AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಬುದ್ಧಿ ಮಾತಿಗೂ ಬದಲಾಗಲಿಲ್ಲ ಜಾನ್ವಿ; ಅದೇ ಹಾಡು, ಅದೇ ರಾಗ

ಬಿಗ್ ಬಾಸ್ ಕನ್ನಡ 12ರಲ್ಲಿ ಜಾನ್ವಿ ವರ್ತನೆ ಚರ್ಚೆಯ ವಿಷಯವಾಗಿದೆ. ಸುದೀಪ್ ಅವರು ಬುದ್ಧಿವಾದ ಹೇಳಿದರೂ ಜಾನ್ವಿ ಬದಲಾಗುತ್ತಿಲ್ಲ. ಅಶ್ವಿನಿ ವಿಷಯದಲ್ಲಿ ತಮ್ಮ ಸಮರ್ಥನೆ ಮುಂದುವರಿಸಿ, ರಘು-ಅಶ್ವಿನಿ ಜಗಳದಲ್ಲೂ ಮೂಗು ತೂರಿಸಿ ಟ್ರೋಲ್ ಆಗುತ್ತಿದ್ದಾರೆ. ಇದರಿಂದ ಅವರಿಗೆ ಸಾಕಷ್ಟು ಹೇಟ್ ಕಮೆಂಟ್‌ಗಳು ಬರುತ್ತಿದ್ದು, ಕುಟುಂಬದವರ ಮೇಲೂ ಪರಿಣಾಮ ಬೀರುತ್ತಿದೆ.

ಸುದೀಪ್ ಬುದ್ಧಿ ಮಾತಿಗೂ ಬದಲಾಗಲಿಲ್ಲ ಜಾನ್ವಿ; ಅದೇ ಹಾಡು, ಅದೇ ರಾಗ
ಜಾನ್ವಿ
ರಾಜೇಶ್ ದುಗ್ಗುಮನೆ
|

Updated on: Oct 21, 2025 | 7:36 AM

Share

ಕಿಚ್ಚ ಸುದೀಪ್ ಅವರು ವೀಕೆಂಡ್​ನಲ್ಲಿ ಯಾವುವಾದರೂ ವಿಷಯ ಹೇಳುತ್ತಾರೆ ಎಂದರೆ ಅದಕ್ಕೊಂದು ಆಳವಾದ ಅರ್ಥ ಇರುತ್ತದೆ. ಎಲ್ಲಾ ಸ್ಪರ್ಧಿಗಳಿಗೂ ಇದು ಅರ್ಥ ಆಗಿಯೇಬಿಡುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಜಾನ್ವಿ. ಅವರಿಗೆ ಸುದೀಪ್ ಅವರು ಸಾರಿ ಸಾರಿ ಬುದ್ಧಿ ಹೇಳಿದ್ದರು. ಆದರೂ ಅವರು ಬದಲಾಗುವ ಸೂಚನೆಯೇ ಸಿಗುತ್ತಿಲ್ಲ. ಈ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂರನೇ ವೀಕೆಂಡ್​ನಲ್ಲಿ ಜಾನ್ವಿಗೆ ಕಿವಿಮಾತೊಂದನ್ನು ಹೇಳಿದ್ದರು. ‘ಅಶ್ವಿನಿ ಅವರನ್ನು ಜಾಸ್ತಿ ಪುಶ್ ಮಾಡುತ್ತಾ ಹೋದರೆ, ಪುಶ್ ಆಗಿ ಈಕಡೆ ಬರ್ತೀರಾ’ ಎಂದಿದ್ದರು. ಆದರೆ, ಜಾನ್ವಿ ಇದನ್ನು ಅರ್ಥೈಸಿಕೊಳ್ಳುವ ಗೋಜಿಗೆ ಹೋಗಿಲ್ಲ. ಮತ್ತದೇ ಹಳೆ ರಾಗ ಆರಂಭಿಸಿದ್ದಾರೆ.

ರಕ್ಷಿತಾ ಶೆಟ್ಟಿ ಅವರನ್ನು ಜಾನ್ವಿ ಅವರು ರೇಗಿಸಿದ್ದರು. ಇದು ಬೇರೆಯದೇ ಹಂತಕ್ಕೆ ಹೋಗಿತ್ತು. ಈ ವಿಚಾರದಲ್ಲಿ ಅಶ್ವಿನಿ ಕನಿಷ್ಠ ಕ್ಷಮೆಯನ್ನಾದರೂ ಕೇಳಿದ್ದಾರೆ. ಆದರೆ, ಜಾನ್ವಿ ಮಾತ್ರ ಇನ್ನೂ ಈ ವಿಚಾರದಲ್ಲಿ ಸಮರ್ಥನೆ ಕೊಡುತ್ತಲೇ ಬರುತ್ತಿದ್ದಾರೆ. ಈಗ ಅವರು ಅಶ್ವಿನಿ ಅವರನ್ನು ಬೆಂಬಲಿಸೋದನ್ನು ಮುಂದುವರಿಸಿದ್ದಾರೆ.

ರಘು ಹಾಗೂ ಅಶ್ವಿನಿ ಮಧ್ಯೆ ಫೈಟ್ ನಡೆಯುತ್ತಿತ್ತು. ಏಕವಚನ ಬಳಸಿದ ಆರೋಪಕ್ಕೆ ಅಶ್ವಿನಿ ಅವರು ಸಿಟ್ಟಾದರು. ಅಶ್ವಿನಿ ಹಾಗೂ ರಘು ಫೈಟ್ ಮಾಡುವಾಗ ತಮಗೆ ಸಂಬಂಧವೇ ಇಲ್ಲದಿದ್ದರೂ ಅಶ್ವಿನಿ ಪರವಾಗಿ ಮಾತನಾಡಲು ಬಂದು ಶೇಪ್​ಔಟ್ ಮಾಡಿಸಿಕೊಂಡಿದ್ದಾರೆ. ಆ ಬಳಿಕ ರಘು ಬಳಿ ಬಂದು, ಬೆಣ್ಣೆ ಹಚ್ಚುವ ಕೆಲಸ ಮಾಡಿದ್ದಾರೆ. ಇಷ್ಟೇ ಅಲ್ಲ, ‘ಸಮಯ ಸಿಕ್ಕಾಗ ಅಶ್ವಿನಿ ಬಳಿ ಮಾತನಾಡಿ ಈ ವಿಚಾರವನ್ನು ಬಗೆಹರಿಸಿಕೊಳ್ಳಿ’ ಎಂದು ಕೂಡ ಕೋರಿದ್ದಾರೆ.

ಇದನ್ನೂ ಓದಿ: ಸುದೀಪ್ ಬಿಗ್ ಬಾಸ್ ಸಂಭಾವನೆ ಡೇಟಾ ಡಿಲೀಟ್; ಈ ಕಿತಾಪತಿ ಮಾಡಿದ್ದು ಯಾರು?

ಸೋಶಿಯಲ್ ಮೀಡಿಯಾದಲ್ಲಿ ಜಾನ್ವಿ ಅವರಿಗೆ ಸಾಕಷ್ಟು ಹೇಟ್ ಕಮೆಂಟ್​ಗಳು ಬರುತ್ತಿವೆ. ಇದು ಅವರ ಕುಟುಂಬದವರ ಮೇಲೆ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ. ತಪ್ಪನ್ನು ತಿದ್ದಿಕೊಳ್ಳದಿದ್ದರೆ ಅವರಿಗೆ ಸಾಕಷ್ಟು ಸಮಸ್ಯೆ ಆಗೋದು ಪಕ್ಕಾ ಎನ್ನಲಾಗುತ್ತಿದೆ. ಮುಂದೇನಾಗುತ್ತದೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ