AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ಪ್ರೀತಿಯಿಂದ ಕೈ ಕೊಟ್ಟರು ಕ್ಯಾರೇ ಎನ್ನದೇ ಹೋದ ಕಾವ್ಯಾ; ಫ್ಯಾನ್ಸ್​​ಗೆ ಬೇಸರ

ಬಿಗ್ ಬಾಸ್ ಕನ್ನಡ 12ರಲ್ಲಿ ಕಾವ್ಯಾ ಹಾಗೂ ಗಿಲ್ಲಿ ಗೆಳೆತನ ಮತ್ತೆ ಸುದ್ದಿಯಲ್ಲಿದೆ. ಚಟುವಟಿಕೆಯ ವೇಳೆ ಗಿಲ್ಲಿ ತಮಗೆ ಆದ ನೋವನ್ನು ಹೇಳಿಕೊಂಡಾಗ, ಕಾವ್ಯಾ ಗಿಲ್ಲಿಯ ಕೈ ಕುಲುಕಲು ನಿರಾಕರಿಸಿದರು. ಈ ವರ್ತನೆ ಗಿಲ್ಲಿ ಅಭಿಮಾನಿಗಳಿಗೆ ತೀವ್ರ ಬೇಸರ ತರಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಗಿಲ್ಲಿ ಪ್ರೀತಿಯಿಂದ ಕೈ ಕೊಟ್ಟರು ಕ್ಯಾರೇ ಎನ್ನದೇ ಹೋದ ಕಾವ್ಯಾ; ಫ್ಯಾನ್ಸ್​​ಗೆ ಬೇಸರ
ಕಾವ್ಯಾ-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on:Dec 20, 2025 | 1:00 PM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಾವ್ಯಾ (Kavya) ಹಾಗೂ ಗಿಲ್ಲಿ ಗೆಳೆತನದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇಬ್ಬರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ನಂತರ ಇವರು ಮತ್ತೆ ಒಂದಾಗುತ್ತಾರೆ. ಇದು ಸಾಕಷ್ಟು ಬಾರಿ ರಿಪೀಟ್ ಆಗಿದೆ. ಈಗ ಕಾವ್ಯಾ ಅವರು ನಡೆದುಕೊಂಡ ರೀತಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಗಿಲ್ಲಿ ಅಭಿಮಾನಿಗಳಿಗೆ ಈ ನಡೆ ಸಾಕಷ್ಟು ಬೇಸರ ಮೂಡಿಸಿದೆ. ಅಷ್ಟಕ್ಕೂ ಅಲ್ಲಿ ನಡೆದಿದ್ದು ಏನು? ಆ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಚಟುವಟಿಕೆ ಒಂದನ್ನು ಆಯೋಜನೆ ಮಾಡಿದ್ದರು. ಇದರ ಅನುಸಾರ ಮನೆಯ ಪ್ರತಿ ಸ್ಪರ್ಧಿ ಮತ್ತೋರ್ವ ಸ್ಪರ್ಧಿಯನ್ನು ಕರೆದು ಅವರಿಂದ ತಮಗೆ ಆದ ನೋವನ್ನು ಹೇಳಬೇಕು. ಅವರು ಯಾವಾಗ ಸಿಟ್ಟಲ್ಲಿ ಮಾತನಾಡಿದ್ದು ಎಂಬುದನ್ನು ಹೇಳಿ, ಚಾಕೋಲೇಟ್ ನೀಡಿ ಸಿಹಿಯಾಗಿ ಮಾತನಾಡುವಂತೆ ಕೋರಬೇಕು. ಈ ವೇಳೆ ಗಿಲ್ಲಿ ಅವರು ಕಾವ್ಯಾ ಬಗ್ಗೆ ಹೇಳಿದರು.

ಕಾವ್ಯಾ ಅವರಿಂದ ಆದ ಒಂದು ಬೇಸರದ ಘಟನೆಯನ್ನು ನೆನಪಿಸಿಕೊಂಡರು ಗಿಲ್ಲಿ. ಆ ಸಂದರ್ಭದಲ್ಲಿ ಕಾವ್ಯಾ ಸಿಹಿಯಾಗಿ ಮಾತನಾಡಬಹುದಿತ್ತು ಎಂದು ಅಭಿಪ್ರಾಯಪಟ್ಟರು. ಇದನ್ನು ಕಾವ್ಯಾ ಕೇಳಿಸಿಕೊಂಡರು. ಹೋಗುವಾಗ ಶೇಕ್​ ಹ್ಯಾಂಡ್ ಮಾಡಲು ಗಿಲ್ಲಿ ಮುಂದಾದರು. ಆದರೆ, ಇದಕ್ಕೆ ಕಾವ್ಯಾ ಒಪ್ಪಲೇ ಇಲ್ಲ. ಅವರು ಕೈ ಕುಲುಕದೇ ನೇರವಾಗಿ ಅಲ್ಲಿಂದ ಕೆಳಗಿಳಿದು ಬಂದರು. ಈ ವಿಡಿಯೋ ಚರ್ಚೆಗೆ ಕಾರಣ ಆಗಿದೆ. ‘ಗಿಲ್ಲಿ ಗೆಳೆತನವನ್ನು ಕಡೆಗಣಿಸಬೇಡಿ. ಮುಂದೊಂದು ದಿನ ಅವರ ಕಾಲ್​ಶೀಟ್ ಪಡೆಯಲು ಸಾಲಲ್ಲಿ ನಿಲ್ಲಬೇಕಾಗುತ್ತದೆ’ ಎಂದೆಲ್ಲ ಫ್ಯಾನ್ಸ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ

ಇನ್ನೊಂದು ತಿಂಗಳಲ್ಲಿ ‘ಬಿಗ್ ಬಾಸ್’ ಫಿನಾಲೆ ನಡೆಯಲಿದೆ. ಈ ಬಾರಿ ಶೋನ ಗೆಲ್ಲೋದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೇ 13 ಮಂದಿ ಮನೆಯಲ್ಲಿ ಇದ್ದಾರೆ. ಈ ವಾರ ಯಾವುದೇ ಎಲಿಮಿನೇಷನ್ ಇಲ್ಲ. ಹೀಗಾಗಿ, ರಜತ್ ಹಾಗೂ ಚೈತ್ರಾ ಅವರು ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಾ ಇದೆ. ಡಿಸೆಂಬರ್ 21ರ ಎಪಿಸೋಡ್​ನಲ್ಲಿ ಈ ಬಗ್ಗೆ ಗೊತ್ತಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:13 pm, Sat, 20 December 25

Follow Us
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು