ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಬಗ್ಗೆ ಸುದೀಪ್ ಕೊಟ್ಟರು ಮಾಹಿತಿ

ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ಹತ್ತಿರವಾಗಿದ್ದು, ಕಿಚ್ಚ ಸುದೀಪ್ ಸ್ಪರ್ಧಿಗಳಿಗೆ ಪ್ರಮುಖ ಮಾಹಿತಿ ನೀಡಿದ್ದಾರೆ. ಜನವರಿಯಲ್ಲಿ ಫಿನಾಲೆ ನಡೆಯಲಿದೆ. ಈ ವೇಳೆ ಓವರ್‌ಕಾನ್ಫಿಡೆನ್ಸ್ ಬೇಡ ಎಂದು ಸುದೀಪ್ ಎಚ್ಚರಿಸಿದ್ದಾರೆ. ಕಪ್ ಗೆಲ್ಲಲು ಕಡಿಮೆ ಸ್ಪರ್ಧಿಗಳು ಮಾತ್ರ ಉಳಿದಿದ್ದು, ಮಧ್ಯ ವಾರದ ಎಲಿಮಿನೇಷನ್ ಮತ್ತು ಡಬಲ್ ಎಲಿಮಿನೇಷನ್ ಕೂಡ ಇರಲಿದೆ.

ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಬಗ್ಗೆ ಸುದೀಪ್ ಕೊಟ್ಟರು ಮಾಹಿತಿ
ಸುದೀಪ್
Edited By:

Updated on: Dec 15, 2025 | 7:35 AM

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಆರಂಭ ಆಗಿ ಮೂರು ತಿಂಗಳು ಕಳೆಯುತ್ತಾ ಬಂದಿದೆ. ಅದರ ಜೊತೆಗೆ ಫಿನಾಲೆಗೂ ದಿನಗಣನೆ ಶುರುವಾಗಿದೆ. ಈ ಫಿನಾಲೆಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಬಾರಿ ಯಾರು ಕಪ್ ಗೆಲ್ಲುತ್ತಾರೆ ಎನ್ನುವ ಕುತೂಹಲ ಮೂಡಿದೆ. ಈಗ ಫಿನಾಲೆ ಬಗ್ಗೆ ಸುದೀಪ್ ಅವರು ವೀಕೆಂಡ್​ನಲ್ಲಿ ಮಾಹಿತಿ ನೀಡಿದರು. ಅವರು ಈ ಬಗ್ಗೆ ವಿವರ ನೀಡುವುದಕ್ಕೂ ಒಂದು ಕಾರಣ ಇದೆ ಎಂದರೂ ತಪ್ಪಾಗಲಿಕ್ಕಿಲ್ಲ. ಅಷ್ಟಕ್ಕೂ ಏನದು? ಆ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಆರಂಭ ಆಗಿದ್ದು ಸೆಪ್ಟೆಂಬರ್ 28ರಂದು ಆರಂಭ ಆಯಿತು. ಕಲರ್ಸ್ ಕನ್ನಡ ಹಾಗೂ ಜಿಯೋ ಹಾಟ್​​ಸ್ಟಾರ್​ನಲ್ಲಿ ಈ ಶೋ ಪ್ರಸಾರ ಕಾಣುತ್ತಿದೆ. ಪ್ರತಿ ದಿನ ರಾತ್ರಿ 9.30ಕ್ಕೆ ಶೋ ಪ್ರಸಾರ ಕಾಣುತ್ತಿದೆ. ವೀಕೆಂಡ್​ನಲ್ಲಿ ಶೋ ರಾತ್ರಿ 9 ಗಂಟೆಗೆ ಪ್ರಸಾರ ಆಗುತ್ತಿದೆ. ಈ ಬಾರಿ ಅಕ್ಟೋಬರ್ 8ರಂದು ಶೋ ಸಸ್ಪೆಂಡ್ ಆಗಿತ್ತು. ಈ ಶೋ ನಡೆಯುತ್ತಿರುವ ಜಾಲಿವುಡ್​ಗೆ ಆದ ತೊಂದರೆಯೇ ಶೋ ನಿಲ್ಲಲು ಕಾರಣ ಆಗಿತ್ತು. ಆ ಬಳಿಕ ಅಕ್ಟೋಬರ್ 9ರಂದು ಶೋ ಆರಂಭ ಆಯಿತು. ಈ ಬಾರಿ ಸಾಕಷ್ಟು ವಿವಾದಗಳು ನಡೆದವು.

ಈ ಬಾರಿ ಶೋನಲ್ಲಿ 24 ಜನರನ್ನು ತರಲಾಗಿದೆ. ಇದರ ಪೈಕಿ ಕೆಲವರು ವೈಲ್ಡ್ ಕಾರ್ಡ್ ಸ್ಪರ್ಧಿಗಳು. ಧ್ರುವಂತ್, ರಕ್ಷಿತಾ ಅವರನ್ನು ಸೀಕ್ರೆಟ್ ರೂಂನಲ್ಲಿ ಇಡಲಾಗಿದೆ. ಅವರನ್ನು ಬಿಟ್ಟು 11 ಜನರು ಉಳಿದುಕೊಂಡಿದ್ದಾರೆ. ‘ಇನ್ನು ಕೆಲವೇ ವಾರಗಳಲ್ಲಿ ಫಿನಾಲೆ ನಡೆಯಲಿದೆ’ ಎಂದು ಸುದೀಪ್ ಅವರು ಹೇಳಿದ್ದಾರೆ. ‘ಕೆಲವೇ ವಾರದಲ್ಲಿ ಫಿನಾಲೆ ಬರುತ್ತದೆ. ಹೀಗಾಗಿ, ಓವರ್ ಕಾನ್ಫಿಡೆನ್ಸ್ ಬೇಡ, ಅದೇ ರೀತಿ ಎಲ್ಲವನ್ನು ಹಗುರವಾಗಿ ತೆಗೆದುಕೊಳ್ಳೋದು ಬೇಡ’ ಎಂದರು ಸುದೀಪ್. ಕೆಲವು ವರದಿಗಳ ಪ್ರಕಾರ ಜನವರಿ 17 ಹಾಗೂ 18ರಂದು ಫಿನಾಲೆ ನಡೆಯಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಕಳೆದ ಎರಡು ಸೀಸನ್​ ಇಂದ ಫಿನಾಲೆಯಲ್ಲಿ ಆರು ಜನರನ್ನು ಇಡಲಾಗುತ್ತಾ ಇದೆ. ಅದು ಈ ಬಾರಿಯೂ ಮುಂದುವರಿಯುವ ಸಾಧ್ಯತೆ ಇದೆ. ಫಿನಾಲೆ ವಾರಕ್ಕೂ ಹಿಂದಿನ ವಾರ ಮಿಡಲ್ ವೀಕ್ ಎಲಿಮಿನೇಷನ್ ಕೂಡ ನಡೆಯಬಹುದು. ಸ್ಪರ್ಧಿಗಳ ಸಂಖ್ಯೆ ಹೆಚ್ಚಿರುವುದರಿಂದ ಡಬಲ್ ಎಲಿಮಿನೇಷನ್ ಕೂಡ ಇರಲಿದೆ. ಅದು ಯಾವ ವಾರ ನಡೆಯುತ್ತದೆ ಎನ್ನುವ ಕುತೂಹಲವೂ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us