AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss 11 Grand Finale Winner: ಹನುಮಂತ ಬಿಗ್ ಬಾಸ್ ವಿನ್ನರ್; ಜವಾರಿ ಹುಡುಗನಿಗೆ ಒಲಿದ ಕಪ್

Bigg Boss Kannada Winner Hanumantha: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಹನುಮಂತ ಅವರು 5 ಕೋಟಿ ಮತಗಳನ್ನು ಪಡೆದು ವಿಜೇತರಾಗಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಗೆದ್ದ ಮೊದಲ ಸ್ಪರ್ಧಿ ಎಂಬ ದಾಖಲೆಯನ್ನು ಅವರು ಸೃಷ್ಟಿಸಿದ್ದಾರೆ. ತಮ್ಮ ಸರಳತೆ ಮತ್ತು ಬುದ್ಧಿವಂತಿಕೆಯಿಂದ ಜನರ ಮನ ಗೆದ್ದ ಹನುಮಂತ ಅವರ ಗೆಲುವು ಉತ್ತರ ಕರ್ನಾಟಕದ ಜನರ ಹರ್ಷಕ್ಕೆ ಕಾರಣವಾಗಿದೆ.

Bigg Boss 11 Grand Finale Winner: ಹನುಮಂತ ಬಿಗ್ ಬಾಸ್ ವಿನ್ನರ್; ಜವಾರಿ ಹುಡುಗನಿಗೆ ಒಲಿದ ಕಪ್
ಹನುಮಂತ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 26, 2025 | 11:44 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಯಾರು ಕಪ್ ಗೆಲ್ಲುತ್ತಾರೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬರೋಬ್ಬರಿ 5 ಕೋಟಿ ವೋಟ್ ಪಡೆದು ಹನುಮಂತ ಅವರು ಗೆದ್ದು ಬೀಗಿದ್ದಾರೆ. ಈ ಮೂಲಕ ಕರ್ನಾಟಕ ಜನರ ಫೇವರಿಟ್ ಎನಿಸಿಕೊಂಡಿದ್ದಾರೆ. ‘ಬಿಗ್ ಬಾಸ್ ಕನ್ನಡ’ ಇತಿಹಾಸದಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಗೆದ್ದ ಮೊದಲ ಸ್ಪರ್ಧಿ ಹನುಮಂತ ಆಗಿದ್ದಾರೆ. ಈ ಮೂಲಕ ಅವರು ದಾಖಲೆ ಬರೆದಿದ್ದಾರೆ. ಅವರಿಂದ ಇತಿಹಾಸವೇ ಸೃಷ್ಟಿ ಆಗಿದೆ.

ಈ ಬಾರಿಯ ಬಿಗ್ ಬಾಸ್​ನಲ್ಲಿ ಒಟ್ಟೂ 20 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಅವರಲ್ಲಿ 19 ಜನರನ್ನು ಹಿಂದಿಕ್ಕಿ ಹನುಮಂತ ಅವರು ಕಪ್​ನ ಒಲಿಸಿಕೊಂಡಿದ್ದಾರೆ. ಜವಾರಿ ಹುಡುಗನಾಗಿ, ಜವಾರಿ ಹಾಡುಗಳನ್ನು ಹಾಡುತ್ತಾ ಗಮನ ಸೆಳೆದರು.  ಯಾರೇ ನಾಮಿನೇಟ್ ಮಾಡಲಿ, ಯಾರು ಏನೇ ಕಾರಣ ಕೊಡಲಿ, ಅವರನ್ನು ಕಳಪೆಗೆ ಹಾಕಲಿ ಇದಕ್ಕೆಲ್ಲ ಅವರು ತಲೆಕೆಡಿಸಿಕೊಳ್ಳದೆ ಆಡಿದರು. ಅದಕ್ಕೆ ಕೊನೆಗೂ ಜಯ ಸಿಕ್ಕಂತೆ ಆಗಿದೆ. ‘ಒಳ್ಳೆಯತನಕ್ಕೆ ಜಯ ಇದೆ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಹೇಳುತ್ತಿದ್ದಾರೆ.

ಹನುಮಂತನ ಪರವಾಗಿ ಅನಕೇರು ವೋಟ್ ಮಾಡುವಂತೆ ಕೋರಿದ್ದರು. ಉತ್ತರ ಕರ್ನಾಟಕ ಮಂದಿ ಹನುಮಂತಗೆ ಭರ್ಜರಿ ವೋಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಉತ್ತರ ಕರ್ನಾಟಕ ಮಂದಿ ಮಾತ್ರ ಅಲ್ಲದೆ, ಎಲ್ಲಾ ಭಾಗದ ಜನರಿಗೂ ಅವರು ಇಷ್ಟ ಆಗಿದ್ದರು. ಈ ಕಾರಣಕ್ಕೆ ಅವರಿಗೆ 5 ಕೋಟಿ ವೋಟ್ ಬಿದ್ದಿದೆ. ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಜನರಿಗೆ ಇಷ್ಟವಾದ ಹನುಮಂತಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ; ಮೊದಲೇ ಸೋರಿಕೆ ಆಯ್ತು ಮಾಹಿತಿ

ಹನುಮಂತ ಅವರು ಸಾಕಷ್ಟು ಕಷ್ಟವನ್ನು ನೋಡಿದವರು. ಅವರು ಕೆಲವು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಈ ರೀತಿ ವಿನ್ ಆಗಿದ್ದು ಎಲ್ಲಿಯೂ ಇಲ್ಲ. ಕೇವಲ ಲುಂಗಿ-ಶರ್ಟ್​​ನಲ್ಲಿ ಕಾಣಿಸಿಕೊಳ್ಳುತ್ತಾ, ಬಿಗ್ ಬಾಸ್​ನಲ್ಲಿ ಸಿಂಪಲ್ ಆಗಿದ್ದ ಅವರು ವಿನ್ ಆಗಿಯೇ ಬಿಟ್ಟರು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಕಪ್ ಎತ್ತಿದ್ದು ಇವರೇ? ಮೊದಲೇ ಶುರುವಾಗಿದೆ ಸಂಭ್ರಮ

ಹನುಮಂತ ಅವರ ಬುದ್ಧಿವಂತಿಕೆಯನ್ನು ಸುದೀಪ್ ಅವರು ಮೊದಲಿಂದ ಹೊಗಳುತ್ತಾ ಬರುತ್ತಿದ್ದರು. ಹನುಮಂತ ಅವರು ಉತ್ತಮವಾಗಿ ಆಡುತ್ತಿದ್ದಾರೆ ಎಂದು ಅನೇಕ ಬಾರಿ ಹೇಳಿದ್ದಾರೆ. ಅವರು ಯಾವುದೇ ತಾರತಮ್ಯ ಮಾಡದೆ ತೆಗೆದುಕೊಳ್ಳುತ್ತಿದ್ದ ನಿರ್ಧಾರಕ್ಕೆ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈಗ ಅವರಿಗೆ ಜಯ ಸಿಕ್ಕಿದೆ. ಹನುಮಂತನ ಅಭಿಮಾನಿಗಳು ದೊಡ್ಮನೆ ಹೊರಗೆ ಸಂಭ್ರಮಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ