AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತಾ ಹೇಳಿದ ಆ ಮಾತನ್ನು ಯಾರೊಬ್ಬರೂ ನಂಬಲೇ ಇಲ್ಲ; ಈಗಲೂ ಇದೆ ಅನುಮಾನ

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಸೀಕ್ರೆಟ್ ರೂಂನಲ್ಲಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಮನೆಯಲ್ಲಿರುವ ಸ್ಪರ್ಧಿಗಳು ಇದನ್ನು ನಂಬಲು ಸಿದ್ಧರಿಲ್ಲ. ಒಂದು ವಾರ ಯಾರನ್ನೂ ನೋಡದೆ, ಯಾವ ವಿಡಿಯೋಗಳನ್ನೂ ತೋರಿಸದೆ ತಮ್ಮನ್ನು ಸೀಕ್ರೆಟ್ ರೂಂನಲ್ಲಿ ಇಡಲಾಗಿತ್ತು ಎಂಬ ರಕ್ಷಿತಾ ಮಾತಿಗೆ ಕಾವ್ಯಾ ಶೈವ ಸೇರಿದಂತೆ ಯಾರೊಬ್ಬರೂ ನಂಬಿಕೆ ವ್ಯಕ್ತಪಡಿಸಿಲ್ಲ.

ರಕ್ಷಿತಾ ಹೇಳಿದ ಆ ಮಾತನ್ನು ಯಾರೊಬ್ಬರೂ ನಂಬಲೇ ಇಲ್ಲ; ಈಗಲೂ ಇದೆ ಅನುಮಾನ
ರಕ್ಷಿತಾ
ರಾಜೇಶ್ ದುಗ್ಗುಮನೆ
|

Updated on:Oct 06, 2025 | 8:56 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ ಸೀಸನ್​ನಲ್ಲಿ ಸಾಕಷ್ಟು ತಿರುವುಗಳನ್ನು ಇಡಲಾಗುತ್ತಿದೆ. ಎಲ್ಲ ತಿರುವುಗಳೂ ಪ್ರೇಕ್ಷಕನಿಗೆ ಶಾಕ್​ ಎನಿಸುವ ರೀತಿಯಲ್ಲಿ ಇದೆ. ರಕ್ಷಿತಾ ಶೆಟ್ಟಿ (Rakshita Shetty) ಅವರನ್ನು ಕಳೆದ ವಾರ ಬಂದ ದಿನವೇ ಹೊರ ಹಾಕಲಾಗಿತ್ತು. ಆ ಬಳಿಕ ಅವರನ್ನು ಮತ್ತೆ ಒಳಕ್ಕೆ ಕರೆಸಿಕೊಳ್ಳಲಾಗಿದೆ. ಈಗ ರಕ್ಷಿತಾ ಶೆಟ್ಟಿ ಹೇಳಿದ ಆ ಮಾತನ್ನು ಯಾರೆಂದರೆ ಯಾರೊಬ್ಬರೂ ಕೂಡ ನಂಬಲೇ ಇಲ್ಲ.

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗಿ ಒಂದು ವಾರ ಆಗಿತ್ತು. ಈ ಅವಧಿಯಲ್ಲಿ ಅವರು ಎಲ್ಲಿದ್ದರು? ಏನು ಮಾಡುತ್ತಿದ್ದರು ಎನ್ನುವ ಕುತೂಹಲ ಮೂಡಿದೆ. ಈ ಕುತೂಹಲಕ್ಕೆ ಅವರೇ ತೆರೆ ಎಳೆದಿದ್ದಾರೆ. ‘ಇಷ್ಟು ದಿನ ನನ್ನನ್ನು ಸೀಕ್ರೆಟ್ ರೂಂನಲ್ಲಿ ಇಡಲಾಗಿತ್ತು. ನನಗೆ ಒಂದು ವಾರ ಯಾರನ್ನೂ ತೋರಿಸಿಲ್ಲ’ ಎಂದು ರಕ್ಷಿತಾ ಶೆಟ್ಟಿ ಹೇಳಿದರು.

ಈ ವಿಚಾರದಲ್ಲಿ ಮನೆಯವರಿಗೆ ನಂಬಿಕೆ ಬರಲೇ ಇಲ್ಲ. ಸಾಮಾನ್ಯವಾಗಿ ಸೀಕ್ರೆಟ್ ರೂಂನಲ್ಲಿ ಇಟ್ಟರೆ ಯಾರು ಯಾವ ರೀತಿ ಆಡುತ್ತಾ ಇದ್ದಾರೆ ಎಂಬ ವಿಡಿಯೋಗಳನ್ನು ಅವರಿಗೆ ತೋರಿಸುತ್ತಾ ಇರಲಾಗುತ್ತದೆ. ಆದರೆ, ರಕ್ಷಿತಾಗೆ ಆ ರೀತಿ ಮಾಡಿಲ್ಲವಂತೆ. ಇದನ್ನು ಸ್ವತಃ ಅವರೇ ಹೇಳಿಕೊಂಡರು. ಅವರ ಮಾತಿನ ಮೇಲೆ ಯಾರಿಗೂ ನಂಬಿಕೆ ಬರಲಿಲ್ಲ.

ಇದನ್ನೂ ಓದಿ
Image
‘ಅಮೃತಧಾರೆ’ ಧಾರಾವಾಹಿಯಲ್ಲಿ ರೋಚಕ ತಿರುವು; ಮಗಳು ಗೌತಮ್​ಗೆ ಸಿಕ್ಕೇ ಬಿಟ್ಳು
Image
ಪುನೀತ್​ಗೆ ರಚಿತಾ ಅವಮಾನ ? ನಾಲಿಗೆ ಮೇಲೆ ಹಿಡಿತ ಇರಲಿ ಎಂದ ಫ್ಯಾನ್ಸ್
Image
‘ಕಾಂತಾರ: ಚಾಪ್ಟರ್ 1’ ಚಿತ್ರದ ಭಾನುವಾರದ ಕಲೆಕ್ಷನ್ ಇಷ್ಟೊಂದಾ?
Image
‘ನೀವು ತೋರಿದ ದ್ವೇಷ ನೋಡಿ ಬೇಸರವಾಯಿತು’; ನೋವು ಹೊರ ಹಾಕಿದ ನಮ್ರತಾ ಗೌಡ

‘ರಕ್ಷಿತಾ ನೀವು ಸುಳ್ಳು ಹೇಳ್ತಾ ಇದೀರಾ. ಅಲ್ಲಿ ನಮ್ಮ ಎಪಿಸೋಡ್​ಗಳನ್ನು ನಿಮಗೆ ತೋರಿಸಲಾಗಿದೆ ಅಲ್ವ’ ಎಂದು ಕಾವ್ಯಾ ಶೈವ ಕೇಳಿದರು. ಆದರೆ, ಇಲ್ಲ ಎನ್ನುವ ಉತ್ತರ ರಕ್ಷಿತಾ ಕಡೆಯಿಂದ ಬಂತು. ‘ಮದರ್ ಪ್ರಾಮಿಸ್ ನನಗೆ ನಿಮ್ಮ ವಿಶ್ಯುವಲ್ಸ್ ತೋರಿಸಿಲ್ಲ’ ಎಂದು ರಕ್ಷಿತಾ ಸಮಜಾಯಿಶಿ ಕೊಡಲು ಬಂದರು. ಆ ಬಳಿಕ ಕಾವ್ಯಾ ಶೈವ ಅವರು, ‘ನಿಮ್ಮ ದಿನಚರಿಗಳ ವಿಡಿಯೋನ ನನಗೆ ತೋರಿಸುತ್ತಾ ಇದ್ದರು’ ಎಂದು ಹೇಳಿದರು. ಇದನ್ನು ರಕ್ಷಿತಾ ನಂಬಿಲ್ಲ.

ಇದನ್ನೂ ಓದಿ: ಮತ್ತೆ ಬಿಗ್ ಬಾಸ್​ಗೆ ಬಂದ ರಕ್ಷಿತಾ ಶೆಟ್ಟಿ ಇಷ್ಟು ದಿನ ಎಲ್ಲಿದ್ರು? ಉತ್ತರಿಸಿದ ಮಂಗಳೂರು ಹುಡುಗಿ

ಸದ್ಯ ರಕ್ಷಿತಾ ಶೆಟ್ಟಿ ಅವರು ಹೇಳಿದ ಮಾತಿನ ಮೇಲೆ ಯಾರೊಬ್ಬರಿಗೂ ನಂಬಿಕೆ ಬರಲೇ ಇಲ್ಲ. ರಕ್ಷಿತಾ ಶೆಟ್ಟಿ ಅವರು ಮುಂದಿನ ದಿನಗಳಲ್ಲಿ ದೊಡ್ಡ ದೊಡ್ಡ ಸವಾಲುಗಳನ್ನು ಎದುರಿಸಬೇಕಾದ ಪರಿಸ್ಥಿತಿ ಬಂದರೂ ಅಚ್ಚರಿ ಏನಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:54 am, Mon, 6 October 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ