AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೆಲುಗು ಬಿಗ್ ಬಾಸ್ ಕಾದು’; ಮಿತಿಮೀರಿ ನಡೆದುಕೊಂಡ ಶೋಭಾ ಶೆಟ್ಟಿಗೆ ವೇದಿಕೆ ಮೇಲೆ ಸುದೀಪ್ ಕ್ಲಾಸ್

ಬಿಗ್ ಬಾಸ್ ಕನ್ನಡ ಸೀಸನ್ 11ರ 50ನೇ ದಿನಕ್ಕೆ ರಜತ್ ಮತ್ತು ಶೋಭಾ ಶೆಟ್ಟಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದಾರೆ. ಶೋಭಾ ಶೆಟ್ಟಿ ಅವರ ಉತ್ತರಗಳಿಗೆ ಸುದೀಪ್ ಅವರು ತರಾಟೆಗೆ ತೆಗೆದುಕೊಂಡಿದ್ದು, ತೆಲುಗು ಬಿಗ್ ಬಾಸ್ ಮತ್ತು ಕನ್ನಡ ಬಿಗ್ ಬಾಸ್ ನಡುವಿನ ವ್ಯತ್ಯಾಸವನ್ನು ಎತ್ತಿ ತೋರಿಸಿದ್ದಾರೆ.

‘ತೆಲುಗು ಬಿಗ್ ಬಾಸ್ ಕಾದು’; ಮಿತಿಮೀರಿ ನಡೆದುಕೊಂಡ ಶೋಭಾ ಶೆಟ್ಟಿಗೆ ವೇದಿಕೆ ಮೇಲೆ ಸುದೀಪ್ ಕ್ಲಾಸ್
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Nov 18, 2024 | 6:56 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ 50ನೇ ದಿನಕ್ಕೆ ಕಾಲಿಟ್ಟಿದೆ. ಹೀಗಿರುವಾಗಲೇ ಎರಡು ವೈಲ್ಡ್​ ಕಾರ್ಡ್ ಎಂಟ್ರಿಗಳನ್ನು ಕರೆಸಲಾಗಿದೆ. ರಿಯಾಲಿಟಿ ಶೋಗಳ ಮೂಲಕ ಫೇಮಸ್ ಆದ ರಜತ್ ಹಾಗೂ ತೆಲುಗು ಬಿಗ್ ಬಾಸ್​ನಲ್ಲಿ ಸ್ಪರ್ಧಿಸಿದ ಅನುಭವ ಇರುವ ಶೋಭಾ ಶೆಟ್ಟಿ ದೊಡ್ಮನೆಗೆ ಎಂಟ್ರಿ ಪಡೆದಿದ್ದಾರೆ. ವೇದಿಕೆ ಏರಿದಾಗ ಸುದೀಪ್ ಅವರ ಬಗ್ಗೆ ಶೋಭಾ ಮೆಚ್ಚುಗೆ ವ್ಯಕ್ತಪಡಿಸಿದರು. ಸಲಿಗೆ ಪಡೆಯಲು ಪ್ರಯತ್ನಿಸಿದ ಅವರಿಗೆ ಸುದೀಪ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಶೋಭಾ ಶೆಟ್ಟಿ ತೆಲುಗು ಬಿಗ್ ಬಾಸ್​ನಲ್ಲಿ ಈ ಮೊದಲು ಸ್ಪರ್ಧಿಸಿದ್ದರು. ಅಲ್ಲಿ ಆ್ಯಂಕರ್ ಅಕ್ಕಿನೇನಿ ನಾಗಾರ್ಜುನ. ಅವರು ನಿರೂಪಣೆಯನ್ನು ಚೆನ್ನಾಗಿಯೇ ಮಾಡುತ್ತಾರೆ. ಆದರೆ, ಸುದೀಪ್ ರೀತಿ ಖಡಕ್ ಆಗಿ ಅವರು ನಿರೂಪಣೆ ಮಾಡಿದ್ದು ಕಡಿಮೆ. ಹೀಗಾಗಿ, ಏನೇ ಮಾತನಾಡಿದರೂ ನಡೆಯುತ್ತದೆ ಎನ್ನುವ ಭಾವನೆ ಅಲ್ಲಿನ ಸ್ಪರ್ಧಿಗಳಿಗೆ ಮೂಡಿರುತ್ತದೆ. ಈಗ ಶೋಭಾ ಶೆಟ್ಟಿ ಅವರು ಸುದೀಪ್ ಎದುರು ಚಿಲ್ ಆಗಿ ಮಾತನಾಡಿಕೊಂಡಿದ್ದರು. ಆದರೆ, ಅವರು ಯಾವಾಗ ಲಯ ತಪ್ಪಿದರು ಎಂಬುದು ಗೊತ್ತಾಯಿತೋ ಆಗ ಸುದೀಪ್ ಕ್ಲಾಸ್ ತೆಗೆದುಕೊಂಡರು. ಇದರ ಬಿಸಿ ಶೋಭಾಗೆ ತಟ್ಟಿದೆ.

‘ನಿಮ್ಮ ಫೇವರಿಟ್ ಸ್ಪರ್ಧಿ ಯಾರು’ ಎಂದು ಸುದೀಪ್ ಕೇಳಿದರು. ‘ನಾನು ಫೇವರಿಟ್ ಸ್ಪರ್ಧಿ ಅಂತ ಹೇಳೋಕೆ ಆಗಲ್ಲ. ನಾವು ಹೊರಗೆ ನೋಡೋದೇ ಬೇರೆ ಇರುತ್ತದೆ..’ ಎಂದು ಏನನ್ನೋ ಹೇಳಲು ಹೊರಟರು ಶೋಭಾ. ಆಗ ಸುದೀಪ್ ನಗುತ್ತಲೇ ಶೋಭಾಗೆ ಕ್ಲಾಸ್ ತೆಗೆದುಕೊಂಡರು. ‘ನಿಮ್ಮ ಪ್ರಶ್ನೆಯನ್ನು ನೀವೆ ಆಯ್ಕೆ ಮಾಡಿಕೊಳ್ಳಬೇಡಿ. ಇದು ತೆಲುಗು ಬಿಗ್ ಬಾಸ್ ಕಾದು. ಪಕ್ಕಾ ಕನ್ನಡ. ಪ್ರಶ್ನೆ ನಮ್ಮದು, ಉತ್ತರ ಮಾತ್ರ ನಿಮ್ಮದು’ ಎಂದರು ಸುದೀಪ್.

ಇದನ್ನೂ ಓದಿ: ‘ಮಂಜು ತಿಕ್ಲ, ಚೈತ್ರಾ ಪುಕ್ಲು’: ಬಿಗ್ ಬಾಸ್ ಮನೆಗೆ ಬರುತ್ತಲೇ ವಿವಾದ ಎಬ್ಬಿಸಿದ ರಜತ್

‘10 ವರ್ಷ ಬಿಗ್ ಬಾಸ್ ನಡೆಸಿಕೊಟ್ಟಿದ್ದೀನಿ. ಇದು 11ನೇ ವರ್ಷ. ಹಲವರು ರೀತಿಯ ಜನರನ್ನು ನೋಡಿದ್ದೇನೆ’ ಎಂದರು ಸುದೀಪ್. ‘ಹೋಗಲಿ ಬಿಡಿ ನಿಮಗೆ ಟಫ್ ಸ್ಪರ್ಧಿ ಯಾರು’ ಎಂದು ಕೇಳಿದರು. ಇದಕ್ಕೆ ‘ಯಾರೂ ಇಲ್ಲ’ ಎಂಬ ಉತ್ತರ ಶೋಭಾ ಕಡೆಯಿಂದ ಬಂತು. ‘ಹಾಗಿದ್ರೆ ಇಲ್ಲೇ ಕಪ್ ಹಿಡ್ಕೊಂಡು ಹೋಗಿ ಬಿಡಿ’ ಎಂದು ಸುದೀಪ್ ಅವರು ಕಾಲೆಳೆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು