AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.18, 19ರಂದು ‘ಬಿಗ್ ಬಾಸ್ ಕನ್ನಡ 12’ ಮೊದಲ ಫಿನಾಲೆ: ಆಟದಲ್ಲಿ ಭಾರಿ ಟ್ವಿಸ್ಟ್

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋನಲ್ಲಿ ಮೊದಲ ಫಿನಾಲೆಗೆ ದಿನಗಣನೆ ಶುರುವಾಗಿದೆ. ಮಿಡ್ ಸೀಸನ್ ಫಿನಾಲೆಯ ದಿನಾಂಕ ಹಾಗೂ ಪ್ರಸಾರದ ಸಮಯದ ಬಗ್ಗೆ ಮಾಹಿತಿ ನೀಡಲಾಗಿದೆ. ಹಲವರು ಎಲಿಮಿನೇಟ್ ಆಗಲಿದ್ದಾರೆ. 3ನೇ ವಾರದ ಫಿನಾಲೆಯಲ್ಲಿ ಗೆದ್ದವರಿಗೆ ಬಹುಮಾನ ಸಿಗಲಿದೆ.

ಅ.18, 19ರಂದು ‘ಬಿಗ್ ಬಾಸ್ ಕನ್ನಡ 12’ ಮೊದಲ ಫಿನಾಲೆ: ಆಟದಲ್ಲಿ ಭಾರಿ ಟ್ವಿಸ್ಟ್
Bigg Boss Kannada 12
ಮದನ್​ ಕುಮಾರ್​
|

Updated on: Oct 13, 2025 | 10:09 PM

Share

ಈ ಬಾರಿ ಬಿಗ್ ಬಾಸ್ (Bigg Boss Kannada) ಆಟದಲ್ಲಿ ಹಲವು ಟ್ವಿಸ್ಟ್ ನೀಡಲಾಗುತ್ತಿದೆ. ಇಷ್ಟು ವರ್ಷಗಳ ಕಾಲ ಬಿಗ್ ಬಾಸ್ ಶೋನಲ್ಲಿ ಒಂದೇ ಫಿನಾಲೆ ಇರುತ್ತಿತ್ತು. ಆದರೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಎರಡು ಫಿನಾಲೆಯನ್ನು ಪರಿಚಯಿಸಲಾಗಿದೆ. ಮೂರನೇ ವಾರದಲ್ಲಿ ಮೊದಲ ಫಿನಾಲೆ ಬರಲಿದೆ ಎಂದು ಕಿಚ್ಚ ಸುದೀಪ್ ಅವರು ತಿಳಿಸಿದ್ದರು. ಅದರ ಬಗ್ಗೆ ‘ಕಲರ್ಸ್ ಕನ್ನಡ’ ವಾಹಿನಿ ವಿವರ ನೀಡಿದೆ. ಇದನ್ನು ಮಿಡ್ ಸೀಸನ್ ಫಿನಾಲೆ (Mid Season Finale) ಎಂದು ಕರೆಯಲಾಗುತ್ತಿದೆ. ಅಕ್ಟೋಬರ್ 18 ಮತ್ತು 19ರಂದು ಮೊದಲ ಫಿನಾಲೆ ನಡೆಯಲಿದೆ. ಪ್ರಸಾರದ ಸಮಯದ ಬಗ್ಗೆ ಇಲ್ಲಿದೆ ವಿವರ..

ಪ್ರತಿ ವರ್ಷದ ಫಿನಾಲೆ ರೀತಿಯೇ ಮಿಡ್ ಸೀಸನ್ ಫಿನಾಲೆ ಕೂಡ ನಡೆಯಲಿದೆ. ಅಕ್ಟೋಬರ್ 18 ಮತ್ತು 19ರಂದು ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ರಾತ್ರಿ 8 ಗಂಟೆಯಿಂದ 11 ಗಂಟೆ ತನಕ ಮಿಡ್ ವೀಕ್ ಫಿನಾಲೆ ಪ್ರಸಾರ ಆಗಲಿದೆ. ಈ ಸಂಚಿಕೆಗಳಲ್ಲಿ ಹಲವು ತಿರುವುಗಳು ಎದುರಾಗಲಿವೆ. ಏನೆಲ್ಲ ಇರಲಿದೆ ಎಂಬುದನ್ನು ನೋಡಲು ವೀಕ್ಷಕರು ಕಾದಿದ್ದಾರೆ.

‘Expect The Unexpected’ ಎಂಬುದು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನ ಥೀಮ್ ಆಗಿದೆ. ಆ ಕಾರಣದಿಂದ ಹಲವು ರೋಚಕತೆ ಇರಲಿದೆ. ಮಿಡ್ ವೀಕ್ ಫಿನಾಲೆಯಲ್ಲಿ ಸಾಕಷ್ಟು ಅನಿರೀಕ್ಷಿತ ಸಂಗತಿಗಳು ಎದುರಾಗಲಿವೆ. ಸ್ಪರ್ಧಿಗಳಿಗೆ, ವೀಕ್ಷಕರಿಗೆ ಹಾಗೂ ಕಿಚ್ಚ ಸುದೀಪ್ ಅವರಿಗೆ ಕೂಡ ಮಿಡ್ ಸೀಸನ್ ಫಿನಾಲೆ ಎಂಬುದು ಹೊಸ ವಿಷಯ. ಹಾಗಾಗಿ ಕೌತುಕ ಹೆಚ್ಚಿದೆ.

ಮೂರನೇ ವಾರಕ್ಕೆ ಮಿಡ್ ಫಿನಾಲೆ ನಡೆಯುತ್ತಿದ್ದು, ಈ ಫಿನಾಲೆಯಲ್ಲಿ ಭಾರೀ ಎಲಿಮಿನೇಷನ್ ನಡೆಯಲಿದೆ. ಅಲ್ಲದೇ, ಹೊಸ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಲಿದ್ದಾರೆ. ಹೊಸ ಸ್ಪರ್ಧಿಗಳ ಆಗಮನದಿಂದ ಬಿಗ್ ಬಾಸ್ ಆಟಕ್ಕೆ ಹೊಸ ಉತ್ಸಾಹ, ಹುಮ್ಮಸ್ಸು ಹಾಗೂ ತಿರುವು ಸಿಗಲಿದೆ. ಬರುವ ಹೊಸ ಸ್ಪರ್ಧಿಗಳು ಯಾರು ಎಂಬುದನ್ನು ನೋಡಲು ವೀಕ್ಷಕರು ಕಾದಿದ್ದಾರೆ.

ಇದನ್ನೂ ಓದಿ: ಮೂರನೇ ವಾರದ ಫಿನಾಲೆಯಲ್ಲಿ ಅರ್ಧದಷ್ಟು ಮಂದಿ ಬಿಗ್ ಬಾಸ್​ನಿಂದ ಔಟ್; ಬರಲಿದೆ ಹೊಸ ಬ್ಯಾಚ್

ಕೊನೆಯ ಫಿನಾಲೆ ರೀತಿಯೇ ಮಿಡ್ ಸೀಸನ್ ಫಿನಾಲೆಯಲ್ಲಿ ಕೂಡ ವಿನ್ನರ್ ಯಾರು ಎಂಬುದನ್ನು ಘೋಷಿಸಲಾಗುತ್ತದೆ. ಗೆದ್ದವರಿಗೆ ಬಹುಮಾನ ಸಹ ಕೊಡಲಾಗುತ್ತದೆ. ಈ ಸಂಚಿಕೆಗಳಲ್ಲಿ ನೃತ್ಯ ಪ್ರದರ್ಶನ, ಹಾಸ್ಯಭರಿತ ಮಾತುಕತೆ ಇರಲಿದೆ. ಕೆಲವು ಸೆಲೆಬ್ರಿಟಿಗಳು ಸಹ ಬಿಗ್ ಬಾಸ್ ಮನೆಗೆ ಬರಲಿದ್ದಾರೆ. ಈ ಎಲ್ಲದರಿಂದ ಮಿಡ್ ಸೀಸನ್ ಫಿನಾಲೆಯಲ್ಲಿ ಭರ್ಜರಿ ಮನರಂಜನೆ ಇರಲಿದೆ. 6 ಗಂಟೆಗಳ ಕಾಲ ಮಿಡ್ ಸೀಸನ್ ಫಿನಾಲೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ