿಷಯ ರಿವೀಲ್ ಆಗಿದೆ.

ಸಂದರ್ಶಕರು 25 ಲಕ್ಷ ರೂಪಾಯಿ ಇರಬಹುದೇ ಎಂದು ಕೇಳಿದಾಗ ಧನರಾಜ್ ನಗುತ್ತಾ ‘ತಾವು ಆ ಮೊತ್ತವನ್ನು ಬಾಯಿ ಬಿಟ್ಟು ಹೇಳುವುದಿಲ್ಲ’ ಎಂದು ಮೌನ ವಹಿಸಿದ್ದಾರೆ. ಇನ್ನು ಅತಿ ಕಡಿಮೆ ಸಂಭಾವನೆ ಯಾರಿಗೆ ಸಿಗುತ್ತದೆ ಎಂಬ ಪ್ರಶ್ನೆಗೂ ಧನರಾಜ್ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ಅತಿ ಕಡಿಮೆ ಸಂಭಾವನೆ ಪಡೆದವರು ನಾನೇ ಇರಬೇಕು ಎಂದು ಅವರು ಹಾಸ್ಯ ಚಟಾಕಿ ಹಾರಿಸಿದ್ದಾರೆ. ಈ ಮೂಲಕ ಬಿಗ್ ಬಾಸ್ ಸಂಭಾವನೆಯ ರಹಸ್ಯವನ್ನು ಧನರಾಜ್ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ‘ಅರ್ಚನಾ ಕೊಟ್ಟಿಗೆ ಬಿಗ್ ಬಾಸ್​​ಗೆ ಬರಲಿ’; ವೀಕ್ಷಕರ ಒತ್ತಾಯ

ವಿನ್ನರ್​​ಗಳಿಗೆ 50 ಲಕ್ಷ ರೂಪಾಯಿ ಸಿಗುತ್ತದೆ. ಅದರ ಅರ್ಧದಷ್ಟು ಎಂದರೆ 25 ಲಕ್ಷ ರೂಪಾಯಿ. ಇಷ್ಟು ದೊಡ್ಡ ಮೊತ್ತವನ್ನು ಸಂಭಾವನೆಯನೇಯಾಗಿಯೇ ಪಡೆದುಕೊಂಡಿದ್ದಾರೆ ಎಂದರೆ ಅದು ಯಾವ ಸ್ಪರ್ಧಿ ಇರಬಹುದು ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ