AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ಪ್ರೀತಿಯಿಂದ ಕೈ ಕೊಟ್ಟರು ಕ್ಯಾರೇ ಎನ್ನದೇ ಹೋದ ಕಾವ್ಯಾ; ಫ್ಯಾನ್ಸ್​​ಗೆ ಬೇಸರ

ಬಿಗ್ ಬಾಸ್ ಕನ್ನಡ 12ರಲ್ಲಿ ಕಾವ್ಯಾ ಹಾಗೂ ಗಿಲ್ಲಿ ಗೆಳೆತನ ಮತ್ತೆ ಸುದ್ದಿಯಲ್ಲಿದೆ. ಚಟುವಟಿಕೆಯ ವೇಳೆ ಗಿಲ್ಲಿ ತಮಗೆ ಆದ ನೋವನ್ನು ಹೇಳಿಕೊಂಡಾಗ, ಕಾವ್ಯಾ ಗಿಲ್ಲಿಯ ಕೈ ಕುಲುಕಲು ನಿರಾಕರಿಸಿದರು. ಈ ವರ್ತನೆ ಗಿಲ್ಲಿ ಅಭಿಮಾನಿಗಳಿಗೆ ತೀವ್ರ ಬೇಸರ ತರಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಗಿಲ್ಲಿ ಪ್ರೀತಿಯಿಂದ ಕೈ ಕೊಟ್ಟರು ಕ್ಯಾರೇ ಎನ್ನದೇ ಹೋದ ಕಾವ್ಯಾ; ಫ್ಯಾನ್ಸ್​​ಗೆ ಬೇಸರ
ಕಾವ್ಯಾ-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on:Dec 20, 2025 | 1:00 PM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಾವ್ಯಾ (Kavya) ಹಾಗೂ ಗಿಲ್ಲಿ ಗೆಳೆತನದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇಬ್ಬರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ನಂತರ ಇವರು ಮತ್ತೆ ಒಂದಾಗುತ್ತಾರೆ. ಇದು ಸಾಕಷ್ಟು ಬಾರಿ ರಿಪೀಟ್ ಆಗಿದೆ. ಈಗ ಕಾವ್ಯಾ ಅವರು ನಡೆದುಕೊಂಡ ರೀತಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಗಿಲ್ಲಿ ಅಭಿಮಾನಿಗಳಿಗೆ ಈ ನಡೆ ಸಾಕಷ್ಟು ಬೇಸರ ಮೂಡಿಸಿದೆ. ಅಷ್ಟಕ್ಕೂ ಅಲ್ಲಿ ನಡೆದಿದ್ದು ಏನು? ಆ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ಚಟುವಟಿಕೆ ಒಂದನ್ನು ಆಯೋಜನೆ ಮಾಡಿದ್ದರು. ಇದರ ಅನುಸಾರ ಮನೆಯ ಪ್ರತಿ ಸ್ಪರ್ಧಿ ಮತ್ತೋರ್ವ ಸ್ಪರ್ಧಿಯನ್ನು ಕರೆದು ಅವರಿಂದ ತಮಗೆ ಆದ ನೋವನ್ನು ಹೇಳಬೇಕು. ಅವರು ಯಾವಾಗ ಸಿಟ್ಟಲ್ಲಿ ಮಾತನಾಡಿದ್ದು ಎಂಬುದನ್ನು ಹೇಳಿ, ಚಾಕೋಲೇಟ್ ನೀಡಿ ಸಿಹಿಯಾಗಿ ಮಾತನಾಡುವಂತೆ ಕೋರಬೇಕು. ಈ ವೇಳೆ ಗಿಲ್ಲಿ ಅವರು ಕಾವ್ಯಾ ಬಗ್ಗೆ ಹೇಳಿದರು.

ಕಾವ್ಯಾ ಅವರಿಂದ ಆದ ಒಂದು ಬೇಸರದ ಘಟನೆಯನ್ನು ನೆನಪಿಸಿಕೊಂಡರು ಗಿಲ್ಲಿ. ಆ ಸಂದರ್ಭದಲ್ಲಿ ಕಾವ್ಯಾ ಸಿಹಿಯಾಗಿ ಮಾತನಾಡಬಹುದಿತ್ತು ಎಂದು ಅಭಿಪ್ರಾಯಪಟ್ಟರು. ಇದನ್ನು ಕಾವ್ಯಾ ಕೇಳಿಸಿಕೊಂಡರು. ಹೋಗುವಾಗ ಶೇಕ್​ ಹ್ಯಾಂಡ್ ಮಾಡಲು ಗಿಲ್ಲಿ ಮುಂದಾದರು. ಆದರೆ, ಇದಕ್ಕೆ ಕಾವ್ಯಾ ಒಪ್ಪಲೇ ಇಲ್ಲ. ಅವರು ಕೈ ಕುಲುಕದೇ ನೇರವಾಗಿ ಅಲ್ಲಿಂದ ಕೆಳಗಿಳಿದು ಬಂದರು. ಈ ವಿಡಿಯೋ ಚರ್ಚೆಗೆ ಕಾರಣ ಆಗಿದೆ. ‘ಗಿಲ್ಲಿ ಗೆಳೆತನವನ್ನು ಕಡೆಗಣಿಸಬೇಡಿ. ಮುಂದೊಂದು ದಿನ ಅವರ ಕಾಲ್​ಶೀಟ್ ಪಡೆಯಲು ಸಾಲಲ್ಲಿ ನಿಲ್ಲಬೇಕಾಗುತ್ತದೆ’ ಎಂದೆಲ್ಲ ಫ್ಯಾನ್ಸ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ

ಇನ್ನೊಂದು ತಿಂಗಳಲ್ಲಿ ‘ಬಿಗ್ ಬಾಸ್’ ಫಿನಾಲೆ ನಡೆಯಲಿದೆ. ಈ ಬಾರಿ ಶೋನ ಗೆಲ್ಲೋದು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೇ 13 ಮಂದಿ ಮನೆಯಲ್ಲಿ ಇದ್ದಾರೆ. ಈ ವಾರ ಯಾವುದೇ ಎಲಿಮಿನೇಷನ್ ಇಲ್ಲ. ಹೀಗಾಗಿ, ರಜತ್ ಹಾಗೂ ಚೈತ್ರಾ ಅವರು ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಬರುತ್ತಾರೆ ಎಂದು ಹೇಳಲಾಗುತ್ತಾ ಇದೆ. ಡಿಸೆಂಬರ್ 21ರ ಎಪಿಸೋಡ್​ನಲ್ಲಿ ಈ ಬಗ್ಗೆ ಗೊತ್ತಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:13 pm, Sat, 20 December 25

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ