AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಕನ್ನಡ 12ರ ಮೊದಲ ಎಲಿಮಿನೇಷನ್ ಒಟ್ಟಿಗೆ ಇಬ್ಬರು ಹೊರಕ್ಕೆ

Bigg Boss Kannada 12: ಬಿಗ್​​ಬಾಸ್ ಕನ್ನಡ ಪ್ರಾರಂಭವಾದ ಮೊದಲ 24 ಗಂಟೆಗಳಲ್ಲಿಯೇ ಒಬ್ಬರನ್ನು ಎಲಿಮಿನೇಟ್ ಮಾಡಿ ಶಾಕ್ ನೀಡಲಾಗಿತ್ತು. ಸ್ಪರ್ಧಿಯಾಗಿ ಒಳಗೆ ಹೋಗಿದ್ದ ರಕ್ಷಿತಾ ಶೆಟ್ಟಿ ಮೊದಲ ದಿನವೇ ಹೊರಗೆ ಹೋಗಿದ್ದರು. ಆದರೆ ಇದೀಗ ಅವರು ಮನೆಗೆ ಬಂದಿದ್ದಾರೆ. ಆದರೆ ಇದೀಗ ಈ ಸೀಸನ್​​ನ ಮೊದಲ ಎಲಿಮಿನೇಷನ್ ನಡೆದಿದೆ. ಅದರಲ್ಲಿಯೂ ಮೊದಲ ವಾರವೇ ಇಬ್ಬರನ್ನು ಮನೆಯಿಂದ ಹೊರಗೆ ಹಾಕಲಾಗಿದೆ.

ಬಿಗ್​​ಬಾಸ್ ಕನ್ನಡ 12ರ ಮೊದಲ ಎಲಿಮಿನೇಷನ್ ಒಟ್ಟಿಗೆ ಇಬ್ಬರು ಹೊರಕ್ಕೆ
Bigg Boss Kannada 12
ಮಂಜುನಾಥ ಸಿ.
|

Updated on:Oct 05, 2025 | 10:40 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಪ್ರಾರಂಭವಾಗಿ ಇಂದಿಗೆ (ಅಕ್ಟೋಬರ್ 05) ಸರಿಯಾಗಿ ಒಂದು ವಾರವಾಗಿದೆ. ಬಿಗ್​​ಬಾಸ್ ಕನ್ನಡ ಪ್ರಾರಂಭವಾದ ಮೊದಲ 24 ಗಂಟೆಗಳಲ್ಲಿಯೇ ಒಬ್ಬರನ್ನು ಎಲಿಮಿನೇಟ್ ಮಾಡಿ ಶಾಕ್ ನೀಡಲಾಗಿತ್ತು. ಸ್ಪರ್ಧಿಯಾಗಿ ಒಳಗೆ ಹೋಗಿದ್ದ ರಕ್ಷಿತಾ ಶೆಟ್ಟಿ ಮೊದಲ ದಿನವೇ ಹೊರಗೆ ಹೋಗಿದ್ದರು. ಆದರೆ ಇದೀಗ ಅವರು ಮನೆಗೆ ಬಂದಿದ್ದಾರೆ. ಆದರೆ ಇದೀಗ ಈ ಸೀಸನ್​​ನ ಮೊದಲ ಎಲಿಮಿನೇಷನ್ ನಡೆದಿದೆ. ಅದರಲ್ಲಿಯೂ ಮೊದಲ ವಾರವೇ ಇಬ್ಬರನ್ನು ಮನೆಯಿಂದ ಹೊರಗೆ ಹಾಕಲಾಗಿದೆ.

ಸಾಮಾನ್ಯವಾಗಿ ಬಿಗ್​​ಬಾಸ್ ಸೀಸನ್ ಪ್ರಾರಂಭವಾಗಿ ಹಲವು ವಾರಗಳ ಬಳಿಕ ಫಿನಾಲೆ ವಾರ ಹತ್ತಿರವಿದ್ದಾಗ ಬಿಗ್​​ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್ ಮಾಡುವುದು ಬಿಗ್​​ಬಾಸ್​​ನಲ್ಲಿ ವಾಡಿಕೆ. ಆದರೆ ಈ ಬಾರಿ ಮೊದಲ ವಾರವೇ ಬಿಗ್​​ಬಾಸ್ ಮನೆಯಿಂದ ಇಬ್ಬರನ್ನು ಹೊರಗೆ ಹಾಕಲಾಗಿದೆ. ಈ ಸೀಸನ್ ಹಿಂದಿನ ಸೀಸನ್​​ಗಳ ರೀತಿ ಅಲ್ಲ ಎಂದು ಸುದೀಪ್ ಹೇಳಿದ್ದರು ಅದರಂತೆ ಮೊದಲ ವಾರವೇ ಡಬಲ್ ಎಲಿಮಿನೇಷನ್ ಮಾಡಿ ಪ್ರೇಕ್ಷಕರಿಗೆ ಶಾಕ್ ನೀಡಲಾಗಿದೆ.

ಮೊದಲ ವಾರವೇ ಸಾಕಷ್ಟು ಮಂದಿ ನಾಮಿನೇಟ್ ಆಗಿದ್ದರು. ನಿನ್ನೆ ಮಲ್ಲಮ್ಮ ಸೇರಿದಂತೆ ಕೆಲವರು ಸೇಫ್ ಆಗಿದ್ದರು. ಇಂದಿನ ಎಪಿಸೋಡ್​​ನಲ್ಲಿ ಗಿಲ್ಲಿ, ಕಾವ್ಯಾ, ಧನುಶ್ ಇನ್ನೂ ಕೆಲವರು ಆರಂಭದಲ್ಲಿಯೇ ಸೇಫ್ ಆದರು. ಕೊನೆಯದಾಗಿ ಜಂಟಿ ಟೀಮಿನ ಅಮಿತ್ ಮತ್ತು ಕರಿಬಸವ ಹಾಗೂ ಅಭಿಷೇಕ್ ಮತ್ತು ಅಶ್ವಿನಿ ಉಳಿದುಕೊಂಡರು. ಈ ಜಂಟಿ ಜೋಡಿಯಲ್ಲಿ ಮನೆಯಿಂದ ಹೊರಬಂದಿದ್ದು ಅಮಿತ್ ಮತ್ತು ಕರಿಬಸಪ್ಪ ಅವರು.

ಇದನ್ನೂ ಓದಿ:ಬಿಗ್​​ಬಾಸ್ ಕನ್ನಡ 12: ಕನ್ನಡಿಗರಿಗೆ ಸಿಕ್ತು ಕಿಚ್ಚನ ಚಪ್ಪಾಳೆ, ಕಾರಣ?

ಇಬ್ಬರ ಎಲಿಮಿನೇಷನ್ ಘೋಷಣೆ ಮಾಡಿದ ಸುದೀಪ್, ಇಬ್ಬರೂ ಕಳಪೆ ಆಗಿ ಆಡಿದಿರಿ ಎಂದೇನೂ ಇಲ್ಲ. ಒಬ್ಬರ ಆಟ ಇನ್ನೊಬ್ಬರ ಮೇಲೆ ಪ್ರಭಾವ ಬೀರಿದೆ. ಇಬ್ಬರೂ ಜೋಡಿ ಆಗಿದ್ದೇ ಇಬ್ಬರೂ ಒಟ್ಟಿಗೆ ಹೊರಗೆ ಬರಲು ಕಾರಣ ಆಯ್ತೇನೋ ಎಂದರು. ಅಮಿತ್ ಹೊರಗೆ ಬಂದ ಬಳಿಕವೂ ಸಹ ಸುದೀಪ್ ಅವರು, ‘ನಿಮ್ಮಲ್ಲಿ ಸಾಕಷ್ಟು ಪ್ರತಿಭೆ ಇದೆ. ಯೋಚನೆ ಮಾಡುವ ಶಕ್ತಿ ಇದೆ. ಹೊರಗೆ ಸಹ ನಿಮ್ಮ ಕೆಲಸವನ್ನು ನಾವು ಗಮನಿಸಿದ್ದೇನೆ. ನಿಮ್ಮ ಬದುಕಿನ ಪಯಣವನ್ನು ನೀವು ಮುಂದುವರೆಸಿ’ ಎಂದು ಶುಭ ಹಾರೈಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Sun, 5 October 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ