AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಕ್ರೋಚ್ ಸುಧಿ ಕಾರಣಕ್ಕೆ ಹೊತ್ತಿ ಉರಿಯಿತು ಬಿಗ್ ಬಾಸ್ ಮನೆ

ಬಿಗ್ ಬಾಸ್ ಕನ್ನಡ 12ರ ಮೊದಲ ವಾರದಲ್ಲಿ ಕಾಕ್ರೋಚ್ ಸುಧಿ ಕಾರಣಕ್ಕೆ ದೊಡ್ಮನೆ ಹೊತ್ತಿ ಉರಿಯಿತು. ಟಾಸ್ಕ್ ನಿರ್ಧಾರದಲ್ಲಿ ಉಸ್ತುವಾರಿಗಳ ತಪ್ಪು ಹಾಗೂ ನಿಯಮ ಉಲ್ಲಂಘನೆ ಬಗ್ಗೆ ಬಿಗ್ ಬಾಸ್ ಪ್ರಶ್ನಿಸಿದಾಗ ಗೊಂದಲ ಹೆಚ್ಚಿತು. ಸುಧಿಗೆ ಮತ್ತೆ ಅವಕಾಶ ನೀಡುವ ಬಗ್ಗೆ ಧನುಷ್ ವಿರೋಧ ವ್ಯಕ್ತಪಡಿಸಿದರು. ಸುಧಿ ವಾದದಿಂದ ಇಡೀ ಮನೆಯಲ್ಲಿ ಅಶಾಂತಿ ಮೂಡಿದೆ.

ಕಾಕ್ರೋಚ್ ಸುಧಿ ಕಾರಣಕ್ಕೆ ಹೊತ್ತಿ ಉರಿಯಿತು ಬಿಗ್ ಬಾಸ್ ಮನೆ
ಸುಧಿ
ರಾಜೇಶ್ ದುಗ್ಗುಮನೆ
|

Updated on: Oct 03, 2025 | 7:32 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) ಮೊದಲ ವಾರವೇ ಕಿಡಿ ಹೊತ್ತಿಕೊಂಡಿದೆ. ‘ನಾನು-ನೀವು ಬೆಸ್ಟ್ ಫ್ರೆಂಡ್ಸ್’ ಎಂದು ಹೇಳಿಕೊಂಡವರ ಮಧ್ಯೆಯೇ ಕಿರಿಕ್ ಉಂಟಾಗಿದೆ. ಜಗಳದ ಕಾವು ಜೋರಾಗಿದೆ. ಈಗ ದೊಡ್ಮನೆಯಲ್ಲಿ ಕಾಕ್ರೋಚ್ ಸುಧಿ ಅವರು ಮೊದಲ ಬಾರಿಗೆ ಧ್ವನಿ ಎತ್ತಿದ್ದಾರೆ. ಅವರ ಕಾರಣಕ್ಕೆ ಇಡೀ ಮನೆಯಲ್ಲಿ ಬಿಸಿಯ ಕಾವು ಹೆಚ್ಚಿದೆ. ಮುಂದೆ ಏನಾಗುತ್ತದೆ ಎಂಬ ಕುತೂಹಲ ಮೂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಮೊದಲ ವಾರ ಜಂಟಿ ಹಾಗೂ ಒಂಟಿ ಎಂಬ ಎರಡು ತಂಡಗಳನ್ನು ರಚಿಸಲಾಗಿದೆ. ಎರಡೂ ತಂಡಗಳ ಮಧ್ಯೆ ಟಾಸ್ಕ್ ಏರ್ಪಡಿಸಲಾಗುತ್ತಿದೆ. ಈಗ ಮೂರನೇ ವಾರದಲ್ಲಿ ನಡೆಯುವ ಫಿನಾಲೆಗೆ ಫೈನಲಿಸ್ಟ್ ಆಯ್ಕೆ ಮಾಡಲು ಟಾಸ್ಕ್ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ಗೆ ಅಶ್ವಿನಿ ಗೌಡ, ಗಿಲ್ಲಿ ನಟ ಹಾಗೂ ಕಾವ್ಯಾ ಶೈವ ಅವರು ಉಸ್ತುವಾರಿ ಆಗಿದ್ದರು. ಉಸ್ತುವಾರಿ ಮಾಡುವಾಗ ನಡೆದ ತಪ್ಪಿನಿಂದ ಇಡೀ ಮನೆ ಅಲ್ಲೋಲ ಕಲ್ಲೋಲ ಆಗಿದೆ.

ಟಾಸ್ಕ್ ನಡೆಯುವ ವೇಳೆ ಉಸ್ತುವಾರಿಗಳು ತೆಗೆದುಕೊಂಡ ನಿರ್ಧಾರದ ಬಗ್ಗೆ ಪ್ರಶ್ನೆ ಮೂಡಿದೆ. ಈ ಬಗ್ಗೆ ಬಿಗ್ ಬಾಸ್ ಕೂಡ ಪ್ರಶ್ನೆ ಮಾಡಿದರು. ಆ ಬಳಿಕ ಉಸ್ತುವಾರಿಗಳು ಗೊಂದಲಕ್ಕೆ ಸಿಲುಕಿದರು. ನಿಯಮ ಉಲ್ಲಂಘನೆ ಆಗಿರೋದು ಸ್ಪಷ್ಟವಾಗಿತ್ತು. ಮುಂದೇನು ಮಾಡಬೇಕು ಎಂಬುದು ತಿಳಿಯದೇ ಎಲ್ಲರೂ ಕಂಗಾಲಾದರು. ಆಗ ಧನುಷ್ ಹಾಗೂ ಸುಧಿ ಮಧ್ಯೆ ಕಿರಿಕ್ ಆಗಿದೆ.

ಇದನ್ನೂ ಓದಿ
Image
‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್
Image
ಕ್ಲೈಮ್ಯಾಕ್ಸ್​ನಲ್ಲಿ ‘ಕಾಂತಾರ: ಚಾಪ್ಟರ್ 2’ ಬಗ್ಗೆ ಘೋಷಣೆ
Image
ಪ್ರೀಮಿಯರ್ ಶೋಗಳಿಂದಲೇ ಕೋಟಿ ಕೋಟಿ ಬಾಚಿದ ‘ಕಾಂತಾರ: ಚಾಪ್ಟರ್ 1’
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಸುಧಿ ಅವರು ತಮಗೆ ಆಟದಲ್ಲಿ ಮತ್ತೆ ಅವಕಾಶ ನೀಡಬೇಕು ಎಂದು ವಾದಿಸಿದ್ದಾರೆ. ಆದರೆ, ಉಸ್ತುವಾರಿಗಳು ಇದಕ್ಕೆ ಸಿದ್ಧರಿಲ್ಲ. ಅತ್ತ ಧನುಷ್ ಕೂಡ ಈ ಬಗ್ಗೆ ಬೇಸರ ಹೊರಹಾಕಿದರು. ಸುಧಿಗೆ ಮತ್ತೆ ಅವಕಾಶ ನೀಡಿದರೆ ನನಗೆ ಮೋಸ ಆಗುತ್ತದೆ ಎಂದು ವಾದ ಮುಂದಿಟ್ಟರು. ಆ ಬಳಿಕ ಅಶ್ವಿನಿ ಹಾಗೂ ಕಾವ್ಯಾ ಶೈವ ಬಳಿ ಜೋರು ಜೋರಾಗಿಯೇ ಕೂಗಾಡಿಬಿಟ್ಟರು. ಇದರಿಂದ ಇಡೀ ಮನೆಯಲ್ಲಿ ಅಶಾಂತಿ ಮೂಡಿದೆ.

ಇದನ್ನೂ ಓದಿ: ಅಶ್ವಿನಿ ಗೌಡಗೆ ಸಿಕ್ಕಾಪಟ್ಟೆ ಕ್ವಾಟ್ಲೆ ಕೊಟ್ಟ ಗಿಲ್ಲಿ ನಟ: ಬಿಗ್ ಬಾಸ್ ಮನೆ ತುಂಬ ನಗು

ಸುಧಿ ಬಂದ ದಿನದಿಂದಲೂ ಸೈಲೆಂಟ್ ಆಗಿಯೇ ಇದ್ದರು. ಅವರ ಧ್ವನಿ ಎಲ್ಲಿಯೂ ಹೊರ ಬಂದಿರಲಿಲ್ಲ. ಆದರೆ, ಟಾಸ್ಕ್ ವಿಚಾರ ಎಂಬುದು ಬಂದಾಗ ಎಲ್ಲರೂ ರೌದ್ರಾವತರಾ ತಾಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್