AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಲ್ಡ್ ಕಾರ್ಡ್ ವಿಷಯದಲ್ಲಿ ದೊಡ್ಡ ಟ್ವಿಸ್ಟ್ ಕೊಡಲು ರೆಡಿ ಆದ ಬಿಗ್ ಬಾಸ್

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಅನಿರೀಕ್ಷಿತ ಟ್ವಿಸ್ಟ್‌ಗಳು ಮುಂದುವರಿದಿವೆ. ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಎಂಟ್ರಿ ಕೊಟ್ಟ ರಾಜತ್ ಮತ್ತು ಚೈತ್ರಾ ಅವರನ್ನು ಈ ವಾರವೇ ಮನೆಯಿಂದ ಹೊರ ಕಳುಹಿಸುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ಕೇವಲ ಒಂದು ವಾರ ಹೆಚ್ಚುವರಿಯಾಗಿ ಉಳಿಸಿಕೊಂಡು ವೀಕ್ಷಕರಿಗೆ ಮತ್ತು ಮನೆಯ ಸದಸ್ಯರಿಗೆ ಅಚ್ಚರಿ ನೀಡಲು ಬಿಗ್ ಬಾಸ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ವೈಲ್ಡ್ ಕಾರ್ಡ್ ವಿಷಯದಲ್ಲಿ ದೊಡ್ಡ ಟ್ವಿಸ್ಟ್ ಕೊಡಲು ರೆಡಿ ಆದ ಬಿಗ್ ಬಾಸ್
ಚೈತ್ರಾ-ರಜತ್
ರಾಜೇಶ್ ದುಗ್ಗುಮನೆ
|

Updated on: Dec 03, 2025 | 8:55 AM

Share

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಯಾರೂ ಊಹಿಸದ ಟ್ವಿಸ್ಟ್​ಗಳನ್ನು ಬಿಗ್ ಬಾಸ್ ನೀಡುತ್ತಿದ್ದಾರೆ. ವೀಕ್ಷಕರ ಊಹೆಗೆ ಮೀರಿ ತಿರುವುಗಳನ್ನು ನೀಡಲಾಗುತ್ತಿದೆ. ಕಳೆದ ಸೀಸನ್​ನ ಐದು ಸ್ಪರ್ಧಿಗಳನ್ನು ಕಳೆದ ವಾರ ಕರೆಸಲಾಗಿತ್ತು. ಈ ಪೈಕಿ ರಜತ್ ಹಾಗೂ ಚೈತ್ರಾ ಅವರನ್ನು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಉಳಿಸಿಕೊಳ್ಳಲಾಗಿದೆ. ಈಗ ಬಿಗ್ ಬಾಸ್ ಮತ್ತೊಂದು ಟ್ವಿಸ್ಟ್ ಕೊಡಲು ರೆಡಿ ಆಗಿದ್ದಾರೆ ಎಂಬ ವಿಷಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ.

ರಜತ್ ಹಾಗೂ ಚೈತ್ರಾ ಅವರನ್ನು ವೈಲ್ಡ್ ಕಾರ್ಡ್ ಆಗಿ ಉಳಿಸಿಕೊಳ್ಳುವ ಬಗ್ಗೆ ಕಿಚ್ಚ ಸುದೀಪ್ ವೀಕೆಂಡ್​ನಲ್ಲಿ ಘೋಷಣೆ ಮಾಡಿದರು. ಇಬ್ಬರೂ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದು 58ನೇ ದಿನ. ಮೊದಲ ವಾರ ಸಾಕಷ್ಟು ಬಿಸಿ ಮುಟ್ಟಿಸಿದ್ದ ಇವರು ನಂತರ ಕೂಲ್ ಆದರು. ಈಗ ರಜತ್ ಹಾಗೂ ಚೈತ್ರಾ ಎಲ್ಲರ ಜೊತೆ ಬೆರೆತಿದ್ದಾರೆ. ಈಗ ಕೇಳಿ ಬರುತ್ತಿರುವ ಮಾಹಿತಿ ಏನೆಂದರೆ ಇವರು ಈ ವಾರವರೇ ಹೊರ ಬರಲಿದ್ದಾರಂತೆ.

ಹೌದು, ಸೋಶಿಯಲ್ ಮೀಡಿಯಾದಲ್ಲಿ ಹೀಗೊಂದು ಸುದ್ದಿ ಹರಿದಾಡುತ್ತಿದೆ. ಚೈತ್ರಾ ಹಾಗೂ ರಜತ್ ಈ ವಾರಾಂತ್ಯದೊಳಗೆ ಮನೆಯಿಂದ ಹೊರ ನಡೆಯುತ್ತಾರೆ ಎಂದು ಹೇಳಲಾಗುತ್ತಾ ಇದೆ. ಮನೆಯವರಿಗೆ ಚಮಕ್ ಕೊಡೋ ದೃಷ್ಟಿಯಿಂದ ಇವರನ್ನು ಒಂದು ವಾರ ಹೆಚ್ಚುವರಿಯಾಗಿ ಉಳಿಸಿಕೊಳ್ಳಲಾಗಿತ್ತು ಎಂದು ಹೇಳಲಾಗುತ್ತಾ ಇದೆ.

ರಜತ್ ಹಾಗೂ ಚೈತ್ರಾ ಮಧ್ಯೆ ಸಾಕಷ್ಟು ಸಾಮ್ಯತೆ ಇದೆ. ರಜತ್ ಹಾಗೂ ಚೈತ್ರಾ ಇಬ್ಬರ ಮೇಲೂ ಕೇಸ್ ಇದೆ. ಇನ್ನು ಜಗಳ ಎಂಬ ವಿಷಯ ಬಂದಾಗ ಇವರು ದೊಡ್ಮನೆಯಲ್ಲಿ ಎಲ್ಲರಿಗಿಂತ ಮುಂದೆ ಇರುತ್ತಿದ್ದರು. ಹೀಗಾಗಿ ದೊಡ್ಮನೆಯಲ್ಲಿ ಅವರನ್ನು ಉಳಿಸಿಕೊಳ್ಳಲಾಗಿತ್ತು.

ಇದನ್ನೂ ಓದಿ: ಬಿಗ್ ಬಾಸ್​ ಮನೆಯಲ್ಲಿದ್ದುಕೊಂಡೇ ಲಕ್ಷ ಲಕ್ಷ ಖರ್ಚು ಮಾಡಿದ ಜಾನ್ವಿ; ಸಂಭಾವನೆ ಬಗ್ಗೆಯೂ ಮಾತು

ಬಿಗ್ ಬಾಸ್ ಆಟ ಈಗಾಗಲೇ ಎರಡು ತಿಂಗಳು ಪೂರೈಸಿದೆ. ಗಿಲ್ಲಿ ನಟ ಅವರು ಎಲ್ಲರ ಫೇವರಿಟ್ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಹಲವು ರಿಯಾಲಿಟಿ ಶೋಗಳನ್ನು ಮಾಡಿದ ಅನುಭವ ಅವರಿಗೆ ಇದೆ. ಈ ಅನುಭವ ‘ಬಿಗ್ ಬಾಸ್’ ಅಲ್ಲಿ ಸಹಕಾರಿ ಆಗುತ್ತಿದೆ. ಸಿನಿಮಾ ಡೈಲಾಗ್ ಹಾಗೂ ಸಿನಿಮಾ ದೃಶ್ಯಗಳನ್ನು ರೀ ಕ್ರಿಯೇಟ್ ಮಾಡಿ ಅವರು ಎಲ್ಲರಿಗೂ ಮನರಂಜನೆ ನೀಡುತ್ತಿದ್ದಾರೆ. ‘ಸೂರ್ಯವಂಶ’, ಕೆಜಿಎಫ್’ ಮೊದಲಾದ ಡೈಲಾಗಳನ್ನು ಅವರು ದೊಡ್ಮನೆಯಲ್ಲಿ ಹೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!