AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರನ್ನರ್ ಅಪ್ ಆದರೂ ಕಡಿಮೆಯಲ್ಲ ಕರಾವಳಿ ಚಿನಕುರಳಿ ರಕ್ಷಿತಾ ಸಾಧನೆ

Bigg Boss Kannada 12: ಬಿಗ್​​ಬಾಸ್ 12ರ ಮನೆಗೆ ಒಟ್ಟು 24 ಮಂದಿ ಬಂದಿದ್ದರು. ಅವರಲ್ಲಿ ಬಹುತೇಕರು ನಟರು, ಆದರೆ ನಟನೆಯ ಸಣ್ಣ ಹಿನ್ನೆಲೆಯೂ ಇಲ್ಲದೆ, ಉಡುಪಿಯ ಹಳ್ಳಿಯೊಂದರಲ್ಲಿ ತಮಗೆ ತೋಚಿದಂತೆ ಅಡುಗೆ ವಿಡಿಯೋಗಳ ಮಾಡುತ್ತಿದ್ದ ಕನ್ನಡ ಭಾಷೆಯೂ ಸಹ ಸರಿಯಾಗಿ ಬಾರದ ಸಾಮಾನ್ಯ ಹುಡುಗಿಯೊಬ್ಬಾಕೆ ಬಿಗ್​​ಬಾಸ್​​ಗೆ ಬಂದು ಫಿನಾಲೆವರೆಗೂ ಬಂದಿರುವುದು ಸಾಮಾನ್ಯ ಸಾಧನೆಯಂತೂ ಅಲ್ಲವೇ ಅಲ್ಲ.

ರನ್ನರ್ ಅಪ್ ಆದರೂ ಕಡಿಮೆಯಲ್ಲ ಕರಾವಳಿ ಚಿನಕುರಳಿ ರಕ್ಷಿತಾ ಸಾಧನೆ
Rakshita
ಮಂಜುನಾಥ ಸಿ.
|

Updated on:Jan 18, 2026 | 11:49 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಮುಗಿದಿದೆ. ಸುದೀಪ್ ಅವರು ಈ ಸೀಸನ್​​ನ ವಿನ್ನರ್​ನ ಘೋಷಣೆ ಮಾಡಿದ್ದಾರೆ. ಬಹುತೇಕರು ಮೊದಲೇ ಊಹಿಸಿದ್ದಂತೆ ಗಿಲ್ಲಿ ನಟ ಅವರು 12ನೇ ಸೀಸನ್​​ನ ವಿನ್ನರ್ ಆಗಿದ್ದಾರೆ. ತಮ್ಮ ಹಾಸ್ಯದಿಂದ ಅವರು ಪ್ರೇಕ್ಷಕರ ಮನಸ್ಸು ಗೆದ್ದಿದ್ದರು. ಬಿಗ್​​ಬಾಸ್ 12ರ ಮನೆಗೆ ಒಟ್ಟು 24 ಮಂದಿ ಬಂದಿದ್ದರು. ಅವರಲ್ಲಿ ಬಹುತೇಕರು ನಟರು, ಆದರೆ ನಟನೆಯ ಸಣ್ಣ ಹಿನ್ನೆಲೆಯೂ ಇಲ್ಲದೆ, ಉಡುಪಿಯ ಹಳ್ಳಿಯೊಂದರಲ್ಲಿ ತಮಗೆ ತೋಚಿದಂತೆ ಅಡುಗೆ ವಿಡಿಯೋಗಳ ಮಾಡುತ್ತಿದ್ದ ಕನ್ನಡ ಭಾಷೆಯೂ ಸಹ ಸರಿಯಾಗಿ ಬಾರದ ಸಾಮಾನ್ಯ ಹುಡುಗಿಯೊಬ್ಬಾಕೆ ಬಿಗ್​​ಬಾಸ್​​ಗೆ ಬಂದು ಫಿನಾಲೆವರೆಗೂ ಬಂದಿರುವುದು ಸಾಮಾನ್ಯ ಸಾಧನೆಯಂತೂ ಅಲ್ಲವೇ ಅಲ್ಲ.

ಬಿಗ್​​ಬಾಸ್​​ ಮನೆಗೆ ಬಂದ ಮೊದಲ ದಿನವೇ ಮನೆಯಿಂದ ಎವಿಕ್ಟ್ ಆಗಿದ್ದ ರಕ್ಷಿತಾ, ಆ ನಂತರ ಮತ್ತೆ ಮನೆಗೆ ಎಂಟ್ರಿ ಕೊಟ್ಟು ಈಗ ಕೊನೆಯ ದಿನ ಮನೆಯಿಂದ ಹೊರಗೆ ಬಂದಿರುವುದು ಕಡಿಮೆ ಸಾಧನೆಯಲ್ಲ. ರಕ್ಷಿತಾ, ಆ ಮನೆಯಲ್ಲಿ ಹಲವು ರೀತಿಯ ನೋವು, ಅವಮಾನಗಳನ್ನು ಅನುಭವಿಸಿದ್ದಾರೆ. ರಕ್ಷಿತಾ, ತಮ್ಮ ಮುಗ್ಧತೆಯಿಂದ ಪ್ರೇಕ್ಷಕರ ಮನಸ್ಸು ಗೆದ್ದರೂ ಸಹ ಅಲ್ಲಿದ್ದ ಸ್ಪರ್ಧಿಗಳಿಗೆ ಅದು ಅಸಹನೀಯ ಅನಿಸಿ ಹಲವರು ರಕ್ಷಿತಾ ಮೇಲೆ ಜಗಳ ಮಾಡಿದ್ದಾರೆ.

ಇದನ್ನೂ ಓದಿ:ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ

ರಕ್ಷಿತಾರನ್ನು ಎಂಟರ್ಟೈನ್​​ಮೆಂಟ್​​ಗೆ ಬಳಸಿಕೊಂಡರು, ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವ ನೌಕರಳಂತೆ ನಡೆಸಿಕೊಂಡರು, ತಮಾಷೆ ಮಾಡಲು ಬಳಸಿಕೊಂಡರು, ಫುಟೇಜ್ ತೆಗೆದುಕೊಳ್ಳಲು ಪುಕ್ಕಟೆ ಜಗಳ ಮಾಡಲು ಪಂಚಿಂಗ್ ಬ್ಯಾಗ್​​ನಂತೆ ನಡೆಸಿಕೊಂಡರು. ರಕ್ಷಿತಾರ ಬಣ್ಣದ ಬಗ್ಗೆ ಆಡಿಕೊಳ್ಳಲಾಯ್ತು, ಸ್ಲಂ ಎಂದು ಕರೆಯಲಾಯ್ತು, ‘ಸೆಡೆ’ ಎಂದು ಬೈಯ್ಯಲಾಯ್ತು, ರಕ್ಷಿತಾರ ಹಿನ್ನೆಲೆಯನ್ನು ಟೀಕಿಸಲಾಯ್ತು, ಆಕೆ ಧರಿಸುವ ಬಟ್ಟೆಗಳನ್ನು ಟೀಕಿಸಲಾಯ್ತು ಎಲ್ಲ ಅವಮಾನಗಳನ್ನು ಎದುರಿಸಿಯೂ ರಕ್ಷಿತಾ ಫಿನಾಲೆ ವರೆಗೆ ಬಂದರು. ಮಾತ್ರವಲ್ಲ, ಘಟಾನುಘಟಿಗಳನ್ನೇ ಹಿಂದಿಕ್ಕಿ ರನ್ನರ್ ಅಪ್ ಆಗಿದ್ದಾರೆ.

ಇಡೀ ಬಿಗ್​​ಬಾಸ್ ಮನೆಯಲ್ಲಿ ಕಿರಿಯ ವ್ಯಕ್ತಿ, ಅನುಭವವೂ ಕಡಿಮೆ ಆದರೆ ಹಲವು ಸಂದರ್ಭದಲ್ಲಿ ಘನತೆಯಿಂದ ನಡೆದುಕೊಂಡಿದ್ದಾರೆ. ಘನತೆಯಿಂದ ವರ್ತಿಸಿದ್ದಾರೆ. ತಪ್ಪಿದ್ದಲ್ಲಿ ತಪ್ಪು ಎಂದಿದ್ದಾರೆ, ವಿರೋಧಿಗಳನ್ನೂ ಸಹ ಹೊಗಳಿದ್ದು ಸಹ ಇದೆ. ಯಾವ ನಾಟಕೀಯತೆಯೂ ಇಲ್ಲದೆ ಎಲ್ಲರೊಂದಿಗೆ ಬೆರೆತರು ಅವರ ಪ್ರಯಾಣ ನಿಜಕ್ಕೂ ಅಸಾಮಾನ್ಯಾಗಿತ್ತು. ಅವರು ರನ್ನರ್ ಅಪ್ ಆಗಿದ್ದರೂ ಸಹ ಅವರೇ ವಿನ್ನರ್, ‘ಗೊತ್ತಾಯ್ತಲ್ಲ’

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:45 pm, Sun, 18 January 26

Follow Us
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!