AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ನಟನ ಮಾಸ್ಟರ್​ ಪ್ಲ್ಯಾನ್​​ಗೆ ಶಾಕ್ ಆದ ಇಡೀ ಮನೆ; ರಾಶಿಕಾ ನಾಮಿನೇಟ್

ಬಿಗ್ ಬಾಸ್ ಕನ್ನಡ 12ರಲ್ಲಿ ಗಿಲ್ಲಿ ನಟ ಚಾಣಾಕ್ಷ ಆಟ ಪ್ರದರ್ಶಿಸುತ್ತಿದ್ದಾರೆ. ಈ ವಾರದ ನಾಮಿನೇಷನ್ ಟಾಸ್ಕ್‌ನಲ್ಲಿ ಅವರ ಮಾಸ್ಟರ್ ಪ್ಲಾನ್‌ ಎಲ್ಲರಿಗೂ ಅಚ್ಚರಿ ತಂದಿತು. ಬಿಗ್ ಬಾಸ್ ನೀಡಿದ ಹೊಸ ಅವಕಾಶವನ್ನು ರಾಶಿಕಾ ತಪ್ಪಾಗಿ ಊಹಿಸಿ ನಾಮಿನೇಟ್ ಆದರು. ಗಿಲ್ಲಿ ಅವರನ್ನು ನಾಮಿನೇಟ್ ಮಾಡದಿದ್ದರೂ, ಅವರ ಹೆಸರನ್ನು ರಾಶಿಕಾ ಹೇಳಿದ್ದರಿಂದ ಸಂಕಷ್ಟಕ್ಕೆ ಸಿಲುಕಿದರು.

ಗಿಲ್ಲಿ ನಟನ ಮಾಸ್ಟರ್​ ಪ್ಲ್ಯಾನ್​​ಗೆ ಶಾಕ್ ಆದ ಇಡೀ ಮನೆ; ರಾಶಿಕಾ ನಾಮಿನೇಟ್
ಗಿಲ್ಲಿ-ರಾಶಿಕಾ
ರಾಜೇಶ್ ದುಗ್ಗುಮನೆ
|

Updated on: Dec 23, 2025 | 9:20 AM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ (Gilli Nata) ಅವರು ಒಳ್ಳೆಯ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಅವರು ಎಲ್ಲರನ್ನು ನಗಿಸುವುದರ ಜೊತೆಗೆ ಒಂದಷ್ಟು ಮಾಸ್ಟರ್ ಪ್ಲ್ಯಾನ್​​ಗಳನ್ನು ಮಾಡುತ್ತಿದ್ದಾರೆ. ಈ ಪ್ಲ್ಯಾನ್​​ಗಳು ಅನೇಕರಿಗೆ ಅಚ್ಚರಿ ತರಿಸುತ್ತಿವೆ. ಈ ವಾರದ ನಾಮಿನೇಷನ್ ಟಾಸ್​ಕ್​ನಲ್ಲಿಯೂ ಅದೇ ರೀತಿ ಆಗಿದೆ. ಅವರ ಮಾಸ್ಟರ್ ಪ್ಲ್ಯಾನ್​​ಗೆ ರಾಶಿಕಾ ಅವರು ನಾಮಿನೇಟ್ ಆದರು.

ಬಿಗ್ ಬಾಸ್ ಮನೆಯಲ್ಲಿ ಪ್ರತಿ ವಾರ ಇಬ್ಬರನ್ನು ಮಾತ್ರ ನಾಮಿನೇಟ್ ಮಾಡಲು ಅವಕಾಶ ಇರುತ್ತದೆ. ಆದರೆ, ಈ ಬಾರಿ ಬಿಗ್ ಬಾಸ್ ಹೊಸ ರೀತಿಯ ಅವಕಾಶ ನೀಡಿದರು. ಎಲ್ಲಾ ಸ್ಪರ್ಧಿಗಳು ಎಷ್ಟು ಜನರನ್ನು ಬೇಕಿದ್ದರೂ ನಾಮಿನೇಟ್ ಮಾಡಬಹುದಿತ್ತು. ಇಲ್ಲಿ ಬಿಗ್ ಬಾಸ್ ಒಂದು ಅವಕಾಶ ಕೂಡ ನೀಡಿದರು.

ಪ್ರತಿ ಸ್ಪರ್ಧಿ ಕನ್​​ಫೆಷನ್ ರೂಂಗೆ ಹೋಗಬೇಕು. ಅಲ್ಲಿ ಹೋದ ಬಳಿಕ ಉಳಿದ ಸ್ಪರ್ಧಿಗಳು ನಾಮಿನೇಟ್ ಮಾಡಬೇಕು. ಎಷ್ಟು ಮಂದಿ ನಾಮಿನೇಟ್ ಮಾಡಿದ್ದಾರೆ ಎಂದು ಬಿಗ್ ಬಾಸ್ ಹೇಳುತ್ತಾರೆ. ಅದು ಯಾರು ಎಂಬದನ್ನು ಸರಿಯಾಗಿ ಊಹಿಸಬೇಕು. ರಾಶಿಕಾ ಊಹೆಯನ್ನು ಗಿಲ್ಲಿ ನಟ ಅವರು ತಪ್ಪು ಮಾಡಿದ್ದಾರೆ.

ಹಲವು ಬಾರಿ ರಾಶಿಕಾ ಅವರನ್ನು ಗಿಲ್ಲಿ ನಾಮಿನೇಟ್ ಮಾಡಿದ್ದು ಇದೆ. ಆದರೆ, ಈ ವಾರ ಗಿಲ್ಲಿ ಅವರು ರಾಶಿಕಾನ ನಾಮಿನೇಟ್ ಮಾಡಿಯೇ ಇಲ್ಲ. ರಾಶಿಕಾ ಲೆಕ್ಕಾಚಾರ ತಪ್ಪಾಗಿದ್ದು ಇಲ್ಲೇ. ಅವರು ಗಿಲ್ಲಿ ಹೆಸರನ್ನು ಕೂಡ ತೆಗೆದುಕೊಂಡರು. ಆದರೆ, ಗಿಲ್ಲಿ ಹೆಸರನ್ನು ತಪ್ಪಾಗಿ ಊಹಿಸಿದ್ದರು. ಹೀಗಾಗಿ ರಾಶಿಕಾ ನಾಮಿನೇಟ್ ಆಗಿದ್ದಾರೆ. ಆ ಬಳಿಕ ಗಿಲ್ಲಿ ಅವರು ನಿಮ್ಮ ಹೆಸರು ತೆಗೆದುಕೊಂಡಿಲ್ಲ ಎಂಬುದನ್ನು ಅನೇಕರು ಹೇಳಿದರು. ಇದನ್ನು ಕೇಳಿ ರಾಶಿಕಾ ಶಾಕ್ ಆದರು.

ಇದನ್ನೂ ಓದಿ: ಗಿಲ್ಲಿ ನಟಿಸಿದ್ರೂ ‘ಡೆವಿಲ್’ ಟ್ರೇಲರ್​​ನ ಬಿಗ್ ಬಾಸ್​​ನಲ್ಲಿ ಏಕೆ ಹಾಕಿಲ್ಲ? ಬೇರೆಯದೇ ಕಾರಣ ಕೊಟ್ಟ ರಜತ್

ಈ ವಾರ ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವೀಕ್ ಇರಲಿದೆ. ಸ್ಪರ್ಧಿಗಳ ಮನೆ ಸದಸ್ಯರು ಬಿಗ್ ಬಾಸ್ ಮನೆಗೆ ಬರುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!