AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಕನ್ನಡ: ಅಶ್ವಿನಿ ಗೌಡ ವರ್ಸಸ್ ಗಿಲ್ಲಿ ನಟ; ರೊಚ್ಚಿಗೆದ್ದ ಅಭಿಮಾನಿಗಳು

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಭರ್ಜರಿಯಾಗಿ ಪ್ರಚಾರ ಮಾಡಲಾಗುತ್ತಿದೆ. ಗಿಲ್ಲಿ ನಟ ಗೆಲ್ಲಬೇಕು ಎಂದು ಫ್ಯಾನ್ಸ್ ಹೇಳುತ್ತಿದ್ದಾರೆ. ವಿಶೇಷವಾಗಿ ಆಟೋ ಚಾಲಕರು ಗಿಲ್ಲಿ ಅವರಿಗೆ ಸಪೋರ್ಟ್ ಮಾಡುತ್ತಿದ್ದಾರೆ. ಗಿಲ್ಲಿ ನಟ ಅವರಿಗೆ ಅಶ್ವಿನಿ ಗೌಡ ಅವರು ಮೊದಲಿನಿಂದಲೂ ಟಕ್ಕರ್ ಕೊಡುತ್ತಿದ್ದಾರೆ. ಅಭಿಮಾನಿಗಳು ಆ ಬಗ್ಗೆ ಮಾತನಾಡಿದ್ದಾರೆ.

ಬಿಗ್ ಬಾಸ್ ಕನ್ನಡ: ಅಶ್ವಿನಿ ಗೌಡ ವರ್ಸಸ್ ಗಿಲ್ಲಿ ನಟ; ರೊಚ್ಚಿಗೆದ್ದ ಅಭಿಮಾನಿಗಳು
Gilli Nata, Ashwini Gowda
Malatesh Jaggin
| Edited By: |

Updated on: Jan 14, 2026 | 6:18 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12 Finale) ಫಿನಾಲೆ ಹತ್ತಿರ ಆಗಿದೆ. ಈ ವಾರಾಂತ್ಯದಲ್ಲಿ ಫಿನಾಲೆ ನಡೆಯಲಿದೆ. ಗಿಲ್ಲಿ ನಟ (Gilli Nata) ಗೆಲ್ಲುತ್ತಾರೆ ಎಂದು ಇಡೀ ರಾಜ್ಯದಲ್ಲಿ ಅಭಿಪ್ರಾಯ ಮನೆ ಮಾಡಿದೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಮಾಡುತ್ತಿರುವ ಕಮೆಂಟ್ ಸುರಿಮಳೆಯೇ ಅದಕ್ಕೆ ಸಾಕ್ಷಿಯಾಗಿದೆ. ಯಾರು ಗೆಲ್ಲುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿದೆ. ಗಿಲ್ಲಿ ನಟ ಅವರ ಅಭಿಮಾನಿಗಳು ಅಶ್ವಿನಿ ಗೌಡ ವಿರುದ್ಧ ಕೊಂಚ ಗರಂ ಆಗಿದ್ದಾರೆ. ಕನ್ನಡ ಪರ ಹೋರಾಟಗಾರ್ತಿ ಎನ್ನುವ ಅಶ್ವಿನಿ ಗೌಡ (Ashwini Gowda) ಅವರು ಹೆಚ್ಚು ಇಂಗ್ಲಿಷ್ ಬಳಸುವುದೇ ವೀಕ್ಷಕರು ಕೋಪಕ್ಕೆ ಕಾರಣ ಆಗಿದೆ.

‘ಗಿಲ್ಲಿ ನಟ ಹಳ್ಳಿಯ ಪ್ರತಿಭೆ. ಬರೀ ಮಾಯಿ ಮಾತಲ್ಲಿ ಹೇಳಬಾರದು. ಇಡೀ ಕರ್ನಾಟಕದ ಜನರು ಅವನಿಗೆ ವೋಟ್ ಮಾಡಿ ಗೆಲ್ಲಿಸಬೇಕು. ಯಾರೋ ಹೇಳುತ್ತಾರೆ ಅಂತ ನಾವು ಮನಸ್ಸು ಬದಲಾಯಿಸಬಾರದು. ಕನ್ನಡ ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ಸರಿಯಾಗಿ ಕನ್ನಡ ಬಳಸುತ್ತಿಲ್ಲ. ಬರೀ ಇಂಗ್ಲಿಷ್ ಬಳಸುತ್ತಾರೆ. ಅವರಿಗೆ ನಾವು ಧಿಕ್ಕಾರ ಕೂಗಬೇಕಾಗಯತ್ತದೆ’ ಎಂದು ಗಿಲ್ಲಿ ನಟನ ಅಭಿಮಾನಿಯೊಬ್ಬರು ಹೇಳಿದ್ದಾರೆ.

‘ಹೋರಾಟಗಾರ್ತಿಯಾಗಿ ಹೆಣ್ಮಕ್ಕಳ ಪರ ನಿಲ್ಲುತ್ತೇನೆ ಅಂತ ಅಶ್ವಿನಿ ಗೌಡ ಹೇಳುತ್ತಾರೆ. ಆದರೆ ಒಬ್ಬ ಹೆಣ್ಮಗಳನ್ನು ಅವರು ಹೀಯಾಳಿಸುತ್ತಾರೆ. ಅಶ್ವಿನಿ ಗೌಡ ಬದಲು ಗಿಲ್ಲಿ ನಟ ಅವರಿಗೆ ವೋಟ್ ಮಾಡಿ ಗೆಲ್ಲಿಸಿ’ ಎಂದು ಅಭಿಮಾನಿಯೊಬ್ಬರು ಟಿವಿ9 ಜೊತೆ ಮಾತನಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರಾಜ್ಯಾದ್ಯಂತ ಇರುವ ಗಿಲ್ಲಿ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪ್ರಚಾರ ಜೋರಾಗಿ ಮಾಡುತ್ತಿದ್ದಾರೆ.

‘ಗಿಲ್ಲಿ ತುಂಬಾ ಕಷ್ಟಪಟ್ಟು ಬಂದಿದ್ದಾನೆ. ಎಲ್ಲರ ಜೊತೆ ಮಾತನಾಡುತ್ತಾನೆ. ಗಿಲ್ಲಿ ಬಡವರ ಮಗ. ಹಾಗಾಗಿ ಅವನು ಗೆಲ್ಲಬೇಕು. ಅವನೇ ಗೆಲ್ಲುತ್ತಾನೆ ಎಂಬ ನಂಬಿಕೆ ಶೇಕಡ 100ರಷ್ಟು ಇದೆ. ಮೊದಲ ಸೀಸನ್​ನಿಂದ 12ನೇ ಸೀಸನ್ ತನಕ ಈ ಪರಿ ಕ್ರೇಜ್ ಯಾರಿಗೂ ಬಂದಿಲ್ಲ. ಗಿಲ್ಲಿಗೆ 1 ಮಿಲಿಯನ್ ಫಾಲೋವರ್​ಸ್ ಆಗಿದ್ದಾರೆ’ ಎಂದು ಅಭಿಮಾನಿಗಳು ಹೇಳಿದ್ದಾರೆ.

ಇದನ್ನೂ ಓದಿ: ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು

‘ನಾವು ಯಾರೂ ಕೂಡ ದುಡ್ಡು ತೆಗೆದುಕೊಂಡಿಲ್ಲ. ಅವನ ಪ್ರತಿಭೆ ನೋಡಿ ಸ್ವಇಚ್ಛೆಯಿಂದ ಪ್ರಚಾರ ಮಾಡುತ್ತಿದ್ದೇವೆ. ರೈತನ ಮಗ ಅವನು ಗೆಲ್ಲುತ್ತಾನೆ’ ಎಂದು ಟಿವಿ9 ಜೊತೆ ಮಾತನಾಡಿದ ಅಭಿಮಾನಿಗಳು ಹೇಳಿದ್ದಾರೆ. ಗಿಲ್ಲಿ ಗೆದ್ದರೆ ಕೆಲವು ಆಟೋ ಚಾಲಕರು ಉಚಿತ ಸೇವೆ ನೀಡುವುದಾಗಿಯೂ ಹೇಳಿದ್ದಾರೆ. ಒಟ್ಟಿನಲ್ಲಿ ಗಿಲ್ಲಿ ಮೇಲೆ ಜನರು ತೋರಿಸುತ್ತಿರುವ ಪ್ರೀತಿ ದೊಡ್ಡದಾಗಿದೆ. ಜನವರಿ 17 ಮತ್ತು 18ರಂದು ಫಿನಾಲೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಪನ್ನೀರ್​​ಸೆಲ್ವಂ ಡಿಎಂಕೆಗೆ ಸೇರ್ಪಡೆ
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಜಿಮ್ ಸೇರಿದ ವಾರದಲ್ಲೇ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಸಾವು
ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ!
ಮಾ.03ರ ಚಂದ್ರಗ್ರಹಣದ ಬಳಿಕ ಈ ರಾಶಿಗೆ ಹಣ, ಸಂಪತ್ತು, ಖ್ಯಾತಿ ಅರಸಿ ಬರಲಿದೆ!