AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಡು ತೀರಿಸಿಕೊಳ್ಳಲು ತಮ್ಮದೇ ತಂಡದ ರಾಶಿಕಾಗೆ ಮಣ್ಣು ಮುಕ್ಕಿಸಿದ ಗಿಲ್ಲಿ ನಟ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಪ್ರಬಲ ಸ್ಪರ್ಧಿಯಾಗಿ ಮಿಂಚುತ್ತಿದ್ದಾರೆ. ರಕ್ಷಿತಾ ಶೆಟ್ಟಿಯ ತಂಟೆಗೆ ಬಂದ ರಾಶಿಕಾಗೆ ಅವರು ಖಡಕ್ ತಿರುಗೇಟು ನೀಡಿದ್ದಾರೆ. ತಂಡದಲ್ಲಿದ್ದರೂ ಅನ್ಯಾಯ ಸಹಿಸದೆ ಗಿಲ್ಲಿ, ರಕ್ಷಿತಾ ಬೆಂಬಲಕ್ಕೆ ನಿಂತರು. ರಾಶಿಕಾ ಕಣ್ಣೀರು ಸುರಿಸುವಂತಾಯಿತು. ಗಿಲ್ಲಿ ಅವರ ದಿಟ್ಟ ಆಟ, ವಿಶೇಷವಾಗಿ ಅಶ್ವಿನಿ ಗೌಡ ಮತ್ತು ರಾಶಿಕಾ ವಿರುದ್ಧದ ಅವರ ನಿಲುವು, ಅನೇಕರ ಮೆಚ್ಚುಗೆಗೆ ಪಾತ್ರವಾಗಿದೆ.

ಸೇಡು ತೀರಿಸಿಕೊಳ್ಳಲು ತಮ್ಮದೇ ತಂಡದ ರಾಶಿಕಾಗೆ ಮಣ್ಣು ಮುಕ್ಕಿಸಿದ ಗಿಲ್ಲಿ ನಟ
ಗಿಲ್ಲಿ ನಟ-ರಾಶಿಕಾ
ರಾಜೇಶ್ ದುಗ್ಗುಮನೆ
|

Updated on:Oct 30, 2025 | 7:19 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBK 12) ಗಿಲ್ಲಿ ನಟ ಅವರು ಒಳ್ಳೆಯ ರೀತಿಯಲ್ಲಿ ಆಟ ಪ್ರದರ್ಶನ ಮಾಡುತ್ತಿದ್ದಾರೆ. ರಕ್ಷಿತಾ ಶೆಟ್ಟಿ ಹಾಗೂ ಕಾವ್ಯಾ ಶೈವ ತಂಟೆಗೆ ಯಾರಾದರೂ ಬಂದರೆ ಮುಲಾಜೇ ಇಲ್ಲದೆ ತಿರುಗೇಟು ನೀಡುತ್ತಿದ್ದಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ರಕ್ಷಿತಾ ಶೆಟ್ಟಿ ತಂಟೆಗೆ ಬಂದ ರಾಶಿಕಾಗೆ ಗಿಲ್ಲಿ ನಟ ಮಣ್ಣು ಮುಕ್ಕಿಸಿದ್ದಾರೆ. ರಾಶಿಕಾ ಹಾಗೂ ಗಿಲ್ಲಿ ನಟ ಒಂದೇ ತಂಡದಲ್ಲಿ ಇದ್ದರು. ಇದನ್ನು ಗಿಲ್ಲಿ ಲೆಕ್ಕಿಸಿಲ್ಲ. ಕೊನೆಗೆ ರಾಶಿಕಾ ಅಳುತ್ತಾ ಕೂರುವಂತೆ ಆಯಿತು.

ಗಿಲ್ಲಿ ನಟ ಅವರ ಆಟದ ಪ್ರದರ್ಶನ ಅನೇಕರಿಗೆ ಖುಷಿ ಕೊಟ್ಟಿದೆ. ಅದರಲ್ಲೂ ಅಶ್ವಿನಿ ಗೌಡ, ರಾಶಿಕಾ ಮೊದಲಾದವರ ವಿರುದ್ಧ ಅವರು ಟೊಂಕ ಕಟ್ಟಿ ನಿಲ್ಲುತ್ತಾರೆ. ಈ ಕಾರಣಕ್ಕೆ ಅವರು ಹೆಚ್ಚು ಇಷ್ಟ ಆಗುತ್ತಿದ್ದಾರೆ. ಅಕ್ಟೋಬರ್ 29ರ ಎಪಿಸೋಡ್​ನಲ್ಲಿ ರಾಶಿಕಾ ಅವರು ರಕ್ಷಿತಾ ಶೆಟ್ಟಿಯನ್ನು ಟಾರ್ಗೆಟ್ ಮಾಡಿದ್ದರು. ಕೈ ನೋವಿದೆ ಎಂದು ಹೇಳಿ ಅಡುಗೆ ಮಾಡುವುದರಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದರು ರಾಶಿಕಾ. ಎಲ್ಲಾ ಕೆಲಸವನ್ನು ರಕ್ಷಿತಾ ಶೆಟ್ಟಿ ಬಳಿ ಮಾಡಿಸಬೇಕು ಎಂಬುದು ಇವರ ಉದ್ದೇಶ ಆಗಿತ್ತು.

ಇದನ್ನೂ ಓದಿ
Image
ಸಾಯುವುದಕ್ಕೂ ಸರಿಯಾಗಿ ಒಂದು ವರ್ಷ ಮೊದಲು ಅಪ್ಪು ಮಾಡಿದ ಒಳ್ಳೆಯ ಕೆಲಸ ನೋಡಿ
Image
ಪುನೀತ್ ಪುಣ್ಯಸ್ಮರಣೆ; 4 ವರ್ಷಗಳ ಹಿಂದೆ ನಿಜಕ್ಕೂ ನಡೆದಿದ್ದೇನು?
Image
Shocking News: ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರ ನಡೆದ ಮಲ್ಲಮ್ಮ
Image
‘ಜಾನ್ವಿ ಗೆಳೆತನದಿಂದ ನನಗೆ ಕಳಂಕ ಬಂದಿದೆ’; ಬದಲಾದ ಅಶ್ವಿನಿ ಗೌಡ

ರಕ್ಷಿತಾ ಶೆಟ್ಟಿ ಅವರು ಇದಕ್ಕೆಲ್ಲ ಅಂಜುವವರಲ್ಲ. ಅಶ್ವಿನಿ ಗೌಡ, ರಾಶಿಕಾ ಮೊದಲಾದವರು ಒಟ್ಟಾಗಿ ರಕ್ಷಿತಾ ಶೆಟ್ಟಿ ಮೇಲೆ ಬಿದ್ದರೂ ಅವರು ಲೆಕ್ಕಿಸಿಲ್ಲ. ಇನ್ನು ಗೇಮ್ ಆಡುವಾಗ ರಕ್ಷಿತಾ ಶೆಟ್ಟಿ ಅವರ ಮೇಲೆ ರಾಶಿಕಾ ಬಿದ್ದಿದ್ದಾರೆ. ಅವರು ಮೇಲೇಳಲೂ ಕೊಟ್ಟಿಲ್ಲ. ಬಿಡಿ ಬಿಡಿ ಎಂದು ರಕ್ಷಿತಾ ಪರಿಪರಿ ಆಗಿ ಕೇಳಿಕೊಂಡರೂ ರಾಶಿಕಾ ಇದಕ್ಕೆ ಕಿವಿಕೊಡಲಿಲ್ಲ. ಇದನ್ನು ಗಿಲ್ಲಿ ನಟ ಅವರು ಖಂಡಿಸಿದ್ದಾರೆ. ‘ನಮ್ಮದೇ ಟೀಂ ವಿರುದ್ಧ ತಿರುಗಿ ಬೀಳ್ತಾ ಇದೀಯಲ್ಲ’ ಎಂದು ಗಿಲ್ಲಿಗೆ ರಾಶಿಕಾ ಅವಾಜ್ ಹಾಕಿದ್ದಾರೆ.

ಇದನ್ನೂ ಓದಿ: Mallamma: ಬಿಗ್ ಬಾಸ್ ಮನೆಯಿಂದ ಅರ್ಧಕ್ಕೆ ಹೊರ ನಡೆದ ಮಲ್ಲಮ್ಮ?

‘ನೀನು ಹೆಣ್ಣಾಗಿದ್ದರೆ ರಕ್ಷಿತಾಗೆ ಆ ರೀತಿ ಮಾಡ್ತಾ ಇರಲಿಲ್ಲ’ ಎಂದು ಗಿಲ್ಲಿ ನಟ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಆ ಬಳಿಕ ಗಿಲ್ಲಿ ಟೀಂ ಗೆದ್ದಿತ್ತು. ಎಲ್ಲರ ಸಮ್ಮತದ ಮೂಲಕ ಒಬ್ಬರನ್ನು ಕ್ಯಾಪ್ಟನ್ ಕಂಟೆಸ್ಟಂಟ್ ಆಗಿ ಆಯ್ಕೆ ಮಾಡಬೇಕಿತ್ತು. ಎಲ್ಲರೂ ರಾಶಿಕಾ ಹೆಸರನ್ನು ಸೂಚಿಸಿದರು. ಆದರೆ, ಗಿಲ್ಲಿ ನಟಗೆ ರಿವೇಂಜ್ ತೀರಿಸಿಕೊಳ್ಳಬೇಕಿತ್ತು. ಹೀಗಾಗಿ, ಆ ವೋಟ್​ನ ರಾಶಿಕಾಗೆ ಹಾಕೋದಿಲ್ಲ ಎಂದರು. ಹೀಗಾಗಿ, ಬಿಗ್ ಬಾಸ್ ಈ ಅವಕಾಶವನ್ನು ಹಿಂದಕ್ಕೆ ಪಡೆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Thu, 30 October 25

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ