AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್​​ನಿಂದ ಬಿಗ್​​ಬಾಸ್ ಮನೆಗೆ ಮರಳಿದ ಸ್ಪರ್ಧಿಗಳು, ಆಟ ಮತ್ತೆ ಶುರು

Bigg Boss Kannada 12: ಬಿಗ್​​ಬಾಸ್ ಕನ್ನಡ ಸೀಸನ್ 12ರ ಎಲ್ಲ ಸ್ಪರ್ಧಿಗಳನ್ನು ಬಿಗ್​​ಬಾಸ್ ಮನೆಯಿಂದ ಹೊರಗೆ ಕರೆತಂದು ಈಗಲ್​​ಟನ್ ರೆಸಾರ್ಟ್​​ನಲ್ಲಿ ಇರಿಸಲಾಗಿತ್ತು. ಬಿಗ್​​ಬಾಸ್ ಆಯೋಜಕರು, ಜಾಲಿವುಡ್​​ ರೆಸಾರ್ಟ್​​ನ ಅಧಿಕಾರಿಗಳು, ಕಿಚ್ಚ ಸುದೀಪ್ ಇನ್ನೂ ಕೆಲವರ ಸಂಘಟಿತ ಪ್ರಯತ್ನದಿಂದಾಗಿ ಬಿಗ್​​ಬಾಸ್ ಶೋ ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ.

ರೆಸಾರ್ಟ್​​ನಿಂದ ಬಿಗ್​​ಬಾಸ್ ಮನೆಗೆ ಮರಳಿದ ಸ್ಪರ್ಧಿಗಳು, ಆಟ ಮತ್ತೆ ಶುರು
Bigg Boss Kannada
ಮಂಜುನಾಥ ಸಿ.
|

Updated on: Oct 09, 2025 | 7:06 AM

Share

ಜಾಲಿವುಡ್ ಸ್ಟುಡಿಯೋಕ್ಕೆ (Jollywood studio) ಅಧಿಕಾರಿಗಳು ಬೀಗ ಹಾಕಿದ್ದ ಕಾರಣಕ್ಕೆ ಬಿಗ್​​ಬಾಸ್ ಕನ್ನಡ ಶೋ ಅನ್ನು ಸಹ ನಿಲ್ಲಿಸಲಾಗಿತ್ತು. ಬಿಗ್​​ಬಾಸ್ ಕನ್ನಡ ಸೀಸನ್ 12ರ ಎಲ್ಲ ಸ್ಪರ್ಧಿಗಳನ್ನು ಬಿಗ್​​ಬಾಸ್ ಮನೆಯಿಂದ ಹೊರಗೆ ಕರೆತಂದು ಈಗಲ್​​ಟನ್ ರೆಸಾರ್ಟ್​​ನಲ್ಲಿ ಇರಿಸಲಾಗಿತ್ತು. ಬಿಗ್​​ಬಾಸ್ ಆಯೋಜಕರು, ಜಾಲಿವುಡ್​​ ರೆಸಾರ್ಟ್​​ನ ಅಧಿಕಾರಿಗಳು, ಕಿಚ್ಚ ಸುದೀಪ್ ಇನ್ನೂ ಕೆಲವರ ಸಂಘಟಿತ ಪ್ರಯತ್ನದಿಂದಾಗಿ ಬಿಗ್​​ಬಾಸ್ ಶೋ ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ. ಅದರ ಬೆನ್ನಲ್ಲೆ ಎಲ್ಲ 17 ಸ್ಪರ್ಧಿಗಳನ್ನು ಮತ್ತೆ ಬಿಗ್​​ಬಾಸ್​​ ಮನೆಗೆ ಕಳಿಸಲಾಗಿದೆ.

ಜಾಲಿವುಡ್​ ಸ್ಟುಡಿಯೋ ಉಲ್ಲಂಘಿಸಿರುವ ಮಾಲಿನ್ಯಕ್ಕೆ ಸಂಬಂಧಿಸಿದ ನಿಯಮಗಳನ್ನು ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು 10 ದಿನಗಳ ಕಾಲಾವಕಾಶ ನೀಡಿದ್ದಾರೆ. ಹಾಗೂ ಮಾಲಿನ್ಯ ನಿಯಂತ್ರಣ ಇಲಾಖೆ ಅಧಿಕಾರಿಗಳು, ಜಾಲಿವುಡ್ ಸ್ಟುಡಿಯೋಕ್ಕೆ ಬೀಗ ಹಾಕಿರುವುದಕ್ಕೂ ಬಿಗ್​​ಬಾಸ್ ಶೋಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಅದರ ಬೆನ್ನಲ್ಲೆ ಬಿಗ್​​ಬಾಸ್ ಶೋ ನಡೆಸಲು ಅನುಮತಿ ದೊರೆತಿದ್ದು ಮುಖ್ಯ ದ್ವಾರವನ್ನಲ್ಲದೆ ಜಾಲಿವುಡ್​​ ಸ್ಟುಡಿಯೋಸ್​​ನ ಸಿ ಗೇಟ್ ಮಾತ್ರ ಓಪನ್ ಮಾಡಿಸಿ ಬಿಗ್​​ಬಾಸ್ ಸಿಬ್ಬಂದಿ ಮತ್ತು ಸ್ಪರ್ಧಿಗಳನ್ನು ಒಳಗೆ ಬಿಟ್ಟಿದ್ದಾರೆ.

ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ನೇತೃತ್ವದಲ್ಲಿ ಜಾಲಿವುಡ್ ಸ್ಟುಡಿಯೋನ ಸಿ ಗೇಟ್ ಓಪನ್ ಮಾಡಲಾಗಿದೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಗೆ ಬೆಂಗಳೂರು ದಕ್ಷಿಣ ಎಸ್​ಪಿ ಶ್ರೀನಿವಾಸಗೌಡ ಸಹ ಸಾಥ್ ನೀಡಿದರು. ಕೇವಲ ಬಿಗ್​​ಬಾಸ್​ ಶೋಗೆ ಮಾತ್ರವೇ ಅವಕಾಶ ಕಲ್ಪಿಸಲಾಗಿದ್ದು, ಜಾಲಿವುಡ್​ ಸ್ಟುಡಿಯೋನಲ್ಲಿ ಇನ್ಯಾವುದೇ ಚಟುವಟಿಕೆಗೆ ಸದ್ಯಕ್ಕೆ ಅವಕಾಶ ನೀಡಲಾಗಿಲ್ಲ.

ಇದನ್ನೂ ಓದಿ:ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?

ಬಿಗ್​​ಬಾಸ್ ಶೋಗೆ ಅವಕಾಶ ಸಿಕ್ಕ ಬೆನ್ನಲ್ಲೆ, ಈಗಲ್​​ಟನ್​​​ನಲ್ಲಿ ಉಳಿದುಕೊಂಡಿದ್ದ ಸ್ಪರ್ಧಿಗಳನ್ನು ಅಲ್ಲಿಂದ ಶಿಫ್ಟ್ ಮಾಡಲಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ರೆಸಾರ್ಟ್​​ನಿಂದ ಎಲ್ಲ 17 ಸ್ಪರ್ಧಿಗಳನ್ನು ಬಿಗ್​​ಬಾಸ್ ಮನೆಗೆ ತಂದು ಬಿಡಲಾಗಿದೆ. ಕಾರಿನ ಗಾಜಿಗೆ ಕಪ್ಪು ಬಟ್ಟೆ ಹಾಕಿ, ಯಾರಿಗೂ ಸ್ಪರ್ಧಿಗಳು ಕಾಣದಂತೆ ಹಾಗೂ ಸ್ಪರ್ಧಿಗಳಿಗೂ ಹೊರಗಿನದ್ದು ಏನೂ ಕಾಣದಂತೆ ಕರೆದುಕೊಂಡು ಬರಲಾಗಿದೆ.

ಎಲ್ಲ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ವಾಪಸ್ಸಾಗಿದ್ದು ಇದೀಗ ಎಲ್ಲರೂ ಮತ್ತೆ ಆಟದಲ್ಲಿ ತೊಡಗಿಕೊಂಡಿದ್ದಾರೆ. ಇಂದು ರಾತ್ರಿ ಪ್ರಸಾರವಾಗುವ ಎಪಿಸೋಡ್​ ಈಗಾಗಲೇ ಎಡಿಟ್ ಆಗಿ ತಯಾರಾಗಿದೆ ಎನ್ನಲಾಗುತ್ತಿದೆ. ಸ್ಪರ್ಧಿಗಳು ಬಿಗ್​​ಬಾಸ್ ಮನೆಯಿಂದ ಹೊರಗೆ ಹೋದ ದಿನದ ಎಪಿಸೋಡ್​​ ಇಂದು ಪ್ರಸಾರ ಆಗಲಿದ್ದು, ಎಪಿಸೋಡ್​​ನಲ್ಲಿ ಸ್ಪರ್ಧಿಗಳು ಹೊರಗೆ ಹೋಗುವುದನ್ನೂ ತೋರಿಸಲಾಗಿದೆಯೇ ಎಂಬ ಕುತೂಹಲ ಇದೆ. ಇಂದು ಬಿಗ್​​ಬಾಸ್​​ನಲ್ಲಿ ನಡೆಯುವ ಚಟುವಟಿಕೆಗಳು ನಾಳಿನ ಎಪಿಸೋಡ್​​ನಲ್ಲಿ ಪ್ರಸಾರ ಆಗಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು