AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಮಾತಿಗೂ ಬೆಲೆ ಕೊಡದ ಗಿಲ್ಲಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್

Gilli Nata: ಗಿಲ್ಲಿ ನಟ ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಕಿಚ್ಚ ಸುದೀಪ್ ಅವರ ಮಾತನ್ನೂ ಗಂಭೀರವಾಗಿ ಸ್ವೀಕರಿಸದ ಕಾರಣ, ಮನೆಯ ಸದಸ್ಯರು ಮತ್ತು ಬಿಗ್ ಬಾಸ್ ಅಸಮಾಧಾನಗೊಂಡಿದ್ದಾರೆ. ಅವರ ನಿರ್ಲಕ್ಷ್ಯದ ಬಗ್ಗೆ ಸಹ ಸ್ಪರ್ಧಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಕಿಚ್ಚ ಸುದೀಪ್ ಮಾತಿಗೂ ಬೆಲೆ ಕೊಡದ ಗಿಲ್ಲಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್
ಗಿಲ್ಲಿ-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 13, 2026 | 7:01 AM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಗಿಲ್ಲಿ ನಟ ಅವರ ಆಟ ಬೇರೆಯದೇ ರೀತಿ ಇದೆ. ಅವರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಆದರೆ, ಕೆಲ ವಿಷಯಗಳನ್ನು ಅವರು ಗಂಭೀರವಾಗಿ ಸ್ವೀಕರಿಸುವುದಿಲ್ಲ ಎಂಬ ಆರೋಪ ಇದೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಕಿಚ್ಚ ಸುದೀಪ್ ಹೇಳಿದ ಮಾತನ್ನು ಅವರು ನಡೆಸಿಕೊಡಲಿಲ್ಲ. ಇದಕ್ಕೆ ಮನೆಯ ಇತರ ಸ್ಪರ್ಧಿಗಳು ಬೇಸರ ಹೊರಹಾಕಿದ್ದಾರೆ.

ಗಿಲ್ಲಿ ನಟ ಮೇಲೆ ಒಂದು ದೊಡ್ಡ ಕಂಪ್ಲೇಂಟ್ ಇದೆ. ಅವರು ಯಾವಾಗಲೂ ತಲೆ ಕೂದಲನ್ನು ಬಾಚಿಕೊಳ್ಳೋದಿಲ್ಲ. ಅವರ ಕೂದಲು ಸದಾ ಕೆದರಿಕೊಂಡೇ ಇರುತ್ತದೆ. ಈ ಬಗ್ಗೆ ಇತರರಿಗೆ ಅಸಮಾಧಾನ ಇದೆ. ಕೂದಲನ್ನು ಬಾಚಿಕೊಂಡರೆ ಅವರು ಉತ್ತಮವಾಗಿ ಕಾಣುತ್ತಾರೆ ಎಂಬುದು ಮನೆ ಮಂದಿಯ ಅಭಿಪ್ರಾಯ. ಆದರೆ, ಈ ಅಭಿಪ್ರಾಯಗಳಿಗೆಲ್ಲ ಗಿಲ್ಲಿ ಬೆಲೆ ಕೊಡುವವರಲ್ಲ.

ಕಳೆದ ವೀಕೆಂಡ್​​ನಲ್ಲಿ ಒಂದು ಪ್ರೀತಿಯ ವಸ್ತುವನ್ನು ಇತರ ಸ್ಪರ್ಧಿಗಳಿಗೆ ನೀಡಬೇಕಾದ ಚಟುವಟಿಕೆ ಬಂತು. ಈ ವೇಳೆ ಗಿಲ್ಲಿ ನಟ ಅವರಿಗೆ ಕಾವ್ಯಾ ತಮ್ಮಿಷ್ಟದ ಬಾಚಣಿಗೆ ನೀಡಿದರು. ಅವರು ಅದರಿಂದ ಕೂದಲು ಬಾಚಿಕೊಂಡರು. ಈ ವೇಳೆ ಸುದೀಪ್ ಅವರು ಒಂದು ನಿರ್ದೇಶನ ಕೊಟ್ಟರು. ‘ದಿನವೂ ಆ ಬಾಚಣಿಗೆಯಿಂದ ಕೂದಲು ಬಾಚಿಕೊಳ್ಳಬೇಕು’ ಎಂದು ಸುದೀಪ್ ಸೂಚನೆ ನೀಡಿದರು.

ಆದರೆ, ಈ ಸೂಚನೆಯನ್ನು ಗಿಲ್ಲಿ ಅಷ್ಟು ಗಂಭೀರವಾಗಿ ಸ್ವೀಕರಿಸಿರಲಿಲ್ಲ. ಸುದೀಪ್ ಬಂದು ಹೋದ ಮರುದಿನದ ಎಪಿಸೋಡ್​​ನಲ್ಲಿ ಅವರು ಎಂದಿನಂತೆ ಕೂದಲು ಬಾಚಿಕೊಳ್ಳದೆ ಕುಳಿತಿದ್ದರು. ಆಗ ಬಿಗ್ ಬಾಸ್ ಕಡೆಯಿಂದ ಆದೇಶ ಒಂದು ಬಂತು. ‘ಸುದೀಪ್ ಅವರು ಹೇಳಿದಂತೆ ಗಿಲ್ಲಿ ತಲೆಕೂದಲು ಬಾಚಿಕೊಳ್ಳಬೇಕು ಹಾಗೂ ಒಂದು ಹೊತ್ತು ಅಡುಗೆ ಮಾಡಬೇಕು’ ಎಂದು ಆದೇಶದಲ್ಲಿ ಇತ್ತು. ಬಿಗ್ ಬಾಸ್ ಕೂಡ ಗಿಲ್ಲಿ ಮೇಲೆ ಅಸಮಾಧಾನಗೊಂಡಂತೆ ಕಂಡಿತು.

ಇದನ್ನೂ ಓದಿ: ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ: ವಿಡಿಯೋ

ಆಗ ರಘು ಹಾಗೂ ಕಾವ್ಯಾ ಗಿಲ್ಲಿ ವಿರುದ್ಧ ನೇರ ಅಸಮಾಧಾನ ಹೊರಹಾಕಿದರು. ‘ಸುದೀಪ್ ಸರ್ ಮಾತಿಗೂ ಬೆಲೆ ಕೊಡ್ತಾ ಇಲ್ವಲ್ಲ ಗಿಲ್ಲಿ’ ಎಂದು ಹೇಳಿದರು. ಆಗ ಗಿಲ್ಲಿ ತಲೆಕೂದಲು ಬಾಚಿಕೊಂಡರು. ಇನ್ನು, ಅವರು ಮಾಡಿದ ಅಡುಗೆ ತಿನ್ನೋಕೆ ಯಾರ ಬಳಿಯೂ ಸಾಧ್ಯವಾಗಿಲ್ಲ. ಉಪ್ಪು ಹಾಗೂ ಖಾರ ಇಲ್ಲದ ಕಾರಣ ಅದನ್ನು ತಿನ್ನೋದು ಅವರಿಗೆ ಕಷ್ಟ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ