AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss 11 Grand Finale Winner: ಹನುಮಂತ ಬಿಗ್ ಬಾಸ್ ವಿನ್ನರ್; ಜವಾರಿ ಹುಡುಗನಿಗೆ ಒಲಿದ ಕಪ್

Bigg Boss Kannada Winner Hanumantha: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಹನುಮಂತ ಅವರು 5 ಕೋಟಿ ಮತಗಳನ್ನು ಪಡೆದು ವಿಜೇತರಾಗಿದ್ದಾರೆ. ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಗೆದ್ದ ಮೊದಲ ಸ್ಪರ್ಧಿ ಎಂಬ ದಾಖಲೆಯನ್ನು ಅವರು ಸೃಷ್ಟಿಸಿದ್ದಾರೆ. ತಮ್ಮ ಸರಳತೆ ಮತ್ತು ಬುದ್ಧಿವಂತಿಕೆಯಿಂದ ಜನರ ಮನ ಗೆದ್ದ ಹನುಮಂತ ಅವರ ಗೆಲುವು ಉತ್ತರ ಕರ್ನಾಟಕದ ಜನರ ಹರ್ಷಕ್ಕೆ ಕಾರಣವಾಗಿದೆ.

Bigg Boss 11 Grand Finale Winner: ಹನುಮಂತ ಬಿಗ್ ಬಾಸ್ ವಿನ್ನರ್; ಜವಾರಿ ಹುಡುಗನಿಗೆ ಒಲಿದ ಕಪ್
ಹನುಮಂತ
TV9 Web
| Edited By: |

Updated on: Jan 26, 2025 | 11:44 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಯಾರು ಕಪ್ ಗೆಲ್ಲುತ್ತಾರೆ ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಬರೋಬ್ಬರಿ 5 ಕೋಟಿ ವೋಟ್ ಪಡೆದು ಹನುಮಂತ ಅವರು ಗೆದ್ದು ಬೀಗಿದ್ದಾರೆ. ಈ ಮೂಲಕ ಕರ್ನಾಟಕ ಜನರ ಫೇವರಿಟ್ ಎನಿಸಿಕೊಂಡಿದ್ದಾರೆ. ‘ಬಿಗ್ ಬಾಸ್ ಕನ್ನಡ’ ಇತಿಹಾಸದಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದು ಗೆದ್ದ ಮೊದಲ ಸ್ಪರ್ಧಿ ಹನುಮಂತ ಆಗಿದ್ದಾರೆ. ಈ ಮೂಲಕ ಅವರು ದಾಖಲೆ ಬರೆದಿದ್ದಾರೆ. ಅವರಿಂದ ಇತಿಹಾಸವೇ ಸೃಷ್ಟಿ ಆಗಿದೆ.

ಈ ಬಾರಿಯ ಬಿಗ್ ಬಾಸ್​ನಲ್ಲಿ ಒಟ್ಟೂ 20 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಅವರಲ್ಲಿ 19 ಜನರನ್ನು ಹಿಂದಿಕ್ಕಿ ಹನುಮಂತ ಅವರು ಕಪ್​ನ ಒಲಿಸಿಕೊಂಡಿದ್ದಾರೆ. ಜವಾರಿ ಹುಡುಗನಾಗಿ, ಜವಾರಿ ಹಾಡುಗಳನ್ನು ಹಾಡುತ್ತಾ ಗಮನ ಸೆಳೆದರು.  ಯಾರೇ ನಾಮಿನೇಟ್ ಮಾಡಲಿ, ಯಾರು ಏನೇ ಕಾರಣ ಕೊಡಲಿ, ಅವರನ್ನು ಕಳಪೆಗೆ ಹಾಕಲಿ ಇದಕ್ಕೆಲ್ಲ ಅವರು ತಲೆಕೆಡಿಸಿಕೊಳ್ಳದೆ ಆಡಿದರು. ಅದಕ್ಕೆ ಕೊನೆಗೂ ಜಯ ಸಿಕ್ಕಂತೆ ಆಗಿದೆ. ‘ಒಳ್ಳೆಯತನಕ್ಕೆ ಜಯ ಇದೆ’ ಎಂದು ಅನೇಕರು ಸೋಶಿಯಲ್ ಮೀಡಿಯಾದಲ್ಲಿ ಹೇಳುತ್ತಿದ್ದಾರೆ.

ಹನುಮಂತನ ಪರವಾಗಿ ಅನಕೇರು ವೋಟ್ ಮಾಡುವಂತೆ ಕೋರಿದ್ದರು. ಉತ್ತರ ಕರ್ನಾಟಕ ಮಂದಿ ಹನುಮಂತಗೆ ಭರ್ಜರಿ ವೋಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಉತ್ತರ ಕರ್ನಾಟಕ ಮಂದಿ ಮಾತ್ರ ಅಲ್ಲದೆ, ಎಲ್ಲಾ ಭಾಗದ ಜನರಿಗೂ ಅವರು ಇಷ್ಟ ಆಗಿದ್ದರು. ಈ ಕಾರಣಕ್ಕೆ ಅವರಿಗೆ 5 ಕೋಟಿ ವೋಟ್ ಬಿದ್ದಿದೆ. ವೈಲ್ಡ್​ ಕಾರ್ಡ್ ಮೂಲಕ ಎಂಟ್ರಿ ಕೊಟ್ಟು ಜನರಿಗೆ ಇಷ್ಟವಾದ ಹನುಮಂತಗೆ ಎಲ್ಲರೂ ಶುಭ ಕೋರುತ್ತಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ; ಮೊದಲೇ ಸೋರಿಕೆ ಆಯ್ತು ಮಾಹಿತಿ

ಹನುಮಂತ ಅವರು ಸಾಕಷ್ಟು ಕಷ್ಟವನ್ನು ನೋಡಿದವರು. ಅವರು ಕೆಲವು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಈ ರೀತಿ ವಿನ್ ಆಗಿದ್ದು ಎಲ್ಲಿಯೂ ಇಲ್ಲ. ಕೇವಲ ಲುಂಗಿ-ಶರ್ಟ್​​ನಲ್ಲಿ ಕಾಣಿಸಿಕೊಳ್ಳುತ್ತಾ, ಬಿಗ್ ಬಾಸ್​ನಲ್ಲಿ ಸಿಂಪಲ್ ಆಗಿದ್ದ ಅವರು ವಿನ್ ಆಗಿಯೇ ಬಿಟ್ಟರು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಕಪ್ ಎತ್ತಿದ್ದು ಇವರೇ? ಮೊದಲೇ ಶುರುವಾಗಿದೆ ಸಂಭ್ರಮ

ಹನುಮಂತ ಅವರ ಬುದ್ಧಿವಂತಿಕೆಯನ್ನು ಸುದೀಪ್ ಅವರು ಮೊದಲಿಂದ ಹೊಗಳುತ್ತಾ ಬರುತ್ತಿದ್ದರು. ಹನುಮಂತ ಅವರು ಉತ್ತಮವಾಗಿ ಆಡುತ್ತಿದ್ದಾರೆ ಎಂದು ಅನೇಕ ಬಾರಿ ಹೇಳಿದ್ದಾರೆ. ಅವರು ಯಾವುದೇ ತಾರತಮ್ಯ ಮಾಡದೆ ತೆಗೆದುಕೊಳ್ಳುತ್ತಿದ್ದ ನಿರ್ಧಾರಕ್ಕೆ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈಗ ಅವರಿಗೆ ಜಯ ಸಿಕ್ಕಿದೆ. ಹನುಮಂತನ ಅಭಿಮಾನಿಗಳು ದೊಡ್ಮನೆ ಹೊರಗೆ ಸಂಭ್ರಮಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!