AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಕನ್ನಡ 12ರ ಮೊದಲ ಎಲಿಮಿನೇಷನ್ ಒಟ್ಟಿಗೆ ಇಬ್ಬರು ಹೊರಕ್ಕೆ

Bigg Boss Kannada 12: ಬಿಗ್​​ಬಾಸ್ ಕನ್ನಡ ಪ್ರಾರಂಭವಾದ ಮೊದಲ 24 ಗಂಟೆಗಳಲ್ಲಿಯೇ ಒಬ್ಬರನ್ನು ಎಲಿಮಿನೇಟ್ ಮಾಡಿ ಶಾಕ್ ನೀಡಲಾಗಿತ್ತು. ಸ್ಪರ್ಧಿಯಾಗಿ ಒಳಗೆ ಹೋಗಿದ್ದ ರಕ್ಷಿತಾ ಶೆಟ್ಟಿ ಮೊದಲ ದಿನವೇ ಹೊರಗೆ ಹೋಗಿದ್ದರು. ಆದರೆ ಇದೀಗ ಅವರು ಮನೆಗೆ ಬಂದಿದ್ದಾರೆ. ಆದರೆ ಇದೀಗ ಈ ಸೀಸನ್​​ನ ಮೊದಲ ಎಲಿಮಿನೇಷನ್ ನಡೆದಿದೆ. ಅದರಲ್ಲಿಯೂ ಮೊದಲ ವಾರವೇ ಇಬ್ಬರನ್ನು ಮನೆಯಿಂದ ಹೊರಗೆ ಹಾಕಲಾಗಿದೆ.

ಬಿಗ್​​ಬಾಸ್ ಕನ್ನಡ 12ರ ಮೊದಲ ಎಲಿಮಿನೇಷನ್ ಒಟ್ಟಿಗೆ ಇಬ್ಬರು ಹೊರಕ್ಕೆ
Bigg Boss Kannada 12
ಮಂಜುನಾಥ ಸಿ.
|

Updated on:Oct 05, 2025 | 10:40 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಪ್ರಾರಂಭವಾಗಿ ಇಂದಿಗೆ (ಅಕ್ಟೋಬರ್ 05) ಸರಿಯಾಗಿ ಒಂದು ವಾರವಾಗಿದೆ. ಬಿಗ್​​ಬಾಸ್ ಕನ್ನಡ ಪ್ರಾರಂಭವಾದ ಮೊದಲ 24 ಗಂಟೆಗಳಲ್ಲಿಯೇ ಒಬ್ಬರನ್ನು ಎಲಿಮಿನೇಟ್ ಮಾಡಿ ಶಾಕ್ ನೀಡಲಾಗಿತ್ತು. ಸ್ಪರ್ಧಿಯಾಗಿ ಒಳಗೆ ಹೋಗಿದ್ದ ರಕ್ಷಿತಾ ಶೆಟ್ಟಿ ಮೊದಲ ದಿನವೇ ಹೊರಗೆ ಹೋಗಿದ್ದರು. ಆದರೆ ಇದೀಗ ಅವರು ಮನೆಗೆ ಬಂದಿದ್ದಾರೆ. ಆದರೆ ಇದೀಗ ಈ ಸೀಸನ್​​ನ ಮೊದಲ ಎಲಿಮಿನೇಷನ್ ನಡೆದಿದೆ. ಅದರಲ್ಲಿಯೂ ಮೊದಲ ವಾರವೇ ಇಬ್ಬರನ್ನು ಮನೆಯಿಂದ ಹೊರಗೆ ಹಾಕಲಾಗಿದೆ.

ಸಾಮಾನ್ಯವಾಗಿ ಬಿಗ್​​ಬಾಸ್ ಸೀಸನ್ ಪ್ರಾರಂಭವಾಗಿ ಹಲವು ವಾರಗಳ ಬಳಿಕ ಫಿನಾಲೆ ವಾರ ಹತ್ತಿರವಿದ್ದಾಗ ಬಿಗ್​​ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್ ಮಾಡುವುದು ಬಿಗ್​​ಬಾಸ್​​ನಲ್ಲಿ ವಾಡಿಕೆ. ಆದರೆ ಈ ಬಾರಿ ಮೊದಲ ವಾರವೇ ಬಿಗ್​​ಬಾಸ್ ಮನೆಯಿಂದ ಇಬ್ಬರನ್ನು ಹೊರಗೆ ಹಾಕಲಾಗಿದೆ. ಈ ಸೀಸನ್ ಹಿಂದಿನ ಸೀಸನ್​​ಗಳ ರೀತಿ ಅಲ್ಲ ಎಂದು ಸುದೀಪ್ ಹೇಳಿದ್ದರು ಅದರಂತೆ ಮೊದಲ ವಾರವೇ ಡಬಲ್ ಎಲಿಮಿನೇಷನ್ ಮಾಡಿ ಪ್ರೇಕ್ಷಕರಿಗೆ ಶಾಕ್ ನೀಡಲಾಗಿದೆ.

ಮೊದಲ ವಾರವೇ ಸಾಕಷ್ಟು ಮಂದಿ ನಾಮಿನೇಟ್ ಆಗಿದ್ದರು. ನಿನ್ನೆ ಮಲ್ಲಮ್ಮ ಸೇರಿದಂತೆ ಕೆಲವರು ಸೇಫ್ ಆಗಿದ್ದರು. ಇಂದಿನ ಎಪಿಸೋಡ್​​ನಲ್ಲಿ ಗಿಲ್ಲಿ, ಕಾವ್ಯಾ, ಧನುಶ್ ಇನ್ನೂ ಕೆಲವರು ಆರಂಭದಲ್ಲಿಯೇ ಸೇಫ್ ಆದರು. ಕೊನೆಯದಾಗಿ ಜಂಟಿ ಟೀಮಿನ ಅಮಿತ್ ಮತ್ತು ಕರಿಬಸವ ಹಾಗೂ ಅಭಿಷೇಕ್ ಮತ್ತು ಅಶ್ವಿನಿ ಉಳಿದುಕೊಂಡರು. ಈ ಜಂಟಿ ಜೋಡಿಯಲ್ಲಿ ಮನೆಯಿಂದ ಹೊರಬಂದಿದ್ದು ಅಮಿತ್ ಮತ್ತು ಕರಿಬಸಪ್ಪ ಅವರು.

ಇದನ್ನೂ ಓದಿ:ಬಿಗ್​​ಬಾಸ್ ಕನ್ನಡ 12: ಕನ್ನಡಿಗರಿಗೆ ಸಿಕ್ತು ಕಿಚ್ಚನ ಚಪ್ಪಾಳೆ, ಕಾರಣ?

ಇಬ್ಬರ ಎಲಿಮಿನೇಷನ್ ಘೋಷಣೆ ಮಾಡಿದ ಸುದೀಪ್, ಇಬ್ಬರೂ ಕಳಪೆ ಆಗಿ ಆಡಿದಿರಿ ಎಂದೇನೂ ಇಲ್ಲ. ಒಬ್ಬರ ಆಟ ಇನ್ನೊಬ್ಬರ ಮೇಲೆ ಪ್ರಭಾವ ಬೀರಿದೆ. ಇಬ್ಬರೂ ಜೋಡಿ ಆಗಿದ್ದೇ ಇಬ್ಬರೂ ಒಟ್ಟಿಗೆ ಹೊರಗೆ ಬರಲು ಕಾರಣ ಆಯ್ತೇನೋ ಎಂದರು. ಅಮಿತ್ ಹೊರಗೆ ಬಂದ ಬಳಿಕವೂ ಸಹ ಸುದೀಪ್ ಅವರು, ‘ನಿಮ್ಮಲ್ಲಿ ಸಾಕಷ್ಟು ಪ್ರತಿಭೆ ಇದೆ. ಯೋಚನೆ ಮಾಡುವ ಶಕ್ತಿ ಇದೆ. ಹೊರಗೆ ಸಹ ನಿಮ್ಮ ಕೆಲಸವನ್ನು ನಾವು ಗಮನಿಸಿದ್ದೇನೆ. ನಿಮ್ಮ ಬದುಕಿನ ಪಯಣವನ್ನು ನೀವು ಮುಂದುವರೆಸಿ’ ಎಂದು ಶುಭ ಹಾರೈಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Sun, 5 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ